ಮೈಸೂರು: ಕಿಡಿಗೇಡಿಗಳು ಬೆಂಕಿ ಹಚ್ಚಿದ ಕೃತ್ಯಕ್ಕೆ ಚಾಮುಂಡಿಬೆಟ್ಟದ ತಪ್ಪಲಿನ ಕೆಲವು ಪ್ರದೇಶ ಹೊತ್ತಿಉರಿದಿದ್ದು,ಕೆಲಕಾಲ ಆತಂಕ ನಿರ್ಮಾಣವಾಗಿತ್ತು.
ಚಾಮುಂಡಿಬೆಟ್ಟದ ತಪ್ಪಲಿನ ರಿಂಗ್ ರಸ್ತೆಯ ನಿರ್ಮಲ ಅಸ್ಪತ್ರೆಯ ಭಾಗದಿಂದ ಲಲಿತಾದ್ರಿಪುರಕ್ಕೆ ಹೋಗುವ ಮಾರ್ಗದಲ್ಲಿ ಸೋಮವಾರ ಸಂಜೆ ಏಳು ಗಂಟೆಗೆ ಯಾರೋ ಕಿಡಿಗೇಡಿಗಳು ಬೆಂಕಿ ಕಡ್ಡಿ ಕೀರಿದ್ದಾರೆ. ಸಣ್ಣದಾಗಿ ಉರಿಯತೊಡಗಿದ ಬೆಂಕಿ ಸ್ವಲ್ಪ ಕಳೆಯುತ್ತಿದ್ದಂತೆ ಜೋರಾಗಿ ವ್ಯಾಪಿಸಿದ್ದರಿಂದ ಮುನ್ನೂರು ಮೀಟರ್ ತನಕ ಹೊತ್ತಿದೆ. ತಕ್ಷಣವೇ ಸಾರ್ವಜನಿಕರು ಹಾಗೂ ದೂರದ ಮನೆಯವರು ನೋಡಿ ಅಗ್ನಿಶಾಮಕ ಠಾಣೆಗೆ ವಿಷಯಮುಟ್ಟಿಸಿದ್ದಾರೆ.
ತಕ್ಷಣವೇ ಧಾವಿಸಿದ ಸಿಬ್ಬಂದಿ ಹೊತ್ತಿ ಉರಿಯುತ್ತಿದ್ದ ಬೆಂಕಿಯನ್ನು ನಂದಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.
ಈ ಮಾರ್ಗದಲ್ಲಿ ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ವಿದ್ಯಾರ್ಥಿನಿಯೊಬ್ವರ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದ ಜಾಗಕ್ಕೆ ಹೊಂದಿಕೊಂಡ ರಸ್ತೆಯಾಗಿತ್ತು. ಈಗ ಬೆಂಕಿ ನಂದಿಸಿದ್ದು,ಯಾವುದೇ ಹಾನಿಯಾಗಿಲ್ಲ. ಬೆಂಕಿ ಹರಡಿದ್ದರ ಬಗ್ಗೆ ಸಾರ್ವಜನಿಕರೊಬ್ಬರು ವೀಡಿಯೋ ಮಾಡಿ ಆತಂಕ ವ್ಯಕ್ತಪಡಿಸಿದ್ದರು.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…