ಮೈಸೂರು ನಗರ

ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್‌ ಜನಾಂದೋಲನ: ಮಾಜಿ ಸಚಿವ ಶ್ರೀರಾಮುಲು

ಮೈಸೂರು: ಗ್ಯಾರಂಟಿ ಹೆಸರಿನಲ್ಲಿ ದಲಿತ ಸಮುದಾಯಕ್ಕೆ ಕಾಂಗ್ರೆಸ್ ಮೋಸ ಮಾಡುತ್ತಿದೆ ಎಂದು ಮಾಜಿ ಸಚಿವ ಶ್ರೀರಾಮುಲು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ಯಾರಂಟಿ ಹೆಸರಿನಲ್ಲಿ ದಲಿತ ಸಮುದಾಯಕ್ಕೆ ಕಾಂಗ್ರೆಸ್ ಮೋಸ ಮಾಡುತ್ತಿದೆ. ದಲಿತರ ಹಣಕ್ಕೆ ಖನ್ನ ಹಾಕಿದೆ. ದಲಿತರ ಪರ ಎಂದು ಹೇಳಿಕೊಂಡು ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಸಾವಿರಾರು ಕೋಟಿ ದಲಿತರ ಹಣವನ್ನು ಗ್ಯಾರಂಟಿಗೆ ಬಳಸಿಕೊಂಡು ಅನ್ಯಾಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ 35 ಸಾವಿರ ಕೋಟಿ ಹಣ ಬರಬೇಕು. ಈ ಸರ್ಕಾರ ಬಂದ ನಂತರ ಈ ಸಮುದಾಯಕ್ಕೆ ಬರಬೇಕಾದ ಹಣ ಎಲ್ಲಿಗೋ ಹೋಗುತ್ತಿದೆ.?ಚುನಾವಣೆ ಗೆಲ್ಲುವ ಮುನ್ನ ರಾಜಕಾರಣ ಭಾಷಣ ಮಾಡಿದ್ರು. ಗೆದ್ದ ನಂತರ ಸರ್ಕಾರ ದಲಿತರನ್ನು ಮರೆತಿದೆ. 2023ರ ಸಾಲಿನಲ್ಲಿ 11 ಸಾವಿರ ಕೋಟಿ ದಲಿತರ ಹಣವನ್ನು ಬೇರೆ ಕಾರ್ಯಕ್ರಮಕ್ಕೆ ಬಳಸಿಕೊಂಡಿದ್ದಾರೆ. ರಾಜಕಾರಣಕ್ಕೆ ಹಣ ಬಳಕೆ ಆಗ್ತಿದೆ. ದಲಿತರಿಗೆ ಸಿಗಬೇಕಾಗಿದ್ದ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಗರಂ ಆದರು.

ಇನ್ನು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ವಿದ್ಯಾರ್ಥಿ ವೇತನ ಕೊಡಲು ಕೂಡ ಸಾಧ್ಯವಾಗ್ತಿಲ್ಲ. ನಿಗಮಗಳ ಮೂಲಕ ಜನರಿಗೆ ಸವಲತ್ತುಗಳನ್ನ ನೀಡಲು ಆಗುತ್ತಿಲ್ಲ. ಹೀಗಾಗಿ ಈ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಜನಾಂದೋಲನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ದಕ್ಷಿಣ ಭಾರತದ ಖ್ಯಾತ ನಟಿ ಬಿಂದು ಘೋಷ್‌ ನಿಧನ

ಚೆನ್ನೈ: ಕಳೆದ ಕೆಲವು ತಿಂಗಳುಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ಹಾಸ್ಯ ನಟಿ ಬಿಂದು ಘೋಷ್‌ ನಿಧನರಾಗಿದ್ದಾರೆ. ತಮಿಳು ಚಿತ್ರರಂಗದಲ್ಲಿ…

38 mins ago

ಹಾಸನ: ಸತತ ನಾಲ್ಕು ಗಂಟೆಗಳ ನಂತರ ಸೆರೆಯಾದ ಒಂಟಿಸಲಗ: ಕಾರ್ಯಾಚರಣೆ ಹೇಗಿತ್ತು ಗೊತ್ತಾ?

ಹಾಸನ: ಜಿಲ್ಲೆಯ ಬೇಲೂರು ಭಾಗದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಇಂದು ಕಾಡಾನೆಯೊಂದನ್ನು ಸೆರೆಹಿಡಿಯಲಾಗಿದೆ. ಬೇಲೂರು ಭಾಗದಲ್ಲಿ ಕಾಡಾನೆಗಳ ಉಪಟಳ ದಿನದಿಂದ…

1 hour ago

ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರ: ಛಲವಾದಿ ನಾರಾಯಣಸ್ವಾಮಿ ಕೆಂಡಾಮಂಡಲ

ಬೆಂಗಳೂರು: ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಛಲವಾದಿ ನಾರಾಯಣಸ್ವಾಮಿ ಅವರು ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಈ…

1 hour ago

ಪಾಕಿಸ್ತಾನ ಭಾರತದ ಜೊತೆ ಪರೋಕ್ಷ ಯುದ್ಧ ಮಾಡುತ್ತಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ನೆರೆಯ ಪಾಕಿಸ್ತಾನ ಭಾರತದ ಜೊತೆ ಪರೋಕ್ಷ ಯುದ್ಧ ನಡೆಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…

2 hours ago

ಎಚ್.ಡಿ.ಕೋಟೆ ಹಾಗೂ ಸರಗೂರು ತಾಲ್ಲೂಕಿನಾದ್ಯಂತ ವರ್ಷದ ಮೊದಲ ವರ್ಷಧಾರೆ

ಎಚ್.ಡಿ.ಕೋಟೆ/ಸರಗೂರು: ತಾಲ್ಲೂಕುಗಳಾದ್ಯಂತ ಇಂದು ಸಂಜೆ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಿದ್ದು, ಕಾದ ಭೂಮಿಗೆ ತಂಪೆರೆದಿದೆ. ಎಚ್.ಡಿ.ಕೋಟೆ ಹಾಗೂ ಸರಗೂರು…

3 hours ago

ಹನೂರಿನಲ್ಲಿ ಮುಂದುವರಿದ ಕಾಡಾನೆಗಳ ಉಪಟಳ: ಸೋಲಾರ್‌ ಬೇಲಿಯನ್ನೇ ನಾಶ ಮಾಡಿದ ಆನೆಗಳು

ಹನೂರು: ತಾಲ್ಲೂಕಿನಲ್ಲಿ ಆನೆಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅನ್ನದಾತರು ಕಂಗಾಲಾಗಿದ್ದಾರೆ. ಹನೂರು ತಾಲ್ಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಕಾಡಾನೆಗಳ ಹಾವಳಿ…

3 hours ago