ಮೈಸೂರು ನಗರ

RSS ವಿಷ ಸರ್ಪ ಎಂಬ ಖರ್ಗೆ ಹೇಳಿಕೆ ವಿಚಾರ: ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ

ಮೈಸೂರು: RSS ವಿಷ ಸರ್ಪ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್‌ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದು, ಖರ್ಗೆಗೆ ಹುಚ್ಚು ಹಿಡಿದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರಿಗೆ RSS ಬಗ್ಗೆ ಮಾತನಾಡುವುದಿಲ್ಲ ಅಂದರೆ ತಿಂದ ಅನ್ನ ಜೀರ್ಣ ಆಗುವುದಿಲ್ಲ. ರಾಷ್ಟೀಯ ಪಕ್ಷದ ಅಧ್ಯಕ್ಷರಾಗಿ ಪ್ರಚೋದನಕಾರಿ ಭಾಷಣ ಮಾಡಿದ್ದೀರಾ. RSS ಕೊಲ್ಲಿ ಎಂದು ದೇಶದಲ್ಲಿರುವ 20% ಮುಸಲ್ಮಾನರಿಗೆ ಪ್ರಚೋದನೆ ಮಾಡ್ತಿದ್ದಿರಲ್ಲ ಏನೂ ಅರ್ಥ ಇದು. ದೇಶದಲ್ಲಿ ನೀವು ಕೋಮು ಗಲಭೆ ಸೃಷ್ಟಿ ಮಾಡುತ್ತಿದ್ದೀರಾ. RSS ಬಿಜೆಪಿಯನ್ನ ವಿಷಸರ್ಪಕ್ಕೆ ಹೋಲಿಸಿದ್ರೆ ಅದನ್ನ ಅಧಿಕಾರಕ್ಕೆ ತಂದಿದ್ದು ಹಿಂದೂಗಳೇ. ನೀವು ಹಿಂದೂಗಳನ್ನ ವಿಷ ಸರ್ಪ ಅಂತ ಹೇಳಿದ್ದೀರಾ. ನೀವು ಮುಸ್ಲಿಂ ಲೀಗ್ ನ ಅಧ್ಯಕ್ಷ ತರ ಮಾತನಾಡುತ್ತಿದ್ದೀರಾ. ನಿಮ್ಮ ಬಾಯಲ್ಲಿ ಇಂಥಹ ಮಾತುಗಳು ಬರಬಾರದು. ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವ್ರು ಮಾತ್ರ ಮುಸ್ಲಿಂ ಓಲೈಕೆ ಮಾಡಿಕೊಳ್ಳಲು ಮಾತನಾಡುತ್ತಾರೆ ಅನ್ಕೊಂಡಿದ್ದೆ. ಆದ್ರೆ ನೀವು ಎಗ್ಗಿಲ್ಲದೆ ಮಾತನಾಡುತ್ತಿದ್ದೀರಾ. ನಿಮಗೆ ಹೋಲಿಸಿದ್ದಾರೆ ಸಿದ್ದರಾಮಯ್ಯ ಪರವಾಗಿಲ್ಲ. ಆದ್ರೆ ನೀವು ಕೊಲ್ಲಿ ಎಂದು ಹೇಳಿಕೆ ಕೊಟ್ಟಿದ್ದೀರಾ ಕಾಂಗ್ರೆಸ್ ಮುಸ್ಲಿಂ ಲೀಗ್ ಆಗಿ ಹೋಗ್ತಿದೆ. ಮಗ ಮುಖ್ಯಮಂತ್ರಿ ಆಗಲಿ ಎಂದು ಈಗೆಲ್ಲ ಮಾತನಾಡುತ್ತಿದ್ದೀರ. ನಿಮ್ಮ ಮೇಲೆ ನಿಮಗೆ ನಾಚಿಕೆ ಆಗಬೇಕು. ದೇಶದ ಭದ್ರತೆ ಮರೆತು ಮುಸಲ್ಮಾನರನ್ನ ಪ್ರಚೋದಿಸುತ್ತಿದ್ದೀರಾ. ನೀವು 21ನೇ ಶತಮಾನದ ಮೊಹಮದ್ ಅಲಿ ಜಿನ್ನಾ ಅಂದ್ರೆ ತಪ್ಪಾಗಲಾರದು. ಇನ್ನೊಂದು ಜಿನ್ನಾನ ಪ್ರತಿರೂಪದಂತೆ ಮಾತನಾಡುತ್ತಿದ್ದೀರಾ. ಖರ್ಗೆ ಅವರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು. ಸಂವಿಧಾನದಲ್ಲಿ ಪ್ರಚೋದನಾಕಾರಿ ಭಾಷಣ ಮಾಡುವಂತಿಲ್ಲ ಅಂತ ಇದೆ. ಆದ್ರೆ ಇವ್ರು ಕೊಲ್ಲಿ ಎಂದು ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಅಸಂಘಟಿತ ಕಾರ್ಮಿಕರಿಗೆ ಜೀವನ ಭದ್ರತೆ ಕಲ್ಪಿಸಿ

ದೇಶದ ಸಾವಿರಾರು ಮಂದಿ ಅಸಂಘಟಿತ ಕಾರ್ಮಿಕರು ಹೊಟ್ಟೆಪಾಡಿಗಾಗಿ ಮಾಡುವ ಉದ್ಯೋಗವೇ ಅವರ ಜೀವಕ್ಕೆ ಮುಳುವಾಗುತ್ತಿದೆ. ಭಾನುವಾರ ಉತ್ತರ ಕನ್ನಡ ಜಿಲ್ಲೆಯ…

1 hour ago

ಓದುಗರ ಪತ್ರ: ರೌಂಡ್ ಕ್ಯಾಂಟೀನ್ ಶೀಘ್ರ ಪುನರಾರಂಭವಾಗಲಿ

ಮೈಸೂರಿನ ಮಾನಸ ಗಂಗೋತ್ರಿಯ ರೌಂಡ್ ಕ್ಯಾಂಟೀನ್ ಕಳೆದ ೫೦ ವರ್ಷಗಳಿಂದ ವಿದ್ಯಾರ್ಥಿಗಳನ್ನು, ಬೋಧಕ -ಬೋಧಕೇತರ ಸಿಬ್ಬಂದಿಗಳನ್ನು ಭಾವನಾತ್ಮಕವಾಗಿ ಬೆಸೆದುಕೊಂಡಿದೆ. ಇದು…

1 hour ago

ಓದುಗರ ಪತ್ರ: ದೇವನೂರರ ಸಲಹೆಗಳು ಅನುಷ್ಠಾನಗೊಳ್ಳಲಿ

ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಕೆ.ಪಿ.ಎಸ್. ಶಾಲೆಗಳ ರೂಪರೇಷೆ ಹಾಗೂ ಸರ್ಕಾರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಅಗತ್ಯವಿರುವ…

1 hour ago

ಓದುಗರ ಪತ್ರ: ಮಹಿಳೆಯರಿಗೂ ಪ್ರಾತಿನಿಧ್ಯ ದೊರಕಲಿ

ಇತ್ತೀಚಿನ ದಿನಗಳಲ್ಲಿ ನಡೆಯುವ ಸಾರ್ವಜನಿಕ ಸಭೆ ಸಮಾರಂಭಗಳು, ವಿಶ್ವವಿದ್ಯಾನಿಲಯ, ಶಾಲಾ ಕಾಲೇಜು ಮೊದಲಾದ ಕಡೆ ನಡೆಯುವ ಚರ್ಚಾಗೋಷ್ಠಿ , ವಿಚಾರಸಂಕಿರಣಗಳಲ್ಲಿ…

1 hour ago

ಇಂಧನ ಬೆಲೆ ಏರಿಕೆ-ಮೊಸಳೆ ಬಂತು ಮೊಸಳೆ ಕಥೆ!

ರಾಜಾರಾಂ ತಲ್ಲೂರು ಇಂದು ದೇಶ ಅನುಭವಿಸುತ್ತಿರುವ ತೈಲ ಶಾಕ್‌ಗೆ ಸರ್ಕಾರದ ಅನಧಿಕೃತ ಹಸ್ತಕ್ಷೇಪ ಕಾರಣ ಸುವ್ಯವಸ್ಥೆಗೆಂದು ರೂಪಿಸಲಾದ ನಿಯಮಗಳನ್ನು, ಆ…

1 hour ago

‘ಬೇಡು ಹಬ್ಬದ ಹೆಸರಿನಲ್ಲಿ ತೊಂದರೆ ನೀಡಿದಲ್ಲಿ ಕಾನೂನು ಕ್ರಮ’

ನವೀನ್ ಡಿಸೋಜ ಕಂಡ ಕಂಡವರನ್ನು ನಿಂದಿಸಿ, ಹಣ ಸಂಗ್ರಹಿಸುವ ವಿಭಿನ್ನ ಹಬ್ಬ; ಕಾನೂನು ಪಾಲಿಸಲು ಪೊಲೀಸ್ ಇಲಾಖೆ ಸೂಚನೆ  ಮಡಿಕೇರಿ: ಅಶ್ಲೀಲ…

1 hour ago