ಮೈಸೂರು ನಗರ

ರಾಹುಲ್‌ ಗಾಂಧಿ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ಕೆಂಡಾಮಂಡಲ

ಮೈಸೂರು: ಡಿಗ್ರಿ, ಮಾಸ್ಟರ್‌ ಡಿಗ್ರಿ ಹಾಗೂ ಓದುವ ಹವ್ಯಾಸ ಇದ್ದರೆ ಮಾತ್ರ ಜ್ಞಾನ ಬರುತ್ತದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧ ಮಾಜಿ ಸಂಸದ ಪ್ರತಾಪ್‌ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಆಪರೇಷನ್‌ ಸಿಂಧೂರ್‌ ವೇಳೆ ನಮ್ಮ ವಿಮಾನ ಎಷ್ಟು ನಾಶವಾಗಿವೆ ಎಂಬ ರಾಹುಲ್‌ ಗಾಂಧಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಾಪ್‌ ಸಿಂಹ ಅವರು, 56 ದೇಶಗಳ ಪೈಕಿ ಎಷ್ಟು ದೇಶಗಳು ಭಾರತಕ್ಕೆ ಬೆಂಬಲ ನೀಡಿವೆ ಎಂದು ಕಾಂಗ್ರೆಸ್‌ನವರಿಗೆ ಗೊತ್ತಾ ಎಂದು ಪ್ರಶ್ನಿಸಿದ ಅವರು, ಡಿಗ್ರಿ,‌ ಮಾಸ್ಟರ್‌ಡಿಗ್ರಿ, ಓದುವ ಹವ್ಯಾಸ ಇದ್ರೆ ಎಲ್ಲರಿಗೂ ಜ್ಞಾನ ಇರುತ್ತದೆ. ಆದ್ರೆ, ಅವರಿಗೆ ಇದೆಲ್ಲ‌ ಎಲ್ಲಿಂದ ಬರುತ್ತೆ ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.

ಇದನ್ನೂ ಓದಿ:- ಪಾಕಿಸ್ತಾನದ ರಾಷ್ಟ್ರಪಿತ ಇಂಡಿಯನ್ ನ್ಯಾಷನಲ್‌ ಕಾಂಗ್ರೆಸ್: ಮಾಜಿ ಸಂಸದ ಪ್ರತಾಪ್‌ ಸಿಂಹ

ಇನ್ನು ರಾಹುಲ್ ಗಾಂಧಿ ನಡತೆ ನೋಡಿದರೆ ನನಗೆ ಗೊತ್ತಾಗುತ್ತಿಲ್ಲ. ಡೋಕ್ಲಾಮ್ ಘಟನೆ ಆದಾಗಲೂ ವಿವರಣೆ ಕೇಳಿದ್ರಿ. ಆಪರೇಷನ್ ಸಿಂಧೂರ್ ಯಶಸ್ವಿಯಾಗಿರುವಾಗ ಈ‌ ಥರ ಮಾತನಾಡುವುದು ಎಷ್ಟು‌ ಸರಿ? ಈ ಆಪರೇಷನ್ ಸಿಂಧೂರ್‌ ವೇಳೆ ನಮ್ಮದು ಎಷ್ಟು‌ ವಿಮಾನ ಹೋಗಿದೆ? ನೀವೇನು ಚೈನೀಸ್ ಏಜೆಂಟಾ? ಪಾಕಿಸ್ತಾನದ ಏಜೆಂಟಾ? ಜ್ಯೋತಿ ಮಲ್ಹೋತ್ರಾ ಥರ ನೀವು ಆಗಿದ್ದೀರಾ ಎಂದು ಕಿಡಿಕಾರಿದರು.

ಆಂದೋಲನ ಡೆಸ್ಕ್

Recent Posts

80ನೇ ಸ್ವಾತಂತ್ರ್ಯೋತ್ಸವದ ಸಂಭ್ರಮ: ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ…

1 hour ago

ಓದುಗರ ಪತ್ರ: ಮಹಿಳಾ ಸಿಬ್ಬಂದಿ ಲಂಚದ ಮಸಿ ಅಂಟಿಸಿಕೊಳ್ಳದಂತೆ ಎಚ್ಚರ ವಹಿಸಬೇಕು

ಪ್ರಾಮಾಣಿಕತೆ, ದಕ್ಷತೆ ವಿಷಯ ಬಂದಾಗ ಹೆಂಗಸರಿಗೆ ಸಿಗುವ ‘ಅಂಕ’ ಸ್ವಲ್ಪ ಹೆಚ್ಚೆ ಎಂಬ ಭಾವನೆ ಈ ಹಿಂದಿನಿಂದಲೂ ಇದೆ. ಅದೇ…

1 hour ago

ಓದುಗರ ಪತ್ರ: ಅಡಕೆ ಬೆಳೆಗಾರರ ಹಿತವೂ ಮುಖ್ಯವಲ್ಲವೇ?

ರಾಜ್ಯ ಸರ್ಕಾರವು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಗುಟ್ಕಾ ಹಾಗೂ ಪಾನ್ ಮಸಾಲಾ ಉತ್ಪನ್ನಗಳ ತಯಾರಿಕೆ ಮತ್ತು ಮಾರಾಟದ ಮೇಲೆ ಒಂದು…

1 hour ago

ಓದುಗರ ಪತ್ರ: ಈ ಬಾರಿಯ ದಸರಾ ಉದ್ಘಾಟನೆಗೆ ಹೆಚ್.ಡಿ.ದೇವೇಗೌಡರನ್ನು ಆಯ್ಕೆಮಾಡಲಿ

ಪ್ರತಿ ವರ್ಷ ವಿಶ್ವ ವಿಖ್ಯಾತ ನಾಡಹಬ್ಬ ದಸರಾ ಬಹು ವಿಜೃಂಭಣೆಯಿಂದ ಮೈಸೂರಿನಲ್ಲಿ ಹತ್ತು ದಿನಗಳ ಕಾಲ ನಡೆಯುತ್ತದೆ. ಈ ಕಾರ್ಯಕ್ರಮಕ್ಕೆ…

1 hour ago

ಮೈಸೂರು ಸ್ವಚ್ಛವಾಗಿಡಲು ಜನರಿಗೆ ಕೆಲ ಅಭ್ಯಾಸ ಅಗತ್ಯ

ಟಿ.ಕೆ.ಹರೀಶ್ ಮನೆ ಮುಂದಿನ ರಸ್ತೆಯ ಕಸ ವಿಲೇವಾರಿಗೆ ನಾಗರಿಕರು ಜಾಗೃತರಾಗಬೇಕು ಮೈಸೂರು ಎಂದರೆ ಕೇವಲ ಒಂದು ನಗರವಲ್ಲ. ಅದು ಕರ್ನಾಟಕದ…

1 hour ago

ರೈಲ್ವೆ ಕೆಳಸೇತುವೆ ಶಿಥಿಲ

ಎಸ್.ಎಸ್.ಭಟ್ ನಂ.ಗೂಡು: ಕಳಚಿ ಬೀಳುತ್ತಿದೆ ಸೀಲಿಂಗ್ ಕಾಂಕ್ರೀಟ್; ವಾಹನ ಸವಾರರಲ್ಲಿ ಆತಂಕ  ನಂಜನಗೂಡು: ನಗರದ ರೈಲು ನಿಲ್ದಾಣಕ್ಕೆ ತಾಗಿದಂತೆ ಮಹಾತ್ಮ…

2 hours ago