ಮೈಸೂರು: RSS ವಿಷ ಸರ್ಪ ಎಂಬ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದು, ಖರ್ಗೆಗೆ ಹುಚ್ಚು ಹಿಡಿದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಲ್ಲಿಕಾರ್ಜುನ ಖರ್ಗೆ ಅವರಿಗೆ RSS ಬಗ್ಗೆ ಮಾತನಾಡುವುದಿಲ್ಲ ಅಂದರೆ ತಿಂದ ಅನ್ನ ಜೀರ್ಣ ಆಗುವುದಿಲ್ಲ. ರಾಷ್ಟೀಯ ಪಕ್ಷದ ಅಧ್ಯಕ್ಷರಾಗಿ ಪ್ರಚೋದನಕಾರಿ ಭಾಷಣ ಮಾಡಿದ್ದೀರಾ. RSS ಕೊಲ್ಲಿ ಎಂದು ದೇಶದಲ್ಲಿರುವ 20% ಮುಸಲ್ಮಾನರಿಗೆ ಪ್ರಚೋದನೆ ಮಾಡ್ತಿದ್ದಿರಲ್ಲ ಏನೂ ಅರ್ಥ ಇದು. ದೇಶದಲ್ಲಿ ನೀವು ಕೋಮು ಗಲಭೆ ಸೃಷ್ಟಿ ಮಾಡುತ್ತಿದ್ದೀರಾ. RSS ಬಿಜೆಪಿಯನ್ನ ವಿಷಸರ್ಪಕ್ಕೆ ಹೋಲಿಸಿದ್ರೆ ಅದನ್ನ ಅಧಿಕಾರಕ್ಕೆ ತಂದಿದ್ದು ಹಿಂದೂಗಳೇ. ನೀವು ಹಿಂದೂಗಳನ್ನ ವಿಷ ಸರ್ಪ ಅಂತ ಹೇಳಿದ್ದೀರಾ. ನೀವು ಮುಸ್ಲಿಂ ಲೀಗ್ ನ ಅಧ್ಯಕ್ಷ ತರ ಮಾತನಾಡುತ್ತಿದ್ದೀರಾ. ನಿಮ್ಮ ಬಾಯಲ್ಲಿ ಇಂಥಹ ಮಾತುಗಳು ಬರಬಾರದು. ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವ್ರು ಮಾತ್ರ ಮುಸ್ಲಿಂ ಓಲೈಕೆ ಮಾಡಿಕೊಳ್ಳಲು ಮಾತನಾಡುತ್ತಾರೆ ಅನ್ಕೊಂಡಿದ್ದೆ. ಆದ್ರೆ ನೀವು ಎಗ್ಗಿಲ್ಲದೆ ಮಾತನಾಡುತ್ತಿದ್ದೀರಾ. ನಿಮಗೆ ಹೋಲಿಸಿದ್ದಾರೆ ಸಿದ್ದರಾಮಯ್ಯ ಪರವಾಗಿಲ್ಲ. ಆದ್ರೆ ನೀವು ಕೊಲ್ಲಿ ಎಂದು ಹೇಳಿಕೆ ಕೊಟ್ಟಿದ್ದೀರಾ ಕಾಂಗ್ರೆಸ್ ಮುಸ್ಲಿಂ ಲೀಗ್ ಆಗಿ ಹೋಗ್ತಿದೆ. ಮಗ ಮುಖ್ಯಮಂತ್ರಿ ಆಗಲಿ ಎಂದು ಈಗೆಲ್ಲ ಮಾತನಾಡುತ್ತಿದ್ದೀರ. ನಿಮ್ಮ ಮೇಲೆ ನಿಮಗೆ ನಾಚಿಕೆ ಆಗಬೇಕು. ದೇಶದ ಭದ್ರತೆ ಮರೆತು ಮುಸಲ್ಮಾನರನ್ನ ಪ್ರಚೋದಿಸುತ್ತಿದ್ದೀರಾ. ನೀವು 21ನೇ ಶತಮಾನದ ಮೊಹಮದ್ ಅಲಿ ಜಿನ್ನಾ ಅಂದ್ರೆ ತಪ್ಪಾಗಲಾರದು. ಇನ್ನೊಂದು ಜಿನ್ನಾನ ಪ್ರತಿರೂಪದಂತೆ ಮಾತನಾಡುತ್ತಿದ್ದೀರಾ. ಖರ್ಗೆ ಅವರ ವಿರುದ್ಧ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ತೆಗೆದುಕೊಳ್ಳಬೇಕು. ಸಂವಿಧಾನದಲ್ಲಿ ಪ್ರಚೋದನಾಕಾರಿ ಭಾಷಣ ಮಾಡುವಂತಿಲ್ಲ ಅಂತ ಇದೆ. ಆದ್ರೆ ಇವ್ರು ಕೊಲ್ಲಿ ಎಂದು ಹೇಳಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಕೊಡಗು: ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 37 ಮಿ.ಮೀ. ಮಳೆಯಾಗಿದೆ. ಕಳೆದ…
ಮಡಿಕೇರಿ: ಹಾರಂಗಿ ಜಲಾಶಯದಲ್ಲಿ ನೀರಿನ ಮಟ್ಟ ಗರಿಷ್ಠ ಮಟ್ಟಕ್ಕೆ ತಲುಪಿದೆ. ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳಾಗಿದ್ದು, ಇಂದು 2,858.45…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರದಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿಯ, ಅಂದರೆ CWRCಯ ಶಿಫಾರಸನ್ನು ಕಾವೇರಿ ನೀರು…
ಭವಿಷ್ಯದ ಬೆಳಕಾಗಲಿ! ಎಲ್ಲರ ಒಳಗೊಳ್ಳುವ ಎಲ್ಲರ ಹಿತ ಅಭ್ಯುದಯದ ಹೊಸ ದೇಶ ಕಟ್ಟುವುದಾಗಿ ಗುಡುಗುತಿದೆ ಜೆನ್ ಝೀ ಪಡೆ! ಈ…
ತಿರುಪತಿಯ ಮಾದರಿಯಲ್ಲಿ ಮೈಸೂರಿನ ಚಾಮುಂಡಿಬೆಟ್ಟಕ್ಕೂ ನೋ -ಫ್ಲೈಝೋನ್ ಘೋಷಣೆಗೆ ಗಂಭೀರವಾಗಿ ಪರಿಶೀಲಿಸುವಂತೆ ಸಂಸದ ಯದುವೀರ್ ಅವರು ಕೇಂದ್ರ ನಾಗರಿಕ ವಿಮಾನಯಾನ…
ಈ ವರ್ಷದ ನಾಡ ಹಬ್ಬ ದಸರಾದಲ್ಲಿ ನಡೆಯುವ ಕವಿಗೋಷ್ಠಿಗೆ, ಕವಿಗೋಷ್ಠಿಯ ಉಪಸಮಿತಿಯವರು ಅರ್ಜಿ ಸಲ್ಲಿಸಲು ತಿಳಿಸಿದ್ದಾರೆ. ಪ್ರಧಾನ ಕವಿಗೋಷ್ಠಿ, ಯುವ…