ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ಅರಣ್ಯ ಇಲಾಖೆ ಸಿದ್ಧತೆ ನಡೆಸಿದ್ದು, 2 ತಿಂಗಳ ಮುಂಚಿತವಾಗಿ ಗಜಪಡೆ ಮೈಸೂರಿಗೆ ಆಗಮಿಸಲಿವೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಗಜಪಯಣ ಆಗಸ್ಟ್.21ರದು ನಡೆಯಲಿದ್ದು, ಅರಣ್ಯ ಇಲಾಖೆ ಸರ್ವ ರೀತಿಯಲ್ಲೂ ಸಿದ್ಧತೆ ನಡೆಸಿದೆ.
ಸದ್ಯ ಮೈಸೂರು ದಸರಾಗಾಗಿ 18 ಆನೆಗಳನ್ನು ಅರಣ್ಯ ಇಲಾಖೆ ಗುರುತಿಸಿದ್ದು, ೨ ತಿಂಗಳ ಮುಂಚಿತವಾಗಿ ಆನೆಗಳು ಮೈಸೂರಿಗೆ ಆಗಮಿಸಲಿವೆ.
ಇನ್ನು ಆಗಸ್ಟ್.21ರಂದು ಗಜಪಯಣ ನಿಗದಿಯಾಗಿರುವ ಹಿನ್ನೆಲೆಯಲ್ಲಿ ನಾಲ್ಕು ಹೆಚ್ಚುವರಿ ಆನೆಗಳನ್ನು ಸಹ ಅರಣ್ಯ ಇಲಾಖೆ ಗುರುತಿಸಿದೆ.
ಈ ಬಾರಿಯೂ ಕ್ಯಾಪ್ಟನ್ ಅಭಿಮನ್ಯು ಅಂಬಾರಿ ಹೊತ್ತು ಸಾಗಲಿದ್ದಾನೆ. 14 ಆನೆಗಳ ಪೈಕಿ ಮೊದಲ ಹಂತದಲ್ಲಿ 9 ಆನೆಗಳು ಮೈಸೂರಿಗೆ ಆಗಮಿಸಲಿವೆ. ಬಳಿಕ ಎರಡನೇ ಹಂತದಲ್ಲಿ ಐದು ಆನೆಗಳನ್ನು ಕರೆತರಲು ತಯಾರಿ ನಡೆಸಲಾಗಿದೆ.
ಇನ್ನು ಮೊದಲ ಹಂತದಲ್ಲಿ ಕ್ಯಾಪ್ಟನ್ ಅಭಿಮನ್ಯು, ಭೀಮ, ವರಲಕ್ಷ್ಮೀ, ಏಕಲವ್ಯ, ಧನಂಜಯ, ರೋಹಿತ, ಗೋಪಿ, ಹಾಗೂ ಕಂಜನ್ ಆನೆಗಳು ಆಗಮಿಸಲಿದ್ದು, ಎರಡನೇ ಹಂತದಲ್ಲಿ ಸುಗ್ರೀವ, ಪ್ರಶಾಂತ, ಲಕ್ಷ್ಮೀ, ಮಹೇಂದ್ರ ಹಾಗೂ ಹಿರಣ್ಯ ಆನೆಗಳು ಆಗಮಿಸಲಿವೆ.
ಒಟ್ಟು 14 ಆನೆಗಳನ್ನು ವಿವಿಧ ಶಿಬಿರಗಳಿಂದ ಕರೆತರಲಾಗುತ್ತಿದ್ದು, ಮೊದಲ ತಂಡದ ಆನೆಗಳಿಗೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿಯಲ್ಲಿ ಆಗಸ್ಟ್.21ರಂದು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿ ಬೀಳ್ಕೊಡಲಾಗುತ್ತದೆ.
ಮಂಡ್ಯ: ವೃದ್ಧ ಭೀಕ್ಷುಕಿಯೊಬ್ಬರು ತಾನು ಬೇಡಿ ಸಂಗ್ರಹಿಸಿಟ್ಟಿದ್ದ ಸಂಪತ್ತು ಇದೀಗ ಪರರ ಪಾಲಾಗಿರುವ ಸಂಗತಿ ಜನರನ್ನು ಅಚ್ಚರಿಗೊಳಿಸಿದೆ. ಮಂಡ್ಯ ನಗರದ…
ಪಾಂಡವಪುರ : ಜಿಲ್ಲೆಯ ಜನರ ನಿರೀಕ್ಷೆಯಂತೆ ಕೇಂದ್ರ ಸಚಿವನಾಗಿ ನನ್ನ ಅಧಿಕಾರದ ಅವಧಿಯೊಳಗೆ ಜಿಲ್ಲೆಗೊಂದು ಕೈಗಾರಿಕೆಯನ್ನು ತಂದೇ ತರುತ್ತೇವೆ ಎಂದು…
ಬೆಂಗಳೂರು : ಕರ್ನಾಟಕ ಸೇರಿದಂತೆ ದೇಶದ ಹಲವೆಡೆ ಹರಡಿದ್ದ ನಕಲಿ ಔಷಧ ಮಾರಾಟ ಜಾಲದ ಕಿಂಗ್ ಪಿನ್, ವಿದೇಶದಲ್ಲಿ ಅಡಗಿದ್ದ…
ಗೋಣಿಕೊಪ್ಪ : ಗೋಣಿಕೊಪ್ಪ ಪಟ್ಟಣದ ಮಾರುಕಟ್ಟೆ ಪ್ರದೇಶದಲ್ಲಿ ಅನಧಿಕೃತ ವಾಹನ ನಿಲುಗಡೆ, ರಸ್ತೆ ಅತಿಕ್ರಮಣ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ…
72,100 ಟನ್ ಕಬ್ಬಿಣದ ಅದಿರು ಇದ್ದ ಹಡಗು ಭುವನೇಶ್ವರ: ಒಡಿಶಾದ ಪಾರದೀಪ್ ಕರಾವಳಿಯ ಆಳ ಸಮುದ್ರದಲ್ಲಿ ಶನಿವಾರ ಭೀಕರ ನೌಕಾ…
ಬೆಂಗಳೂರು : ಕೆಪಿಎಸ್ಸಿ ಹಗರಣ ಸಂಬಂಧ ಫೋನ್ ಕರೆಗೆ ಪ್ರತಿಕ್ರಿಯಿಸದ ಹಿನ್ನೆಲೆ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ಅನುಪಸ್ಥಿತಿಯಲ್ಲಿ ಅವರ…