BS Yediyurappa
ಮೈಸೂರು: ನಾಡಿನ ಅಧಿದೇವತೆ ನೆಲೆಸಿರುವ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಭೇಟಿ ನೀಡಿ, ದೇವಿಯ ಮುಂದೆ ಮೊಮ್ಮಗನ ವೆಡ್ಡಿಂಗ್ ಕಾರ್ಡ್ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು.
ಮುಂದಿನ ತಿಂಗಳು ಮಾಜಿ ಸಿಎಂ ಯಡಿಯೂರಪ್ಪ ಅವರ ಮೊಮ್ಮಗನ ಮದುವೆ ನಡೆಯಲಿರುವ ಹಿನ್ನೆಲೆಯಲ್ಲಿ ಇಂದು ಯಡಿಯೂರಪ್ಪ ಅವರು ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ಮನೆಯ ಪ್ರತಿಯೊಂದು ಶುಭ ಸಮಾರಂಭಕ್ಕೂ ಮುನ್ನ ದೇವರ ದರ್ಶನ ಪಡೆಯುವ ಯಡಿಯೂರಪ್ಪ, ಇಂದು ಚಾಮುಂಡೇಶ್ವರಿ ದೇವಿಯ ಮುಂದೆ ಮೊಮ್ಮಗನ ವೆಡ್ಡಿಂಗ್ ಕಾರ್ಡ್ ಇಟ್ಟು ವಿಶೇಷ ಪೂಜೆ ಸಲ್ಲಿಸಿದರು.
ದೇವಿಯ ದರ್ಶನ ಪಡೆದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ ಇದ್ದಕ್ಕಿದ್ದ ಹಾಗೇ ತಾಯಿಯ ದರ್ಶನ ಮಾಡಬೇಕು ಅನ್ನಿಸಿತು.
ಅದಕ್ಕಾಗಿ ಚಾಮುಂಡಿ ತಾಯಿಯ ದರ್ಶನ ಪಡೆಯಲು ಬಂದಿದ್ದೇನೆ. ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದೇನೆ. ಮೊಮ್ಮಗನ ಮದುವೆ ಇರುವ ಕಾರಣಕ್ಕೆ ಸಂಕಲ್ಪ ಮಾಡಿದ್ದೇವೆ. ಈ ಸಂದರ್ಭದಲ್ಲಿ ನಾನು ಏನೂ ರಾಜಕೀಯ ಮಾತನಾಡಲ್ಲ ಎಂದರು.
ಇನ್ನು ಕನ್ನಡ ಭಾಷೆ ತಮಿಳಿನಿಂದ ಉಗಮವಾಯಿತು ಎಂಬ ಬಹುಭಾಷಾ ನಟ ಕಮಲ ಹಾಸನ್ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು, ಕಮಲಾ ಹಾಸನ್ ಹೇಳಿಕೆ ಖಂಡನೀಯ. ಎಲ್ಲರೂ ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿದ್ದಾರೆ. ಆ ರೀತಿಯ ಹೇಳಿಕೆಗಳನ್ನು ಯಾರೂ ಕೊಡಬಾರದು ಎಂದರು.
ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ…
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…