ಮೈಸೂರು: ʼಜೆಡಿಎಸ್ ಶಾಸಕರನ್ನು ಕರೆ ತರುತ್ತೇನೆʼ ಎಂಬ ಸಿ.ಪಿ.ಯೋಗೇಶ್ವರ್ ಹೇಳಿಕೆಗೆ ಮಾಜಿ ಸಚಿವ ಸಾ.ರಾ.ಮಹೇಶ್ ತಿರುಗೇಟು ನೀಡಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಚನ್ನಪಟ್ಟಣದ ಉಪಚುನಾವಣೆಯಲ್ಲಿ ಯೋಗೇಶ್ವರ್ ಅವರು ಗೆಲುವು ಸಾಧಿಸಿದ್ದಾರೆ. ಜನರ ಸೇವೆ ಮಾಡಲು ಇನ್ನು 3 ವರ್ಷ ಅವಕಾಶವಿದೆ. ಅದನ್ನು ಸದುಪಯೋಗಪಡಿಸಿಕೊಂಡು ಕ್ಷೇತ್ರದ ಅಭಿವೃದ್ದಿ ಮಾಡಲಿ ಎಂದು ಸಲಹೆ ನೀಡಿದರು.
ಕಾಂಗ್ರೆಸ್ನಲ್ಲಿ 35ಕ್ಕೂ ಹೆಚ್ಚು ಅಸಮಧಾನ ಶಾಸಕರಿದ್ದಾರೆ ಎಂಬುದು ಯೋಗೇಶ್ವರ್ ಅವರಿಗೂ ಗೊತ್ತು. ಸಿಎಂ, ಡಿಸಿಎಂ ಮುಖಾಂತರ ಆ ಅಸಮಾಧಾನಿತ ಶಾಸಕರನ್ನು ಸಮಾಧಾನ ಮಾಡುವ ಕೆಲಸವನ್ನು ಮೊದಲು ಮಾಡಿ. ನಂತರ ಜೆಡಿಎಸ್ ಶಾಸಕರ ಬಗ್ಗೆ ಮಾತನಾಡಲಿ ಎಂದು ಟಾಂಗ್ ಕೊಟ್ಟರು.
ಮೈತ್ರಿ ಸರ್ಕಾರದ ಸಮಯದಲ್ಲಿ ಮುಖ್ಯಮಂತ್ರಿಯಾಗಿದ್ದ ಕುಮಾರಸ್ವಾಮಿಯನ್ನು ಕೆಳಗಿಳಿಸಲು ಸಹಾಯ ಮಾಡಿದ್ದು ಯಾರು ಅಂತ ಗೊತ್ತಿದೆ. ದೇವೇಗೌಡ ಹಾಗೂ ಕುಮಾರಸ್ವಾಮಿಯವರ ಅಧ್ಯಕ್ಷತೆಯಲ್ಲಿ ಪಕ್ಷದ ಶಾಸಕರು ಜೆಡಿಎಸ್ ಪರವಾಗಿ ಇದ್ದಾರೆ. ಮೊದಲು ನಿಮ್ಮ ಸರ್ಕಾರ ಉಳಿಸಿಕೊಳ್ಳುವ ಕೆಲಸ ಮಾಡಿ ಎಂದು ಕಿಡಿಕಾರಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…