ಮೈಸೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ತಾಲಿಬಾನ್ ಸರ್ಕಾರ ನಡೆಸುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಗೂಂಡಾಗಿರಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ನಟ್ಟು, ಬೋಲ್ಟು ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರೇ ಕರ್ನಾಟಕ ಏನೂ ನಿಮ್ಮ ರಿಯಲ್ ಎಸ್ಟೇಟ್ ಆಫೀಸಾ? ಎಂದು ಪ್ರಶ್ನೆ ಮಾಡಿದರು.
ಇನ್ನು ರಾಜಕೀಯಕ್ಕೆ ನೀವು ಮೇಕೆದಾಟು ಪಾದಯಾತ್ರೆ ಮಾಡಿದ್ದೀರಿ. ಕಾಂಗ್ರೆಸ್ ಜಾತ್ರೆಗೆ ಬರಲು, ಕಾಂಗ್ರೆಸ್ ನಾಯಕರ ಫೋಟೋ ಇರುವ ಯಾತ್ರೆಯಲ್ಲಿ ಭಾಗವಹಿಸಲು ಸುದೀಪ್, ಶಿವಣ್ಣ, ಯಶ್ ಏನೂ ನಿಮ್ಮ ಪಾರ್ಟಿ ಕಾರ್ಡ್ ಓಲ್ಡರ್ಗಳಾ? ನೀವು ಹೋರಾಟ ಮಾಡೋದಿದ್ರೆ ತಮಿಳುನಾಡು ಸರ್ಕಾರದ ವಿರುದ್ಧ ಹೋರಾಟ ಮಾಡಿ. ಸ್ಟಾಲಿನ್ ಒಪ್ಪಿಗೆ ಪಡೆದು ಬನ್ನಿ, ಆಗ ನಾನು ನಿಮ್ಮ ಹೋರಾಟಕ್ಕೆ ಬರುತ್ತೇನೆ ಎಂದು ಸವಾಲು ಹಾಕಿದರು.
ಇನ್ನು ಡಿಕೆಶಿ ಅವರೇ ಹುಲಿ ಏರಿದ್ದೀರಿ, ಜನ ಮರ್ಯಾದೆ ಕೊಡುತ್ತಿರುವುದು ಹುಲಿಗೆ ಹೊರತು ನಿಮಗಲ್ಲ. ದರ್ಪ ಬಿಡಿ ಅಧಿಕಾರ ಇರುವಾಗ ಮಾತ್ರ ನಿಮಗೆ ಬೆಲೆ ಇರೋದು. ಹುಲಿ ಇಳಿದ ಮೇಲೆ ಅದೇ ಹುಲಿಯೆ ನಿಮ್ಮನ್ನು ತಿಂದು ಬಿಡುತ್ತದೆ ಎಚ್ಚರ ಇರಲಿ ಎಂದು ಸಲಹೆ ನೀಡಿದರು. ಕನ್ನಡ ಸಿನಿಮಾ ನಟರ ಬಗ್ಗೆ ಹಗುರವಾಗಿ ಮಾತಾಡಬೇಡಿ. ರಾಜ್ಯಕ್ಕೆ ನಟರು ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಯಶ್, ಶಿವಣ್ಣ, ಡಾಲಿ ಎಲ್ಲರೂ ಬೇರೆ ಕಡೆ ಹೋಗಿಯೂ ಕನ್ನಡದ ಹಿರಿಮೆ ಹೆಚ್ಚಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಟಾಂಗ್ ಕೊಟ್ಟರು.
ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…
ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…
ಚೆನ್ನೈ : ನಮ್ಮ ಪಕ್ಷದ ಪ್ರವೇಶದಿಂದ ತಮಿಳುನಾಡು ರಾಜಕೀಯ ಉದ್ವಿಗ್ನಗೊಂಡಿದೆ ಎಂದು ದಳಪತಿ ವಿಜಯ್ ಹೇಳಿಕೊಂಡಿದ್ದಾರೆ. ಮುಂಬರುವ ತಮಿಳುನಾಡಿನ ವಿಧಾನಸಭಾ…
ಬೆಂಗಳೂರು : ಆದಾಯ ತೆರಿಗೆ ಪಾವತಿಸುವವರು ಹಾಗೂ ಜಿಎಸ್ಟಿ ವ್ಯಾಪ್ತಿಗೆ ಒಳಪಡುವವರು ರಾಜ್ಯ ಸರ್ಕಾರದ ಮಹಾತ್ವಕಾಂಕ್ಷಿ ಯೋಜನೆ ಗೃಹಲಕ್ಷ್ಮಿ ವ್ಯಾಪ್ತಿಗೆ…
ಬೆಂಗಳೂರು : ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ…
ತಿರುವನಂತಪುರಂ : ಬೆಂಗಳೂರಿನಲ್ಲಿ ಆದಾಯ ತೆರಿಗೆ ಇಲಾಖೆ ನಡೆಸಿದ ಶೋಧದ ವೇಳೆ ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಅವರ ಆತ್ಮಹತ್ಯೆ…