ಮೈಸೂರು ನಗರ

ಚಾಮುಂಡಿಬೆಟ್ಟದಲ್ಲಿ ಮೊದಲ ಆಷಾಢ ಶುಕ್ರವಾರದ ಪೂಜೆ ಹೇಗಿತ್ತು..?

ಮೈಸೂರು : ಅಬ್ಬಾ, ಎಲ್ಲೂ ನೋಡಿದ್ರೂ ಜನ, ಜನ.. ಚಾಮುಂಡಿಬೆಟ್ಟ ಸಂಪೂರ್ಣವಾಗಿ ಜನ ಸಾಗರದಿಂದ ತುಂಬಿ ತುಳುಕುತ್ತಿತ್ತು. ಇದೊಂದೇ ವರ್ಷ ಅಂತಲ್ಲಾ ಪ್ರತಿ ವರ್ಷವೂ ಕೂಡ ಆಷಾಢ ಶುಕ್ರವಾರಕ್ಕೆ ಚಾಮುಂಡಿಬೆಟ್ಟಕ್ಕೆ ನಾನಾ ಭಾಗದಿಂದ ಭಕ್ತಸಾಗರವೇ ಹರಿದುಬರುತ್ತದೆ.

ಮೊದಲ ಆಷಾಢ ಶುಕ್ರವಾರವಾದ ಪ್ರಯುಕ್ತ ತಾಯಿ ಚಾಮುಂಡೇಶ್ವರಿಗೆ ವಿಶೇಷವಾದ ಪೂಜೆಯಲ್ಲಿ ಸಲ್ಲಿಸಲಾಗಿದೆ. ಬೆಟ್ಟದಲ್ಲಿ ಒಂದು ರೀತಿ ಹಬ್ಬದ ವಾತಾವರಣವೇ ನಿರ್ಮಾಣವಾಗಿತ್ತು.  ಭಕ್ತರು ಸಹ ಈ ಹಬ್ಬದಲ್ಲಿ ಭಾಗವಹಿಸಿ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆದು ಪುನೀತರಾದರು.

ತಾಯಿಗೆ ಮೊದಲ ಆಷಾಢ ಶುಕ್ರವಾರದ ಪ್ರಯುಕ್ತ ಬೆಳಗಿನ ಜಾವ ೩.೩೦ಕ್ಕೆ ದೇವಸ್ಥಾನದಲ್ಲಿ ಎಲ್ಲಾ ಪುಜಾವಿಧಿವಿಧಾನಗಳು ಆರಂಭವಾಗಿದ್ದವು. ತಾಯಿಗೆ ಅಭಿಷೇಕ, ಅರ್ಚನೆ, ಅಷ್ಟೋತ್ತರ ಪೂಜೆಗಳನ್ನ ದೇವಸ್ಥಾನದ ಪ್ರಧಾನ ಅರ್ಚಕರಾದ ಶಶಿಶೇಖರ್‌ ದೀಕ್ಷಿತ್‌ ಅವರ ನೇತೃತ್ವದಲ್ಲಿ ನೆರವೇರಿಸಲಾಯಿತು. ಅಲ್ಲದೆ ಇಡೀ ದೇವಸ್ಥಾನವನ್ನು ಹೂಗಳಿಂದ ಅಲಂಕಾರ ಮಾಡಿದ್ದರಿಂದ ಅದನ್ನ ನೋಡಲು ಎರಡು ಕಣ್ಣುಗಳು ಸಾಲುತ್ತಿರಲಿಲ್ಲ. ಅಷ್ಟರಮಟ್ಟಿಗೆ ಹೂಗಳಿಂದ ದೇವಸ್ಥಾನವನ್ನು ಸಿಂಗಾರ ಮಾಡಲಾಗಿತ್ತು.

ಆಷಾಢ ಶುಕ್ರವಾರದಂದು ಬೆಟ್ಟಕ್ಕೆ ಬಂದು ತಾಯಿಯ ದರ್ಶನ ಮಾಡಿದರೆ ಒಳಿತಾಗುತ್ತದೆ ಎನ್ನುವುದು ಒಂದು ನಂಬಿಕೆ ಈಗಾಗಿಯೇ ತಾಯಿಯ ದರ್ಶನ ಪಡೆಯಲು ಸಾವಿರಾರು ಭಕ್ತರು ಬೆಟ್ಟಕ್ಕೆ ಬಂದು ಸರತಿ ಸಾಲಿನಲ್ಲಿ ನಿಂತು ಪುಷ್ಪಾಲಂಕಾರಗಳಿಂದ ಕಂಗೊಳಿಸುತ್ತಿದ್ದ ತಾಯಿ ಚಾಮುಂಡೇಶ್ವರಿಯನ್ನು ಕಣ್ತುಂಬಿಕೊಂಡು ಧನ್ಯರಾದರು.

ಅದರಲ್ಲೂ ವಿವಿಧ ಪುಷ್ಪಗಳಿಂದ ಲಕ್ಷ್ಮೀ ಅಲಂಕಾರದಲ್ಲಿ ಕಂಗೊಳಿಸುತ್ತಿದ್ದ ತಾಯಿ ಚಾಮುಂಡೇಶ್ವರಿಯ ಉತ್ಸವ ಮೂರ್ತಿಯನ್ನ ನೋಡಿ ಇಡೀ ಭಕ್ತ ಸಮೂಹವೇ ಪುನೀತರಾದರು. ಇನ್ನು ಹಲವು ಭಕ್ತರ ಬೆಟ್ಟಕ್ಕೆ ೧೦೦೧ ಮೆಟ್ಟಿಲುಗಳನ್ನ ಹತ್ತಿಕೊಂಡು ಬಂದು ತಾಯಿಯನ್ನ ನೋಡಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ್ದುಮ ಭಕ್ತರ ಮೊಗದಲ್ಲಿ ಧನ್ಯತಾ ಭಾವ ಮನೆ ಮಾಡಿತ್ತು.

ಇನ್ನು ಬೆಟ್ಟದಲ್ಲಿ ಬರುವಂತ ಭಕ್ತರಿಗೆ ಎಲ್ಲಾ ರೀತಿ ಮೂಲ ಸೌರ್ಕರ್ಯಗಳನ್ನ ಒದಗಿಸಲಾಗಿತ್ತು. ಭಕ್ತರಿಗೆ ಕುರಿಯುವ ನೀರಿನ ವ್ಯವಸ್ಥೆ, ಉಪಹಾರ, ಪ್ರಸಾದ, ವಾಹನಗಳ ನಿಲುಗಡೆ, ಶೌಚಾಲಯ ಸೇರಿದಂತೆ ಎಲ್ಲ ರೀತಿಯ ಮೂಲಭೂತ ಸೌಕರ್ಯಗಳನ್ನ ಒದಗಿಸಲಾಗಿತ್ತು.

ಅಲ್ಲದೆ ಸರತಿ ಸಾಲಿನಲ್ಲಿ ದರ್ಶನಕ್ಕೆ ಹೋಗುವ ಭಕ್ತರಿಗೆ  ಯಾವುದೇ ರೀತಿಯ ನೂಕು ನುಗ್ಗಲು ಉಂಟಾಗದಂತೆ ಬ್ಯಾರಿಕೇಡ್‌ ವ್ಯವಸ್ಥೆ ಮಾಡಿದ್ದರು. ಅಲ್ಲದೆ ಎಲ್ಲಾ ಕಡೆ ಸಿಸಿಟಿವಿ ಕ್ಯಾಮಾರಗಳನ್ನ ಅಳವಡಿಸಲಾಗಿದ್ದು, ಬಿಗಿಭದ್ರತೆಗಾಗಿ ಹೆಚ್ಚಿನ ಪೊಲೀಸರನ್ನು ಸಹ ನಿಯೋಜನೆ ಮಾಡಿದ್ದರು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಮತ್ತೆ ಬೆದರಿಕೆ ಒಡ್ಡಿದ ಟ್ರಂಪ್‌ ; ಕ್ಯಾರೆ ಎನ್ನದ ಇರಾನ್‌

ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…

2 hours ago

ಶರಣ್ಯ ಸುರಕ್ಷಿತ ; ಅಧಿಕಾರಿ, ಸಿಬ್ಬಂದಿ, ಬುಡಕಟ್ಟು ಜನರಿಗೆ ಅಭಿನಂದನೆ ಸಲ್ಲಿಸಿದ ಖಂಡ್ರೆ

ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…

2 hours ago

KSOU | ಕುಲಸಚಿವೆಯಾಗಿ ಕೆಎಎಸ್‌ ಅಧಿಕಾರಿ ಕುಸುಮಾಕುಮಾರಿ ನೇಮಕ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…

2 hours ago

ಏ.9ರವರೆಗೆ ರಾಜ್ಯಾದ್ಯಂತ ಯಲ್ಲೋ ಅಲರ್ಟ್, ಮಳೆ ಮುನ್ಸೂಚನೆ

ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…

3 hours ago

ಕಾಂತರಾಜು-ಹೆಗಡೆ ವರದಿಗಳು ಇನ್ನೂ ಸ್ಟೋರೇಜ್‌ನಲ್ಲೇ ಏಕಿದೆ? ; ಕುಮಾರಸ್ವಾಮಿ ಪ್ರಶ್ನೆ

ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…

3 hours ago

ಅಹಿಂದ ಹತ್ತಿಕ್ಕುತ್ತಿರುವ ಸಿದ್ದರಾಮಯ್ಯ : ಕುಮಾರಸ್ವಾಮಿ ಆರೋಪ

ದಾವಣಗೆರೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಮತ್ತು ಕುರ್ಚಿ ಉಳಿಸಿಕೊಳ್ಳಲು ತಮ್ಮನ್ನು ಬೆಳೆಸಿದ್ದ ಅಹಿಂದ ವರ್ಗವನ್ನೇ…

3 hours ago