Mahadevappa doesn't even have the courtesy to talk about etiquette: Pratap Simha
ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ ಸಂಸದ ಪ್ರತಾಪ್ ಸಿಂಹ ತಿರುಗೇಟು ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲಸ ಅಂದರೆ ಬರೀ ವರ್ಗಾವಣೆ ಮಾಡಿಸೋದಾ?. ವರ್ಗಾವಣೆ ಲಿಸ್ಟ್ ಕೊಟ್ಟು ಅಪ್ಪ ಅಪ್ಪ ನಾ ಕೊಟ್ಟಿರೋದು ಅಷ್ಟೆ ಮಾಡಿ ಅನ್ನೋದು ಮಾತ್ರ ಕೆಲಸನಾ?. ಅಪ್ಪನ ಅಧಿಕಾರ ದುರುಪಯೋಗ ಮಾಡಿಕೊಂಡು ಮ್ಯಾಟ್ರಿಕ್ಸ್ ಲ್ಯಾಬ್ ಹೆಸರಲ್ಲಿ ಹಣ ಮಾಡೋದೆ ಕೆಲಸನಾ?. ನೀವು ಜಸ್ಟ್ ಎಂಎಲ್ಸಿ. ನೀವು ಯಾವ ಕೆಪಾಸಿಟಿ ಮೇಲೆ ವರ್ಗಾವಣೆ ಮಾಡಿಸುತ್ತೀರಾ?. ಯತೀಂದ್ರ ಅವರೇ ನಿಮ್ಮಂಥ ಕೆಲಸವನ್ನು ನಾನು ಯಾವತ್ತೂ ಮಾಡಲ್ಲ. ವರ್ಗಾವಣೆ ದಂಧೆ ಕೆಲಸ ನಿಮಗೆ ಇರಲಿ. ನಿಮ್ಮ ಅಪ್ಪನೂ ನಾಲ್ಕು ಬಾರಿ ಚುನಾವಣೆಯಲ್ಲಿ ಸೋತಿದ್ದರು. ಆಗ ಅವರನ್ನು ಕೆಲಸ ಇಲ್ಲದವರು ಅಂತೀದ್ರಾ? ನಂಗೆ ಟಿಕೆಟ್ ತಪ್ಪಿದೆ ಅಷ್ಟೆ. ಅಸೆಂಬ್ಲಿಗೆ ಮೈಸೂರಿನಿಂದಲೇ ಗೆದ್ದು ಬರ್ತಿನಿ. ಅವತ್ತು ನೀವು ಎಲ್ಲಿ ಇರುತ್ತೀರಾ ನೋಡ್ತಿನಿ. ಹಿಂಬಾಗಿಲಿನಿಂದ ನಿಮ್ಮ ರೀತಿ ಅಸೆಂಬ್ಲಿಗೆ ಬರುವ ಜಾಯಮಾನ ನನ್ನದ್ದಲ್ಲ. ಯತೀಂದ್ರ ಹೆಸರಿನ ಹಿಂದೆ ಸಿದ್ದರಾಮಯ್ಯ ಅಂತಾ ಇರದೇ ಇದ್ದಿದ್ದರೆ ನಿಮ್ಮನ್ನು ಯಾವ ಎಕ್ಕಣ್ಣ, ಸೀನಣ್ಣನೂ ಕ್ಯಾರೆ ಅಂತೀರಲ್ಲ. ಅಪ್ಪನ ಹೆಸರಿಂದ ಅಸ್ತಿತ್ವಕ್ಕೆ ಉಳಿಸಿ ಕೊಂಡ ನೀವು ನಂಗೆ ಪಾಠ ಹೇಳಬೇಡಿ. ನಿಮ್ಮ ಅಪ್ಪ ಅರಾಮಾಗಿ ಬೆಂಗಳೂರಿನಿಂದ ಮೈಸೂರಿಗೆ ಓಡಾಡುತ್ತಿರುವ ರಸ್ರೆ ಮಾಡಿಸಿದ್ದು ಈ ಪ್ರತಾಪ್ ಸಿಂಹ ಅನ್ನೋದು ನೆನಪಿರಲಿ. ನಿಮ್ಮ ಅಪ್ಪ ಮೈಸೂರಿಗೆ ಒಂದು ಈ ರೀತಿಯ ರೋಡ್ ಮಾಡಿಸಿದ್ದಾರಾ ಹೇಳಿ ಎಂದು ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.
ಮೇಕೆ.. ಡಿಕೆ ! ಅಂದು, ಹರಿಯುವ ಕಾವೇರಿ ನದಿಯ ಈ ಕಡೆಯಿಂದ ಆ ಕಡೆಗೆ ಜಿಗಿದು ದಾಟಿ ಬಿಟ್ಟಿತಂತೆ ಮೇಕೆ…
ಕುಡಿಯುವ ನೀರಿನ ಸಮಸ್ಯೆ ನೀಗಿಸಲು ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿ ಮಠದ ವತಿಯಿಂದ ಸುಮಾರು ೪೦ ಎಕರೆ ಪ್ರದೇಶದಲ್ಲಿ ಜಲಾಶಯ…
ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ಮುಂದಿನ ೧೫ ದಿನಗಳ ಕಾಲ, ಪ್ರತಿ ದಿನ ೩,೫೦೦ ಕ್ಯೂಸೆಕ್…
ವಸಂತಕುಮಾರ್ ಮೈಸೂರು ಮಠ, ಸಾಮಾಜಿಕ ಹೋರಾಟಗಾರ ಮೈಸೂರಿನಲ್ಲಿ ಹಲವೆಡೆ ದುಸ್ಥಿತಿಯಲ್ಲಿರುವ ಹಾಗೂ ಅನೈರ್ಮಲ್ಯ ತಾಣವಾಗಿರುವ ಹಲವು ಸರ್ಕಾರಿ ಕಟ್ಟಡಗಳು, ವಾಚನಾಲಯ…
ಟಿ.ಕೆ.ಹರೀಶ್ ಸಾಮಾಜಿಕ ನ್ಯಾಯ ಒದಗಿಸುವ ಸಂವಿಧಾನಾತ್ಮಕ ವ್ಯವಸ್ಥೆ ಮೀಸಲಾತಿ ಭಾರತದಲ್ಲಿ ಮೀಸಲಾತಿ ವ್ಯವಸ್ಥೆಯನ್ನು ಸಾಮಾಜಿಕ ನ್ಯಾಯದ ಸಾಧನವಾಗಿ ಜಾರಿಗೆ ತರಲಾಗಿದೆ.…
ದೂರ ನಂಜುಂಡಸ್ವಾಮಿ ದೂರ ಗ್ರಾಮದ ಕೆರೆಯ ಪೂರ್ವಭಾಗದ ಕೋಡಿಯನ್ನು ದುರಸ್ತಿಪಡಿಸಿ, ಹೂಳು ತೆಗೆಯಲು ಆಗ್ರಹ ದೂರ: ಮೈಸೂರು ತಾಲ್ಲೂಕಿನ ಜಯಪುರ…