ಮೈಸೂರು: ಗ್ಯಾರಂಟಿ ಹೆಸರಿನಲ್ಲಿ ದಲಿತ ಸಮುದಾಯಕ್ಕೆ ಕಾಂಗ್ರೆಸ್ ಮೋಸ ಮಾಡುತ್ತಿದೆ ಎಂದು ಮಾಜಿ ಸಚಿವ ಶ್ರೀರಾಮುಲು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಗ್ಯಾರಂಟಿ ಹೆಸರಿನಲ್ಲಿ ದಲಿತ ಸಮುದಾಯಕ್ಕೆ ಕಾಂಗ್ರೆಸ್ ಮೋಸ ಮಾಡುತ್ತಿದೆ. ದಲಿತರ ಹಣಕ್ಕೆ ಖನ್ನ ಹಾಕಿದೆ. ದಲಿತರ ಪರ ಎಂದು ಹೇಳಿಕೊಂಡು ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಸಾವಿರಾರು ಕೋಟಿ ದಲಿತರ ಹಣವನ್ನು ಗ್ಯಾರಂಟಿಗೆ ಬಳಸಿಕೊಂಡು ಅನ್ಯಾಯ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಇನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ 35 ಸಾವಿರ ಕೋಟಿ ಹಣ ಬರಬೇಕು. ಈ ಸರ್ಕಾರ ಬಂದ ನಂತರ ಈ ಸಮುದಾಯಕ್ಕೆ ಬರಬೇಕಾದ ಹಣ ಎಲ್ಲಿಗೋ ಹೋಗುತ್ತಿದೆ.?ಚುನಾವಣೆ ಗೆಲ್ಲುವ ಮುನ್ನ ರಾಜಕಾರಣ ಭಾಷಣ ಮಾಡಿದ್ರು. ಗೆದ್ದ ನಂತರ ಸರ್ಕಾರ ದಲಿತರನ್ನು ಮರೆತಿದೆ. 2023ರ ಸಾಲಿನಲ್ಲಿ 11 ಸಾವಿರ ಕೋಟಿ ದಲಿತರ ಹಣವನ್ನು ಬೇರೆ ಕಾರ್ಯಕ್ರಮಕ್ಕೆ ಬಳಸಿಕೊಂಡಿದ್ದಾರೆ. ರಾಜಕಾರಣಕ್ಕೆ ಹಣ ಬಳಕೆ ಆಗ್ತಿದೆ. ದಲಿತರಿಗೆ ಸಿಗಬೇಕಾಗಿದ್ದ ಸೌಲಭ್ಯಗಳು ಸಿಗುತ್ತಿಲ್ಲ ಎಂದು ಗರಂ ಆದರು.
ಇನ್ನು ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ, ವಿದ್ಯಾರ್ಥಿ ವೇತನ ಕೊಡಲು ಕೂಡ ಸಾಧ್ಯವಾಗ್ತಿಲ್ಲ. ನಿಗಮಗಳ ಮೂಲಕ ಜನರಿಗೆ ಸವಲತ್ತುಗಳನ್ನ ನೀಡಲು ಆಗುತ್ತಿಲ್ಲ. ಹೀಗಾಗಿ ಈ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ಜನಾಂದೋಲನ ಹಮ್ಮಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರು: ಬಿಡದಿ ಟೌನ್ ಶಿಪ್ ಹೆಸರಿನಲ್ಲಿ ರೈತರ ಜಮೀನು ಕಿತ್ತುಕೊಂಡು ದಂಧೆ ನಡೆಸಲು ಹೊರಟಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಮಾಜಿ…
ನವೀನ್ ಕುಮಾರ್: ಪಿರಿಯಾಪಟ್ಟಣ ತಾಲ್ಲೂಕು ವರದಿಗಾರರು ಪಿರಿಯಾಪಟ್ಟಣ: ಸಿಡಿಲು ಬಡಿದು ಎರಡು ಹಸುಗಳು ಹಾಗೂ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಇಂದು ಬಾದಾಮಿ ಅಮಾವಾಸ್ಯೆ ಪ್ರಯುಕ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಬರಪೀಡಿತ ಜಿಲ್ಲೆ ಎಂದು ಘೋಷಿಸಬೇಕೆಂದು ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ…
ಬೆಂಗಳೂರು: ಕೇಂದ್ರ ಸರಕಾರದ ಉದ್ದೇಶಿತ 'ಒಂದು ರಾಷ್ಟ್ರ ಒಂದು ಚುನಾವಣೆ' ಪ್ರಸ್ತಾವನೆಯನ್ನು ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ ಕೆ…
ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಅವರು ತಮ್ಮ ತಪ್ಪನ್ನು ತಿದ್ದಿಕೊಂಡು ಪಕ್ಷದಲ್ಲೇ ಉಳಿದರೇ ನಮ್ಮ ಅಭ್ಯಂತರವಿಲ್ಲ ಎಂದು ಮಾಜಿ ಶಾಸಕ ಸಾ.ರಾ.ಮಹೇಶ್…