ಮೈಸೂರು ನಗರ

ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ?: ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್‌ ಸಿಂಹ ತಿರುಗೇಟು

ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ?. ವರ್ಗಾವಣೆ ಲಿಸ್ಟ್ ಕೊಟ್ಟು ಅಪ್ಪ ಅಪ್ಪ ನಾ ಕೊಟ್ಟಿರೋದು ಅಷ್ಟೆ ಮಾಡಿ ಅನ್ನೋದು ಮಾತ್ರ ಕೆಲಸನಾ?. ಅಪ್ಪನ ಅಧಿಕಾರ ದುರುಪಯೋಗ ಮಾಡಿಕೊಂಡು ಮ್ಯಾಟ್ರಿಕ್ಸ್ ಲ್ಯಾಬ್ ಹೆಸರಲ್ಲಿ ಹಣ ಮಾಡೋದೆ ಕೆಲಸನಾ?. ನೀವು ಜಸ್ಟ್ ಎಂಎಲ್ಸಿ. ನೀವು ಯಾವ ಕೆಪಾಸಿಟಿ ಮೇಲೆ ವರ್ಗಾವಣೆ ಮಾಡಿಸುತ್ತೀರಾ?. ಯತೀಂದ್ರ ಅವರೇ ನಿಮ್ಮಂಥ ಕೆಲಸವನ್ನು ನಾನು ಯಾವತ್ತೂ ಮಾಡಲ್ಲ. ವರ್ಗಾವಣೆ ದಂಧೆ ಕೆಲಸ ನಿಮಗೆ ಇರಲಿ. ನಿಮ್ಮ ಅಪ್ಪನೂ ನಾಲ್ಕು ಬಾರಿ ಚುನಾವಣೆಯಲ್ಲಿ ಸೋತಿದ್ದರು. ಆಗ ಅವರನ್ನು ಕೆಲಸ ಇಲ್ಲದವರು ಅಂತೀದ್ರಾ? ನಂಗೆ ಟಿಕೆಟ್ ತಪ್ಪಿದೆ ಅಷ್ಟೆ. ಅಸೆಂಬ್ಲಿಗೆ ಮೈಸೂರಿನಿಂದಲೇ ಗೆದ್ದು ಬರ್ತಿನಿ. ಅವತ್ತು ನೀವು ಎಲ್ಲಿ ಇರುತ್ತೀರಾ ನೋಡ್ತಿನಿ. ಹಿಂಬಾಗಿಲಿನಿಂದ ನಿಮ್ಮ ರೀತಿ ಅಸೆಂಬ್ಲಿಗೆ ಬರುವ ಜಾಯಮಾನ ನನ್ನದ್ದಲ್ಲ. ಯತೀಂದ್ರ ಹೆಸರಿನ ಹಿಂದೆ ಸಿದ್ದರಾಮಯ್ಯ ಅಂತಾ ಇರದೇ ಇದ್ದಿದ್ದರೆ ನಿಮ್ಮನ್ನು ಯಾವ ಎಕ್ಕಣ್ಣ, ಸೀನಣ್ಣನೂ ಕ್ಯಾರೆ ಅಂತೀರಲ್ಲ. ಅಪ್ಪನ ಹೆಸರಿಂದ ಅಸ್ತಿತ್ವಕ್ಕೆ ಉಳಿಸಿ ಕೊಂಡ ನೀವು ನಂಗೆ ಪಾಠ ಹೇಳಬೇಡಿ. ನಿಮ್ಮ ಅಪ್ಪ ಅರಾಮಾಗಿ ಬೆಂಗಳೂರಿನಿಂದ ಮೈಸೂರಿಗೆ ಓಡಾಡುತ್ತಿರುವ ರಸ್ರೆ ಮಾಡಿಸಿದ್ದು ಈ‌ ಪ್ರತಾಪ್ ಸಿಂಹ ಅನ್ನೋದು ನೆನಪಿರಲಿ. ನಿಮ್ಮ ಅಪ್ಪ ಮೈಸೂರಿಗೆ ಒಂದು ಈ ರೀತಿಯ ರೋಡ್ ಮಾಡಿಸಿದ್ದಾರಾ ಹೇಳಿ ಎಂದು ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

8 mins ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

9 mins ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

11 mins ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago