prathap simha
ಮೈಸೂರು: ಡಿಗ್ರಿ, ಮಾಸ್ಟರ್ ಡಿಗ್ರಿ ಹಾಗೂ ಓದುವ ಹವ್ಯಾಸ ಇದ್ದರೆ ಮಾತ್ರ ಜ್ಞಾನ ಬರುತ್ತದೆ ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಮಾಜಿ ಸಂಸದ ಪ್ರತಾಪ್ ಸಿಂಹ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಆಪರೇಷನ್ ಸಿಂಧೂರ್ ವೇಳೆ ನಮ್ಮ ವಿಮಾನ ಎಷ್ಟು ನಾಶವಾಗಿವೆ ಎಂಬ ರಾಹುಲ್ ಗಾಂಧಿ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಪ್ರತಾಪ್ ಸಿಂಹ ಅವರು, 56 ದೇಶಗಳ ಪೈಕಿ ಎಷ್ಟು ದೇಶಗಳು ಭಾರತಕ್ಕೆ ಬೆಂಬಲ ನೀಡಿವೆ ಎಂದು ಕಾಂಗ್ರೆಸ್ನವರಿಗೆ ಗೊತ್ತಾ ಎಂದು ಪ್ರಶ್ನಿಸಿದ ಅವರು, ಡಿಗ್ರಿ, ಮಾಸ್ಟರ್ಡಿಗ್ರಿ, ಓದುವ ಹವ್ಯಾಸ ಇದ್ರೆ ಎಲ್ಲರಿಗೂ ಜ್ಞಾನ ಇರುತ್ತದೆ. ಆದ್ರೆ, ಅವರಿಗೆ ಇದೆಲ್ಲ ಎಲ್ಲಿಂದ ಬರುತ್ತೆ ಎಂದು ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:- ಪಾಕಿಸ್ತಾನದ ರಾಷ್ಟ್ರಪಿತ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್: ಮಾಜಿ ಸಂಸದ ಪ್ರತಾಪ್ ಸಿಂಹ
ಇನ್ನು ರಾಹುಲ್ ಗಾಂಧಿ ನಡತೆ ನೋಡಿದರೆ ನನಗೆ ಗೊತ್ತಾಗುತ್ತಿಲ್ಲ. ಡೋಕ್ಲಾಮ್ ಘಟನೆ ಆದಾಗಲೂ ವಿವರಣೆ ಕೇಳಿದ್ರಿ. ಆಪರೇಷನ್ ಸಿಂಧೂರ್ ಯಶಸ್ವಿಯಾಗಿರುವಾಗ ಈ ಥರ ಮಾತನಾಡುವುದು ಎಷ್ಟು ಸರಿ? ಈ ಆಪರೇಷನ್ ಸಿಂಧೂರ್ ವೇಳೆ ನಮ್ಮದು ಎಷ್ಟು ವಿಮಾನ ಹೋಗಿದೆ? ನೀವೇನು ಚೈನೀಸ್ ಏಜೆಂಟಾ? ಪಾಕಿಸ್ತಾನದ ಏಜೆಂಟಾ? ಜ್ಯೋತಿ ಮಲ್ಹೋತ್ರಾ ಥರ ನೀವು ಆಗಿದ್ದೀರಾ ಎಂದು ಕಿಡಿಕಾರಿದರು.
ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…
ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…
ಎಚ್.ಎಸ್.ದಿನೇಶ್ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…
ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…