ಮೈಸೂರು: ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ರೆ, ನಾನು ಕಾಂಗ್ರೆಸ್ ಸೇರುತ್ತೇನೆ ಎಂದರ್ಥವಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದಾರೆ.
ಕೆಆರ್ಎಸ್ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ನಾನು ಒಮ್ಮೆ ಕಾರ್ಪೊರೇಷನ್ನಲ್ಲಿ ಕೇಳಿದಾಗ ಆ ರಸ್ತೆಗೆ ಹೆಸರಿಲ್ಲ ಅಂದ್ರು. ಹಾಗಾಗಿ ಸಿದ್ದರಾಮಯ್ಯ ಹೆಸರಿಡಲಿ ಬಿಡಿ ಎಂದು ನಾನು ಕೂಡ ಹೇಳಿದ್ದೆ. ಕರ್ನಾಟಕ ರಾಜ್ಯಕ್ಕೆ ಸಿದ್ದರಾಮಯ್ಯ ಕೊಡುಗೆ ಸಾಕಷ್ಟಿದೆ. ಅದನ್ನು ಯಾರೂ ಪ್ರಿನ್ಸೆಸ್ ರಸ್ತೆ ಅಂತ ಕರಿಯಲ್ಲ. ಆದ್ದರಿಂದ ನಾನು ಕೂಡ ಸಿದ್ದರಾಮಯ್ಯರ ಹೆಸರಿಡಿ ಎಂದು ಹೇಳಿದ್ದೆ. ಸಿದ್ದರಾಮಯ್ಯ ಪರ ಮಾತನಾಡಿದ್ರೆ, ನಾನು ಕಾಂಗ್ರೆಸ್ ಸೇರುತ್ತೇನೆ ಎಂದರ್ಥವಲ್ಲ ಎಂದು ಕಾಂಗ್ರೆಸ್ ಸೇರುವ ವದಂತಿ ಬಗ್ಗೆ ಸ್ಪಷ್ಟನೆ ನೀಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಳೆದ 11 ವರ್ಷದಿಂದ ಸಿದ್ದರಾಮಯ್ಯರನ್ನು ವಿರೋಧಿಸುತ್ತಿರುವವನು ಪ್ರತಾಪ್ ಸಿಂಹ ಒಬ್ಬನೇ. ಅವರ ಸಿದ್ದಾಂತ ವಿರೋಧಿ ನಾನು. ಇದೇ ಸಿದ್ದರಾಮಯ್ಯ ಮೈಸೂರು ಏರ್ಪೋರ್ಟ್ಗೆ ಟಿಪ್ಪು ಹೆಸರನ್ನು ಇಡಲು ಹೊರಟಿದ್ದರು. ಅದನ್ನು ಬೊಮ್ಮಾಯಿ ಅವರಿಗೆ ಹೇಳಿ ತಡೆದಿದ್ದು ನಾನು. ಇದಕ್ಕೆ ಮೈಸೂರು ಮಹಾರಾಣಿ ಅವರು ಕೂಡ ನನ್ನನ್ನು ಹೊಗಳಿದ್ರು. ಮೈಸೂರು ಬೆಂಗಳೂರು ನಡುವೆ ಟಿಪ್ಪು ಎಕ್ಸ್ಪ್ರೆಸ್ ಎಂದು ಇತ್ತು. ಅದನ್ನು ಕೂಡ ಒಡೆಯರ್ ಎಕ್ಸ್ಪ್ರೆಸ್ಎಂದು ಬದಲಾಯಿಸಿದೆ. ಅಂದು ಕೂಡ ಪ್ರಮೋದಾದೇವಿ ನನ್ನ ಕಾರ್ಯಕ್ಕೆ ಶ್ಲಾಘಿಸಿದ್ದರು ಎಂದು ಹಿಂದಿನ ಘಟನೆಗಳನ್ನು ಮೆಲುಕು ಹಾಕಿದರು.
ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…
ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…
ನವದೆಹಲಿ: ಇರಾನ್ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್ ದರವನ್ನು 2 ರೂಗೆ ಏರಿಕೆ ಮಾಡಿದೆ.…
ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…
ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…
ಟೆಹರಾನ್: ಇರಾನ್ ಮೇಲೆ ಅಮೇರಿಕಾ ಹಾಗೂ ಇಸ್ರೇಲ್ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…