ಮೈಸೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ತಾಲಿಬಾನ್ ಸರ್ಕಾರ ನಡೆಸುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಗೂಂಡಾಗಿರಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ನಟ್ಟು, ಬೋಲ್ಟು ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರೇ ಕರ್ನಾಟಕ ಏನೂ ನಿಮ್ಮ ರಿಯಲ್ ಎಸ್ಟೇಟ್ ಆಫೀಸಾ? ಎಂದು ಪ್ರಶ್ನೆ ಮಾಡಿದರು.
ಇನ್ನು ರಾಜಕೀಯಕ್ಕೆ ನೀವು ಮೇಕೆದಾಟು ಪಾದಯಾತ್ರೆ ಮಾಡಿದ್ದೀರಿ. ಕಾಂಗ್ರೆಸ್ ಜಾತ್ರೆಗೆ ಬರಲು, ಕಾಂಗ್ರೆಸ್ ನಾಯಕರ ಫೋಟೋ ಇರುವ ಯಾತ್ರೆಯಲ್ಲಿ ಭಾಗವಹಿಸಲು ಸುದೀಪ್, ಶಿವಣ್ಣ, ಯಶ್ ಏನೂ ನಿಮ್ಮ ಪಾರ್ಟಿ ಕಾರ್ಡ್ ಓಲ್ಡರ್ಗಳಾ? ನೀವು ಹೋರಾಟ ಮಾಡೋದಿದ್ರೆ ತಮಿಳುನಾಡು ಸರ್ಕಾರದ ವಿರುದ್ಧ ಹೋರಾಟ ಮಾಡಿ. ಸ್ಟಾಲಿನ್ ಒಪ್ಪಿಗೆ ಪಡೆದು ಬನ್ನಿ, ಆಗ ನಾನು ನಿಮ್ಮ ಹೋರಾಟಕ್ಕೆ ಬರುತ್ತೇನೆ ಎಂದು ಸವಾಲು ಹಾಕಿದರು.
ಇನ್ನು ಡಿಕೆಶಿ ಅವರೇ ಹುಲಿ ಏರಿದ್ದೀರಿ, ಜನ ಮರ್ಯಾದೆ ಕೊಡುತ್ತಿರುವುದು ಹುಲಿಗೆ ಹೊರತು ನಿಮಗಲ್ಲ. ದರ್ಪ ಬಿಡಿ ಅಧಿಕಾರ ಇರುವಾಗ ಮಾತ್ರ ನಿಮಗೆ ಬೆಲೆ ಇರೋದು. ಹುಲಿ ಇಳಿದ ಮೇಲೆ ಅದೇ ಹುಲಿಯೆ ನಿಮ್ಮನ್ನು ತಿಂದು ಬಿಡುತ್ತದೆ ಎಚ್ಚರ ಇರಲಿ ಎಂದು ಸಲಹೆ ನೀಡಿದರು. ಕನ್ನಡ ಸಿನಿಮಾ ನಟರ ಬಗ್ಗೆ ಹಗುರವಾಗಿ ಮಾತಾಡಬೇಡಿ. ರಾಜ್ಯಕ್ಕೆ ನಟರು ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಯಶ್, ಶಿವಣ್ಣ, ಡಾಲಿ ಎಲ್ಲರೂ ಬೇರೆ ಕಡೆ ಹೋಗಿಯೂ ಕನ್ನಡದ ಹಿರಿಮೆ ಹೆಚ್ಚಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಟಾಂಗ್ ಕೊಟ್ಟರು.
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…