ಮೈಸೂರು: ʼಜೆಡಿಎಸ್ ಶಾಸಕರನ್ನು ಕರೆ ತರುತ್ತೇನೆʼ ಎಂಬ ಸಿ.ಪಿ.ಯೋಗೇಶ್ವರ್ ಹೇಳಿಕೆಗೆ ಮಾಜಿ ಸಚಿವ ಸಾ.ರಾ.ಮಹೇಶ್ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಚನ್ನಪಟ್ಟಣದ ಉಪಚುನಾವಣೆಯಲ್ಲಿ ಯೋಗೇಶ್ವರ್ ಅವರು ಗೆಲುವು ಸಾಧಿಸಿದ್ದಾರೆ. ಜನರ ಸೇವೆ ಮಾಡಲು ಇನ್ನು 3 ವರ್ಷ ಅವಕಾಶವಿದೆ. ಅದನ್ನು ಸದುಪಯೋಗಪಡಿಸಿಕೊಂಡು ಕ್ಷೇತ್ರದ ಅಭಿವೃದ್ದಿ ಮಾಡಲಿ ಎಂದು ಸಲಹೆ ನೀಡಿದರು.
ಕಾಂಗ್ರೆಸ್ನಲ್ಲಿ 35ಕ್ಕೂ ಹೆಚ್ಚು ಅಸಮಧಾನ ಶಾಸಕರಿದ್ದಾರೆ ಎಂಬುದು ಯೋಗೇಶ್ವರ್ ಅವರಿಗೂ ಗೊತ್ತು. ಸಿಎಂ, ಡಿಸಿಎಂ ಮುಖಾಂತರ ಆ ಅಸಮಾಧಾನಿತ ಶಾಸಕರನ್ನು ಸಮಾಧಾನ ಮಾಡುವ ಕೆಲಸವನ್ನು ಮೊದಲು ಮಾಡಿ. ನಂತರ ಜೆಡಿಎಸ್ ಶಾಸಕರ ಬಗ್ಗೆ ಮಾತನಾಡಲಿ ಎಂದು ಟಾಂಗ್ ಕೊಟ್ಟರು.
ಮೈತ್ರಿ ಸರ್ಕಾರದ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯನ್ನು ಕೆಳಗಿಳಿಸಲು ಸಹಾಯ ಮಾಡಿದ್ದು ಯಾರು ಅಂತ ಗೊತ್ತಿದೆ. ದೇವೇಗೌಡ ಹಾಗೂ ಕುಮಾರಸ್ವಾಮಿಯವರ ಅಧ್ಯಕ್ಷತೆಯಲ್ಲಿ ಪಕ್ಷದ ಶಾಸಕರು ಜೆಡಿಎಸ್ ಪರವಾಗಿ ಇದ್ದಾರೆ. ಮೊದಲು ನಿಮ್ಮ ಸರ್ಕಾರ ಉಳಿಸಿಕೊಳ್ಳುವ ಕೆಲಸ ಮಾಡಿ ಎಂದು ಕಿಡಿಕಾರಿದರು.
ಬೆಂಗಳೂರು : ಕರ್ನಾಟಕದ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಎನ್.ಸಂತೋಷ್ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರೆ ಉಂಟಾಗಿ ಕುಸಿದು ಬಿದ್ದಿದ್ದು, ಆಸ್ಪತ್ರೆಗೆ…
ಮೈಸೂರು : ಬಟ್ಟೆ ಬ್ಯಾಗ್ ಖರೀದಿಯಲ್ಲಿ ಆಗಿರುವ ಅವ್ಯವಹಾರದ ಬಗ್ಗೆ ತನಿಖೆ ನಡೆಸಲು ಹೈಕೋರ್ಟ್ ಅನುಮತಿ ನೀಡಿರುವ ಕುರಿತು ಪ್ರತಿಕ್ರಿಯಿಸಿದ…
ಬೆಂಗಳೂರು : ಮಹೇಂದ್ರ ಸಿಂಗ್ ಧೋನಿ ಅವರು ಚೆನ್ನೈ ಸೂಪರ್ ಕಿಂಗ್ಸ್ ಅಭಿಮಾನಿಗಳಲ್ಲಿ ಹೊಸ ಆಶಾಕಿರಣ ಮೂಡಿಸಿದ್ದಾರೆ. ಸ್ನಾಯು ಸೆಳೆತದಿಂದ…
ಟೆಹ್ರಾನ್ : ಇರಾನ್ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಕಳೆದ 24 ಗಂಟೆಗಳಲ್ಲಿ ಅಮೆರಿಕದ ಎರಡು F-35 ಸ್ಟೆಲ್ತ್…
ಬಾಗಲಕೋಟೆ : ಸೋಮಣ್ಣ ಬಿಜೆಪಿಯಲ್ಲಿ ಕೆಲಸವಿಲ್ಲದಿರುವ ಮಂತ್ರಿ. ಅವರಿಗೆ ಯಾವ ಕಡತವೂ ಹೋಗುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು.…
ವಾಷಿಂಗ್ಟನ್ : ಇರಾನ್ ವಿರುದ್ಧದ ಯುದ್ಧದ ನಡುವೆಯೂ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹೊಸದಾಗಿ ಸುಂಕ ಸಮರ ಆರಂಭಿಸಿದ್ದಾರೆ.…