ಮೈಸೂರು: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ತಾಲಿಬಾನ್ ಸರ್ಕಾರ ನಡೆಸುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಗೂಂಡಾಗಿರಿ ಸರ್ಕಾರ ನಡೆಸುತ್ತಿದ್ದಾರೆ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಡಿಸಿಎಂ ಡಿ.ಕೆ.ಶಿವಕುಮಾರ್ ನಟ್ಟು, ಬೋಲ್ಟು ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡಿ.ಕೆ.ಶಿವಕುಮಾರ್ ಅವರೇ ಕರ್ನಾಟಕ ಏನೂ ನಿಮ್ಮ ರಿಯಲ್ ಎಸ್ಟೇಟ್ ಆಫೀಸಾ? ಎಂದು ಪ್ರಶ್ನೆ ಮಾಡಿದರು.
ಇನ್ನು ರಾಜಕೀಯಕ್ಕೆ ನೀವು ಮೇಕೆದಾಟು ಪಾದಯಾತ್ರೆ ಮಾಡಿದ್ದೀರಿ. ಕಾಂಗ್ರೆಸ್ ಜಾತ್ರೆಗೆ ಬರಲು, ಕಾಂಗ್ರೆಸ್ ನಾಯಕರ ಫೋಟೋ ಇರುವ ಯಾತ್ರೆಯಲ್ಲಿ ಭಾಗವಹಿಸಲು ಸುದೀಪ್, ಶಿವಣ್ಣ, ಯಶ್ ಏನೂ ನಿಮ್ಮ ಪಾರ್ಟಿ ಕಾರ್ಡ್ ಓಲ್ಡರ್ಗಳಾ? ನೀವು ಹೋರಾಟ ಮಾಡೋದಿದ್ರೆ ತಮಿಳುನಾಡು ಸರ್ಕಾರದ ವಿರುದ್ಧ ಹೋರಾಟ ಮಾಡಿ. ಸ್ಟಾಲಿನ್ ಒಪ್ಪಿಗೆ ಪಡೆದು ಬನ್ನಿ, ಆಗ ನಾನು ನಿಮ್ಮ ಹೋರಾಟಕ್ಕೆ ಬರುತ್ತೇನೆ ಎಂದು ಸವಾಲು ಹಾಕಿದರು.
ಇನ್ನು ಡಿಕೆಶಿ ಅವರೇ ಹುಲಿ ಏರಿದ್ದೀರಿ, ಜನ ಮರ್ಯಾದೆ ಕೊಡುತ್ತಿರುವುದು ಹುಲಿಗೆ ಹೊರತು ನಿಮಗಲ್ಲ. ದರ್ಪ ಬಿಡಿ ಅಧಿಕಾರ ಇರುವಾಗ ಮಾತ್ರ ನಿಮಗೆ ಬೆಲೆ ಇರೋದು. ಹುಲಿ ಇಳಿದ ಮೇಲೆ ಅದೇ ಹುಲಿಯೆ ನಿಮ್ಮನ್ನು ತಿಂದು ಬಿಡುತ್ತದೆ ಎಚ್ಚರ ಇರಲಿ ಎಂದು ಸಲಹೆ ನೀಡಿದರು. ಕನ್ನಡ ಸಿನಿಮಾ ನಟರ ಬಗ್ಗೆ ಹಗುರವಾಗಿ ಮಾತಾಡಬೇಡಿ. ರಾಜ್ಯಕ್ಕೆ ನಟರು ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಯಶ್, ಶಿವಣ್ಣ, ಡಾಲಿ ಎಲ್ಲರೂ ಬೇರೆ ಕಡೆ ಹೋಗಿಯೂ ಕನ್ನಡದ ಹಿರಿಮೆ ಹೆಚ್ಚಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಟಾಂಗ್ ಕೊಟ್ಟರು.
ಬೆಂಗಳೂರು: ಬಡವರ ಮತಗಳನ್ನು ತೆಗೆಯಲು ಎಸ್ಐಆರ್ ಮೂಲಕ ಸಂಚು ಮಾಡಲಾಗಿದೆ. ನಾವುಗಳು ಬಹಳ ಎಚ್ಚರಿಕೆಯಿಂದ ಇರಬೇಕು ಎಂದು ನಮ್ಮ ಪಕ್ಷದ…
ಬೆಂಗಳೂರು: ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ರಾಜ್ಯ ಸರ್ಕಾರ ರಿಲೀಫ್ ನೀಡಿದೆ. ವಾಟಾಳ್ ನಾಗರಾಜ್ ಮೇಲಿನ ಕೇಸ್ಗಳನ್ನು ಸರ್ಕಾರ ಹಿಂಪಡೆಯಲು…
ಬೆಂಗಳೂರು: ಕಾನೂನಾತ್ಮಕವಾಗಿ 52 ಪ್ರಕರಣಗಳನ್ನು ಹಿಂಪಡೆಯಬಹುದು ಎಂದು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಪರಮೇಶ್ವರ್…
ಶ್ರೀರಂಗಪಟ್ಟಣ: ಶ್ರೀರಂಗಪಟ್ಟಣದ ಪ್ರಸಿದ್ಧ ವೆಲ್ಲೆಸ್ಲಿ ಸೇತುವೆ ಆತ್ಮಹತ್ಯೆ ಹಾಟ್ಸ್ಪಾಟ್ ಆಗುತ್ತಿದ್ದು, ಸೇತುವೆ ಮೇಲಿಂದ ನದಿಗೆ ಧುಮುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ…
ನವದೆಹಲಿ: ಆಫ್ರಿಕಾದ ಹಲವು ಭಾಗಗಳಲ್ಲಿ ಕೋವಿಡ್ಗಿಂತಲೂ ಡೆಡ್ಲಿಯಾದ ಎಬೋಲಾ ವೈರಸ್ ಹಾವಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ ಭಾರತದಲ್ಲೂ ಕಟ್ಟೆಚ್ಚರಕ್ಕೆ ಆದೇಶ ನೀಡಲಾಗಿದೆ.…
ನವದೆಹಲಿ: ಕರ್ನಾಟಕ ನಾಲ್ಕು ಸೇರಿದಂತೆ 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆಯಾಗಿದೆ. ಮಲ್ಲಿಕಾರ್ಜುನ ಖರ್ಗೆ, ಎಚ್.ಡಿ.ದೇವೇಗೌಡ, ಈರಣ್ಣ ಕಡಾಡಿ,…