ಮೈಸೂರು ನಗರ

ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ?: ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ತಿರುಗೇಟು

ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ?. ವರ್ಗಾವಣೆ ಲಿಸ್ಟ್ ಕೊಟ್ಟು ಅಪ್ಪ ಅಪ್ಪ ನಾ ಕೊಟ್ಟಿರೋದು ಅಷ್ಟೆ ಮಾಡಿ ಅನ್ನೋದು ಮಾತ್ರ ಕೆಲಸನಾ?. ಅಪ್ಪನ ಅಧಿಕಾರ ದುರುಪಯೋಗ ಮಾಡಿಕೊಂಡು ಮ್ಯಾಟ್ರಿಕ್ಸ್ ಲ್ಯಾಬ್ ಹೆಸರಲ್ಲಿ ಹಣ ಮಾಡೋದೆ ಕೆಲಸನಾ?. ನೀವು ಜಸ್ಟ್ ಎಂಎಲ್ಸಿ. ನೀವು ಯಾವ ಕೆಪಾಸಿಟಿ ಮೇಲೆ ವರ್ಗಾವಣೆ ಮಾಡಿಸುತ್ತೀರಾ?. ಯತೀಂದ್ರ ಅವರೇ ನಿಮ್ಮಂಥ ಕೆಲಸವನ್ನು ನಾನು ಯಾವತ್ತೂ ಮಾಡಲ್ಲ. ವರ್ಗಾವಣೆ ದಂಧೆ ಕೆಲಸ ನಿಮಗೆ ಇರಲಿ. ನಿಮ್ಮ ಅಪ್ಪನೂ ನಾಲ್ಕು ಬಾರಿ ಚುನಾವಣೆಯಲ್ಲಿ ಸೋತಿದ್ದರು. ಆಗ ಅವರನ್ನು ಕೆಲಸ ಇಲ್ಲದವರು ಅಂತೀದ್ರಾ? ನಂಗೆ ಟಿಕೆಟ್ ತಪ್ಪಿದೆ ಅಷ್ಟೆ. ಅಸೆಂಬ್ಲಿಗೆ ಮೈಸೂರಿನಿಂದಲೇ ಗೆದ್ದು ಬರ್ತಿನಿ. ಅವತ್ತು ನೀವು ಎಲ್ಲಿ ಇರುತ್ತೀರಾ ನೋಡ್ತಿನಿ. ಹಿಂಬಾಗಿಲಿನಿಂದ ನಿಮ್ಮ ರೀತಿ ಅಸೆಂಬ್ಲಿಗೆ ಬರುವ ಜಾಯಮಾನ ನನ್ನದ್ದಲ್ಲ. ಯತೀಂದ್ರ ಹೆಸರಿನ ಹಿಂದೆ ಸಿದ್ದರಾಮಯ್ಯ ಅಂತಾ ಇರದೇ ಇದ್ದಿದ್ದರೆ ನಿಮ್ಮನ್ನು ಯಾವ ಎಕ್ಕಣ್ಣ, ಸೀನಣ್ಣನೂ ಕ್ಯಾರೆ ಅಂತೀರಲ್ಲ. ಅಪ್ಪನ ಹೆಸರಿಂದ ಅಸ್ತಿತ್ವಕ್ಕೆ ಉಳಿಸಿ ಕೊಂಡ ನೀವು ನಂಗೆ ಪಾಠ ಹೇಳಬೇಡಿ. ನಿಮ್ಮ ಅಪ್ಪ ಅರಾಮಾಗಿ ಬೆಂಗಳೂರಿನಿಂದ ಮೈಸೂರಿಗೆ ಓಡಾಡುತ್ತಿರುವ ರಸ್ರೆ ಮಾಡಿಸಿದ್ದು ಈ‌ ಪ್ರತಾಪ್ ಸಿಂಹ ಅನ್ನೋದು ನೆನಪಿರಲಿ. ನಿಮ್ಮ ಅಪ್ಪ ಮೈಸೂರಿಗೆ ಒಂದು ಈ ರೀತಿಯ ರೋಡ್ ಮಾಡಿಸಿದ್ದಾರಾ ಹೇಳಿ ಎಂದು ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ: ಶಾಸಕ ಕೆ.ಹರೀಶ್‌ ಗೌಡ

ಮೈಸೂರು: ಮೊದಲ ಬಾರಿ ಗೆದ್ದವರು ಸಚಿವ ಸ್ಥಾನ ಕೇಳುವುದರಲ್ಲಿ ತಪ್ಪಿಲ್ಲ ಎಂದು ಶಾಸಕ ಕೆ.ಹರೀಶ್‌ ಗೌಡ ಹೇಳಿದ್ದಾರೆ. ಈ ಕುರಿತು…

10 hours ago

ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ವಿಫಲರಾಗಿದ್ದೇವೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾತನಾಡಿದ ಅವರು, ಗ್ಯಾರಂಟಿ…

10 hours ago

ಕಾಂಗ್ರೆಸ್‌ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ಅಧಿಕಾರ ಹಸ್ತಾಂತರ ವಿಚಾರದಲ್ಲಿ ರಾಜ್ಯದಲ್ಲಿ ಗೊಂದಲವಿದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ…

10 hours ago

ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ ಮಲ್ಲಿಕಾರ್ಜುನ ಮುತ್ಯಾ

ಯಾದಗಿರಿ: ಪೋಕ್ಸೋ ಪ್ರಕರಣ ದಾಖಲಾಗುತ್ತಿದ್ದಂತೆ ನಾಪತ್ತೆಯಾಗಿರುವ ಸ್ವಯಂ ಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ…

11 hours ago

ಟಿ.ನರಸೀಪುರ ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ: ಭಯಭೀತರಾದ ಜನತೆ

ಟಿ.ನರಸೀಪುರ: ತಾಲ್ಲೂಕಿನಲ್ಲಿ ಚಿರತೆಗಳ ಹಾವಳಿ ಮಿತಿಮೀರಿದ್ದು, ಜನತೆ ಭಯಭೀತರಾಗಿದ್ದಾರೆ. ತಾಲ್ಲೂಕಿನ ಎಸ್.ಕೆಬ್ಬೆಹುಂಡಿ, ಕನ್ನಾಯಕನಹಳ್ಳಿ ಗ್ರಾಮದ ಮಧ್ಯೆ ಚಿರತೆ ಪ್ರತ್ಯಕ್ಷವಾಗಿದ್ದು, ಈ…

11 hours ago

ರಾಜಧಾನಿಯ ಮಾಲಿನ್ಯ ನಿಯಂತ್ರಣಕ್ಕೆ ನಿರ್ದಿಷ್ಟ ಮಾನದಂಡ- ಪರಿಸರ ಸಚಿವ ಈಶ್ವರ್‌ ಖಂಡ್ರೆ

ಬೆಂಗಳೂರು: ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರು ಸಹ ಮತ್ತೊಂದು ಗ್ಯಾಸ್ ಛೇಂಬರ್ ಆಗದಂತೆ ಕ್ರಮ ವಹಿಸಲು ಶೀಘ್ರವೇ ನಗರದ ಎಲ್ಲ…

11 hours ago