ಮೈಸೂರು ನಗರ

ಅರಣ್ಯ ಅಧಿಕಾರಿಗಳಿಂದಲೇ ಮೈಸೂರಿನಲ್ಲಿ ʻಮರಗಳ ಮಾರಣಹೋಮ’

ಮೈಸೂರು : ನಗರದ ಎನ್‌ಐಇ ಕಾಲೇಜು ಹಿಂಭಾಗದ ಅರಣ್ಯ ಇಲಾಖೆಯ ಶ್ರೀಗಂಧದ ಕೋಠಿ ಆವರಣದಲ್ಲಿ ಕ್ವಾರ್ಟರ್ಸ್ ಕಟ್ಟಡ ನಿರ್ಮಾಣಕ್ಕಾಗಿ ಹತ್ತಾರು ಮರಗಳನ್ನು ಅನುಮತಿಯಿಲ್ಲದೇ ಅರಣ್ಯ ಇಲಾಖೆಯ ಅಧಿಕಾರಿಗಳೇ ಮರಗಳ ಮಾರಣ ಹೋಮ ನಡೆಸಿದ್ದಾರೆ. ಈ ಕುರಿತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮಗೊಳ್ಳುವಂತೆ ಅರಣ್ಯಸಚಿವ ಈಶ್ವರ್ ಬಿ.ಖಂಡ್ರೆ ಅವರಿಗೆ ಪರಿಸರ ಹೋರಾಟಗಾರ್ತಿ ಭಾನುಮೋಹನ್ ದೂರು ಸಲ್ಲಿಸಿದ್ದಾರೆ.

ಅರಣ್ಯ ಅಧಿಕಾರಿಗಳೇ ಅರಣ್ಯ ನಾಶಕ್ಕೆ ಕೈಹಾಕಿದ್ದಾರೆ. ಇದು ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ. ಇಂತಹ ಕೆಲವು ಅಧಿಕಾರಿಗಳ ಅಮಾನವೀಯ ನಡೆಯಿಂದ ಇಲಾಖೆಗೆ ಕೆಟ್ಟ ಹೆಸರು ಬರುತ್ತದೆ. ಅಲ್ಲದೇ ಯಾವುದೇ ಅನುಮತಿಯಿಲ್ಲದೇ ಮರಗಳನ್ನು ಕತ್ತರಿಸಲಾಗಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಈ ಸ್ಥಳದಲ್ಲಿ ಹಳೆಯ ಕ್ವಾರ್ಟರ್ಸ್ ಇದ್ದು, ಅದನ್ನು ದುರಸ್ತಿ ಮಾಡಿಸದೇ, ಹೊಸ ಕಟ್ಟಡವನ್ನು ನಿರ್ಮಾಣ ಮಾಡಲು ಹೊರಟಿದ್ದಾರೆ. ಅದಕ್ಕಾಗಿ ಹತ್ತಾರು ಮರಗಳನ್ನು ಕತ್ತರಿಸಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಅಧಿಕಾರಿಗಳಿಗೆ ಸ್ವಲ್ಪವೂ ಪರಿಸರದ ಕಾಳಜಿಯಿಲ್ಲ, ಜವಾಬ್ದಾರಿಯಿಲ್ಲದಂತಾಗಿದೆ. ಸುಂದರವಾದ ಪ್ರಕೃತಿಯನ್ನು ನಾಶ ಮಾಡಿ, ಇಂಥಹ ಸ್ಥಳದಲ್ಲಿ ಕಟ್ಟಡ ನಿರ್ಮಾಣ ಅವಶ್ಯಕವಿತ್ತೇ? ಕಟ್ಟಡದ ಅವಶ್ಯಕತೆಯಿದ್ದಲ್ಲಿ ಬೇರೆಡೆ ನಿರ್ಮಾಣ ಮಾಡಬೇಕಿತ್ತು. ಅದರ ಬದಲಾಗಿ ಮರಗಳನ್ನು ನಾಶ ಮಾಡಲಾಗಿದ್ದು, ಕೂಡಲೇ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

2 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

2 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

2 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

3 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

12 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

12 hours ago