ಮೈಸೂರು ನಗರ

ಮತ್ತೆ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್‌ ಬೀಸಿದ ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು: ಸಿಎಂ ಸಿದ್ದರಾಮಯ್ಯ ಪರ ಮಾತನಾಡಿದ್ರೆ, ನಾನು ಕಾಂಗ್ರೆಸ್‌ ಸೇರುತ್ತೇನೆ ಎಂದರ್ಥವಲ್ಲ ಎಂದು ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿದ್ದಾರೆ.

ಕೆಆರ್‌ಎಸ್‌ ರಸ್ತೆಗೆ ಸಿದ್ದರಾಮಯ್ಯ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮಾಜಿ ಸಂಸದ ಪ್ರತಾಪ್‌ ಸಿಂಹ ಅವರು, ನಾನು ಒಮ್ಮೆ ಕಾರ್ಪೊರೇಷನ್‌ನಲ್ಲಿ ಕೇಳಿದಾಗ ಆ ರಸ್ತೆಗೆ ಹೆಸರಿಲ್ಲ ಅಂದ್ರು. ಹಾಗಾಗಿ ಸಿದ್ದರಾಮಯ್ಯ ಹೆಸರಿಡಲಿ ಬಿಡಿ ಎಂದು ನಾನು ಕೂಡ ಹೇಳಿದ್ದೆ. ಕರ್ನಾಟಕ ರಾಜ್ಯಕ್ಕೆ ಸಿದ್ದರಾಮಯ್ಯ ಕೊಡುಗೆ ಸಾಕಷ್ಟಿದೆ. ಅದನ್ನು ಯಾರೂ ಪ್ರಿನ್ಸೆಸ್ ರಸ್ತೆ ಅಂತ ಕರಿಯಲ್ಲ. ಆದ್ದರಿಂದ ನಾನು ಕೂಡ ಸಿದ್ದರಾಮಯ್ಯರ ಹೆಸರಿಡಿ ಎಂದು ಹೇಳಿದ್ದೆ. ಸಿದ್ದರಾಮಯ್ಯ ಪರ ಮಾತನಾಡಿದ್ರೆ, ನಾನು ಕಾಂಗ್ರೆಸ್‌ ಸೇರುತ್ತೇನೆ ಎಂದರ್ಥವಲ್ಲ ಎಂದು ಕಾಂಗ್ರೆಸ್‌ ಸೇರುವ ವದಂತಿ ಬಗ್ಗೆ ಸ್ಪಷ್ಟನೆ ನೀಡಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕಳೆದ 11 ವರ್ಷದಿಂದ ಸಿದ್ದರಾಮಯ್ಯರನ್ನು ವಿರೋಧಿಸುತ್ತಿರುವವನು ಪ್ರತಾಪ್ ಸಿಂಹ ಒಬ್ಬನೇ. ಅವರ ಸಿದ್ದಾಂತ ವಿರೋಧಿ ನಾನು. ಇದೇ ಸಿದ್ದರಾಮಯ್ಯ ಮೈಸೂರು ಏರ್‌ಪೋರ್ಟ್‌ಗೆ ಟಿಪ್ಪು ಹೆಸರನ್ನು ಇಡಲು ಹೊರಟಿದ್ದರು. ಅದನ್ನು ಬೊಮ್ಮಾಯಿ ಅವರಿಗೆ ಹೇಳಿ ತಡೆದಿದ್ದು ನಾನು. ಇದಕ್ಕೆ ಮೈಸೂರು ಮಹಾರಾಣಿ ಅವರು ಕೂಡ ನನ್ನನ್ನು ಹೊಗಳಿದ್ರು. ಮೈಸೂರು ಬೆಂಗಳೂರು ನಡುವೆ ಟಿಪ್ಪು ಎಕ್ಸ್‌ಪ್ರೆಸ್ ಎಂದು ಇತ್ತು. ಅದನ್ನು ಕೂಡ ಒಡೆಯರ್ ಎಕ್ಸ್‌ಪ್ರೆಸ್ಎಂದು ಬದಲಾಯಿಸಿದೆ. ಅಂದು ಕೂಡ ಪ್ರಮೋದಾದೇವಿ ನನ್ನ ಕಾರ್ಯಕ್ಕೆ ಶ್ಲಾಘಿಸಿದ್ದರು ಎಂದು ಹಿಂದಿನ ಘಟನೆಗಳನ್ನು ಮೆಲುಕು ಹಾಕಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

2 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

2 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

2 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

2 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

2 hours ago

ಹಿಂದಿನ ಉಸ್ತುವಾರಿಗಿದ್ದ ಖಾತೆಗಳು ಪುಟ್ಟರಂಗಶೆಟ್ಟರಿಗೆ!

ರಾಜೇಶ್ ಬೆಂಡರವಾಡಿ ಪಶುಸಂಗೋಪನೆ, ರೇಷ್ಮೆ ಖಾತೆ ಹಂಚಿಕೆ; ಉಭಯ ಕ್ಷೇತ್ರಗಳಲ್ಲಿ ಅನುಭವ ಇರುವ ಹಿನ್ನೆಲೆ  ಚಾಮರಾಜನಗರ: ರಾಜ್ಯದಲ್ಲಿ ಎರಡನೇ ಹಂತದಲ್ಲಿ…

2 hours ago