ಮೈಸೂರು ನಗರ

ಫ್ಲೆಕ್ಸ್‌ ರಾಜಕಾರಣ: ನಿನ್ನೆ ಕಾಂಗ್ರೆಸ್‌, ಇಂದು ಬಿಜೆಪಿ-ಜೆಡಿಎಸ್‌ ಬ್ಯಾನರ್‌

ಮೈಸೂರು: ದೇವೇಗೌಡರ ಕುಟುಂಬದ ಭೂಕಬಳಿಯ ಪಕ್ಷಿನೋಟ ಎನ್ನುವ ಶೀರ್ಷಿಕೆಯೊಂದಿಗೆ, ಈ ಹಿಂದೆ ಬಿಜೆಪಿ‌ ಜೆಡಿಎಸ್‌ ವಿರುದ್ಧ ನೀಡಿದ್ದ ಜಾಹೀರಾತನ್ನು ಕಾಂಗ್ರೆಸ್ ದೊಡ್ಡ ಫ್ಲೆಕ್ಸ್‌ ಮೂಲಕ ನಗರದ ವಿವಿಧ ವೃತ್ತಗಳಲ್ಲಿ ಹಾಕಿ ಮೈತ್ರಿ ಪಕ್ಷಗಳಿಗೆ ಮುಜುಗರವನ್ನು ಉಂಟು ಮಾಡಿತ್ತು.

ಇದೀಗ, ಅದೇ ಮಾದರಿಯಲ್ಲಿ ಮೈತ್ರಿ ಪಕ್ಷವಾದ ಜೆಡಿಎಸ್‌ ಬಿಜೆಪಿಯು ಭ್ರಷ್ಟಕಾಂಗ್ರೆಸ್‌ ಹಗರಣಗಳ ಸರ್ಕಾರ ಎನ್ನುವ ಶಿರ್ಷಿಕೆಯೊಂದಿಗೆ ಸಮಾವೇಶ ನಡೆಯುತ್ತಿರುವ ಮಹಾರಾಜು ಕಾಲೇಜು ಮೈದಾನದ ಧ್ವಾರದಲ್ಲಿ ಫ್ಲೆಕ್ಸ್‌ ಮಾಡಿಸಿ ಹಾಕಿಸಿದೆ.

ಫೆಕ್ಸ್‌ನಲ್ಲಿ ಕಾಂಗ್ರೆಸ್‌ ಹಗರಣಗಳ ಕುರಿತು ವಿವಿಧ ಪತ್ರಿಕೆಗಳಲ್ಲಿ ಪ್ರಕಟವಾಗಿರುವ ವರದಿಗಳ ಶೀರ್ಷಿಕೆಯನ್ನು ಮುದ್ರಿಸಿ, ಇದು ಭ್ರಷ್ಟ ಕಾಂಗ್ರೆಸ್‌ನ ಬಂಡವಾಳ ಎಂದು ಪ್ರಕಟಿಸಿದೆ.

ಮೈತ್ರಿ ಪಕ್ಷಗಳ ಮೈಸೂರು ಚಲೋ ಪಾದಯಾತ್ರೆಗೆ ಕಾಂಗ್ರೆಸ್‌ ನಿನ್ನೆ ಕೌಂಟರ್‌ ನೀಡಿದೆ. ಇದೀಗ ಮೈತ್ರಿ ಪಕ್ಷಗಳು ಸಹ ಇಂದು ಕಾಂಗ್ರೆಸ್‌ ವಿರುದ್ಧ ರಣಕಹಳ ಮೊಳಗಿಸಲಿವೆ. ಮೂರು ಪಕ್ಷಗಳು ಜಿದ್ದಿಗೆ ಬಿದ್ದಂತೆ ತಮ್ಮ ತಮ್ಮ ಕಾರ್ಯಕ್ರಮಗಳ ಯಶಸ್ಸಿಗೆ ಪಣತೊಟ್ಟಿವೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಗೆ ಚಟ್ಟ ಕಟ್ಟಿದ ಪತ್ನಿ

ಸರಗೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿಯನ್ನು ಪತ್ನಿಯೇ ತನ್ನ ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವ ಘಟನೆ ಮೈಸೂರು ಜಿಲ್ಲೆ…

3 mins ago

ದೇವನೂರಿಗೆ ಆಗಮಿಸಿದ ಪಂಪ

ಅರ್ಧ ಶತಮಾನಕ್ಕೂ ಹಿಂದಿನ ಕಾಲದ ಚಿತ್ರಗಳು  ಓ.ಎಲ್.ನಾಗಭೂಷಣ ಸ್ವಾಮಿ ದೇವನೂರ ಮಹಾದೇವ ಕನ್ನಡಿಗರ ಮನಸಿನಲ್ಲಿ ಮನೆ ಮಾಡಿರುವವರು. ಒಬ್ಬೊಬ್ಬರೂ ಮಹಾದೇವರ…

24 mins ago

ದೇವನೂರಿಗೆ ಆಗಮಿಸಿದ ಪಂಪ

ದೇಮ ಎಂಬ ನೈತಿಕ ಕೈಮರ  ಸುರೇಶ ಕಂಜರ್ಪಣೆ ಅಂದಕಾಲತ್ತಿಲೇ ನಾನು ಅರಕಲಗೂಡಲ್ಲಿ ಪಾಠ ಮಾಡುತ್ತಿದ್ದಾಗ ಅಲ್ಲಿನ ದೇವಸ್ಥಾನದಲ್ಲಿ ಶಿವರಾತ್ರಿಯಂದು ನಡೆದ…

28 mins ago

ಚೆಕ್‌ಡ್ಯಾಂ ತಡೆಗೋಡೆ ಒಡೆದು ಹಾಕಿದ ಕಿಡಿಗೇಡಿಗಳು: ಕಠಿಣ ಕ್ರಮಕ್ಕೆ ಪ್ರಜ್ಞಾವಂತ ನಾಗರಿಕರ ಆಗ್ರಹ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅಂತರ್ಜಲ ಮಟ್ಟ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಮಳೆಯ ನೀರು ಸಂಗ್ರಹಿಸಲು…

46 mins ago

ಪ್ರವಾಸಿಗರ ಗಮನಕ್ಕೆ: ಬಲಮುರಿ ಮತ್ತು ಎಡಮುರಿ ತಾಣಗಳಿಗೆ ಪ್ರವೇಶ ನಿರ್ಬಂಧ

ಮಂಡ್ಯ: ಬೇಸಿಗೆ ರಜೆ ಹಾಗೂ ವೀಕೆಂಡ್‌ ಹಿನ್ನೆಲೆಯಲ್ಲಿ ಮಂಡ್ಯ ಭಾಗದ ಪ್ರವಾಸಿ ತಾಣಗಳಾದ ಬಲಮುರಿ ಮತ್ತು ಎಡಮುರಿ ತಾಣಗಳಿಗೆ ನಿಷೇಧ…

2 hours ago

ಹನೂರು| ಬೀದಿ ನಾಯಿ ದಾಳಿ: ಜಿಂಕೆ ಸಾವು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮೇವು ನೀರು ಅರಸಿ ಜಮೀನಿನತ್ತ ಬಂದಿದ್ದ ಜಿಂಕೆಯೊಂದರ ಮೇಲೆ ಬೀದಿ…

2 hours ago