ಮೈಸೂರು ನಗರ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಆಗಸ್ಟ್.‌21ರಂದು ದಸರಾ ಗಜಪಯಣ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆ ಸಿದ್ಧತೆ ನಡೆಸಿದ್ದು, 2 ತಿಂಗಳ ಮುಂಚಿತವಾಗಿ ಗಜಪಡೆ ಮೈಸೂರಿಗೆ ಆಗಮಿಸಲಿವೆ.

ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಗಜಪಯಣ ಆಗಸ್ಟ್‌.21ರದು ನಡೆಯಲಿದ್ದು, ಅರಣ್ಯ ಇಲಾಖೆ ಸರ್ವ ರೀತಿಯಲ್ಲೂ ಸಿದ್ಧತೆ ನಡೆಸಿದೆ.

ಸದ್ಯ ಮೈಸೂರು ದಸರಾಗಾಗಿ 18 ಆನೆಗಳನ್ನು ಅರಣ್ಯ ಇಲಾಖೆ ಗುರುತಿಸಿದ್ದು, ೨ ತಿಂಗಳ ಮುಂಚಿತವಾಗಿ ಆನೆಗಳು ಮೈಸೂರಿಗೆ ಆಗಮಿಸಲಿವೆ.

ಇನ್ನು ಆಗಸ್ಟ್.‌21ರಂದು ಗಜಪಯಣ ನಿಗದಿಯಾಗಿರುವ ಹಿನ್ನೆಲೆಯಲ್ಲಿ ನಾಲ್ಕು ಹೆಚ್ಚುವರಿ ಆನೆಗಳನ್ನು ಸಹ ಅರಣ್ಯ ಇಲಾಖೆ ಗುರುತಿಸಿದೆ.

ಈ ಬಾರಿಯೂ ಕ್ಯಾಪ್ಟನ್‌ ಅಭಿಮನ್ಯು ಅಂಬಾರಿ ಹೊತ್ತು ಸಾಗಲಿದ್ದಾನೆ. 14 ಆನೆಗಳ ಪೈಕಿ ಮೊದಲ ಹಂತದಲ್ಲಿ 9 ಆನೆಗಳು ಮೈಸೂರಿಗೆ ಆಗಮಿಸಲಿವೆ. ಬಳಿಕ ಎರಡನೇ ಹಂತದಲ್ಲಿ ಐದು ಆನೆಗಳನ್ನು ಕರೆತರಲು ತಯಾರಿ ನಡೆಸಲಾಗಿದೆ.

ಇನ್ನು ಮೊದಲ ಹಂತದಲ್ಲಿ ಕ್ಯಾಪ್ಟನ್‌ ಅಭಿಮನ್ಯು, ಭೀಮ, ವರಲಕ್ಷ್ಮೀ, ಏಕಲವ್ಯ, ಧನಂಜಯ, ರೋಹಿತ, ಗೋಪಿ, ಹಾಗೂ ಕಂಜನ್‌ ಆನೆಗಳು ಆಗಮಿಸಲಿದ್ದು, ಎರಡನೇ ಹಂತದಲ್ಲಿ ಸುಗ್ರೀವ, ಪ್ರಶಾಂತ, ಲಕ್ಷ್ಮೀ, ಮಹೇಂದ್ರ ಹಾಗೂ ಹಿರಣ್ಯ ಆನೆಗಳು ಆಗಮಿಸಲಿವೆ.

ಒಟ್ಟು 14 ಆನೆಗಳನ್ನು ವಿವಿಧ ಶಿಬಿರಗಳಿಂದ ಕರೆತರಲಾಗುತ್ತಿದ್ದು, ಮೊದಲ ತಂಡದ ಆನೆಗಳಿಗೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಆಗಸ್ಟ್.‌21ರಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬೀಳ್ಕೊಡಲಾಗುತ್ತದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹುಸಿ ಬಾಂಬ್ ಬೆದರಿಕೆ : ಮೈಸೂರಿನಲ್ಲಿ ಓರ್ವ ಬಂಧನ

ಮೈಸೂರು :  ಬಾಂಬ್ ಸ್ಪೋಟಿಸುವುದಾಗಿ ಬೆದರಿಕೆ ಸಂದೇಶಗಳನ್ನು ಕಳುಹಿಸಿ ರಾಜ್ಯದಲ್ಲಿ ಆತಂಕ ಸೃಷ್ಟಿಸುತ್ತಿದ್ದ ಓರ್ವ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.…

25 mins ago

ಇಂದಿನಿಂದ ಐಪಿಎಲ್‌ ಹವಾ ; ಬೆಂಗಳೂರಲ್ಲೇ ಉದ್ಘಾಟನಾ ಪಂದ್ಯ

ಕಳೆದ ಬಾರಿಯ ಭೀಕರ ಕಾಲ್ತುಳಿತ ಬಳಿಕ ರಂಗೇರಿದ ಕ್ರಿಕೆಟ್‌ ಬೆಂಗಳೂರು : ಜಾಗತಿಕ ಮಟ್ಟದ ಅತ್ಯಂತ ಶ್ರೀಮಂತ, ಶ್ರೇಷ್ಠ ಕ್ರಿಕೆಟ್…

3 hours ago

ಓದುಗರ ಪತ್ರ; ವಯೋಮಿತಿ ಸಡಿಲಿಕೆ ಸ್ವಾಗತಾರ್ಹ

ರಾಜ್ಯ ಸರ್ಕಾರ ಕೆಲ ತಿಂಗಳುಗಳ ಹಿಂದೆ ಒಂದನೇ ತರಗತಿ ಪ್ರವೇಶಕ್ಕೆ ಆರು ವರ್ಷಗಳ ವಯೋಮಿತಿ ನಿಗದಿ ಮಾಡಿದ ಬಗ್ಗೆ ಕೈಗೊಂಡ…

4 hours ago

ಓದುಗರ ಪತ್ರ: ಸರ್ಕಾರದ ನಡೆ ಖಂಡನೀಯ

ಹೆಚ್.ಡಿ.ಕೋಟೆ ತಾಲ್ಲೂಕಿನ ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ಹಂಪಾಪುರ ಮತ್ತು ಜಿನ್ನಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಮುಚ್ಚಲು ಹೊರಟಿರುವ ಸರ್ಕಾರದ…

4 hours ago

ಓದುಗರ ಪತ್ರ: ಐಪಿಎಲ್ ಬೇಕಿತ್ತೇ?

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವೆ ನಡೆಯುತ್ತಿರುವ ಯುದ್ಧ ೨೭ ನೇದಿನಕ್ಕೆ ಕಾಲಿಟ್ಟಿದೆ, ಸದ್ಯದ ಪರಿಸ್ಥಿತಿಯನ್ನು ಗಮನಿಸಿದರೆ ಅಮೆರಿಕ ತನ್ನ…

4 hours ago

ಅಭಿವೃದ್ಧಿ ಮತ್ತು ಸಂರಕ್ಷಣೆಯ ನಡುವೆ ಸಮತೋಲನ ಅವಶ್ಯ

ಬಿಆರ್‌ಟಿ ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲೊಂದು ಬಿಳಿಗಿರಿ ರಂಗನ ಬೆಟ್ಟ (ಬಿಆರ್‌ಟಿ) ಅರಣ್ಯವು ಕರ್ನಾಟಕದ ಪ್ರಮುಖ ಜೀವವೈವಿಧ್ಯ ಪ್ರದೇಶಗಳಲ್ಲಿ…

4 hours ago