Mysore
21
overcast clouds

Social Media

ಶುಕ್ರವಾರ, 07 ಆಗಸ್ಟ್ 2026
Light
Dark

ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆದ್ದ ಹಿನ್ನೆಲೆ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಹೋಳಿಗೆ ಊಟ

indira canteen

ಮೈಸೂರು: ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡ ಪಂಜಾಬ್‌ ಕಿಂಗ್ಸ್‌ ತಂಡವನ್ನು ಆರು ರನ್‌ಗಳಿಂದ ಸೋಲಿಸಿ ತಮ್ಮ ಮೊದಲ ಐಪಿಎಲ್‌ ಪ್ರಶಸ್ತಿಯನ್ನು ಎತ್ತಿಹಿಡಿದಿದೆ.

ಈ ಹಿನ್ನೆಲೆಯಲ್ಲಿ ಮೈಸೂರು ನಗರದ ಇಂದಿರಾ ಕ್ಯಾಂಟೀನ್‌ನಲ್ಲಿ ಇಂದು ಉಚಿತ ಹೋಳಿಗೆ ಊಟ ನೀಡಲಾಗುವುದು. ಆರ್‌ಸಿಬಿ ಗೆಲುವಿನ ಹಿನ್ನೆಲೆಯಲ್ಲಿ ರಾಜ್ಯದೆಲ್ಲೆಡೆ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ.

ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಸಂಭ್ರಮಾಚರಣೆ ಜೋರಾಗಿದ್ದು, ಇಂದಿರಾ ಕ್ಯಾಂಟೀನ್‌ನಲ್ಲಿ ಹೋಳಿಗೆ ಊಟ ನೀಡಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.

Tags:
error: Content is protected !!