ಮೈಸೂರು ನಗರ

ಹನಗೋಡು ಸೊಸೈಟಿಯಲ್ಲಿ ನಾಲ್ಕು ಕೋಟಿ ಅವ್ಯವಹಾರ ನಡೆದಿದೆ: ಮಾಜಿ ಶಾಸಕ ಎಚ್.ಪಿ.ಮಂಜುನಾಥ್‌

ಮೈಸೂರು: ಹನಗೋಡು ಸೊಸೈಟಿಯಲ್ಲಿ ನಾಲ್ಕು ಕೋಟಿ ಅವ್ಯವಹಾರ ನಡೆದಿದ್ದು, ರೈತರು ಕಟ್ಟಿರುವ ಹಣವನ್ನು ಅಲ್ಲಿನ ಕಾರ್ಯದರ್ಶಿ‌ ಕೊಂಡೊಯ್ದಿದ್ದಾನೆ ಎಂದು ಮಾಜಿ ಶಾಸಕ ಎಚ್.ಪಿ.ಮಂಜುನಾಥ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹನಗೋಡು ಸೊಸೈಟಿಯಲ್ಲಿ ಸತ್ತವರ ಹೆಸರಿನಲ್ಲೂ ಸಾಲ ಮಂಜೂರು ಮಾಡಿ ಹಣ ತಿಂದು ತಿಂದಿದ್ದಾರೆ. ಇದೀಗ ಸತ್ತವರ ಮಕ್ಕಳ ಕುಟುಂಬ ಸದಸ್ಯರಿಗೆ ನೋಟಿಸ್ ಬಂದಿವೆ ಎಂದು ಆರೋಪಿಸಿದರು.

ಇನ್ನು ಹುಣಸೂರಿನ ಹಾಲಿ ಶಾಸಕರು ನಿನ್ನೆ ಅನಗತ್ಯವಾಗಿ ನನ್ನನ್ನು ಎಳೆದು ತಂದಿದ್ದಾರೆ. ಅವರು ಎಲ್ಲಿಯೂ ನನ್ನ ಹೆಸರನ್ನು ಪ್ರಸ್ತಾಪ ಮಾಡಿಲ್ಲ. ಆದರೆ ಹದಿನೈದು ವರ್ಷ ಅಧಿಕಾರ ನಡೆಸಿದವರು ಎಂದು ಹೇಳಿದ್ದಾರೆ. ಹಾಗಾಗಿ ಬಹುತೇಕ ಮಾಧ್ಯಮಗಳಲ್ಲಿ ಮಾಜಿ ಶಾಸಕರ ಹೆಸರು ಹೇಳದೇ ಎಂದು ವರದಿಯಾಗಿದೆ. ನನ್ನ ಹದಿನೈದು ವರ್ಷಗಳ ಅವಧಿಯಲ್ಲಿ ಜನಪರ ಕಾರ್ಯಗಳನ್ನು ಮಾಡಿದ್ದೇನೆ. 2008ರಲ್ಲಿ ಗೊಬ್ಬರಕ್ಕೆ ಅಭಾವ ಉಂಟಾದಾಗ ಹುಣಸೂರು ರೈತರಿಗೆ ವೈಯಕ್ತಿಕವಾಗಿ 36 ಲಕ್ಷ ರೂಪಾಯಿ ವೆಚ್ಚದಲ್ಲಿ 27 ಸೊಸೈಟಿಗಳಿಗೆ ಗೊಬ್ಬರ ಪೂರೈಕೆ ಮಾಡಿದೆ. ನಾನು ರೈತ ವಿರೋಧೀನಾ? ಎಂದು ಪ್ರಶ್ನೆ ಮಾಡಿದರು.

ಇನ್ನು ದೇವರಾಜ ಅರಸು ಅವರ ಕಾಲಿನ ಧೂಳಿಗೂ ನಾವು ಸಮವಲ್ಲ. ಅರಸುರವರು ಕ್ಷೇತ್ರಕ್ಕೆ 4 ಏತ ನೀರಾವರಿ ಯೋಜನೆ ತಂದಿದ್ದಾರೆ. ನಾನು 11 ಏತ ನೀರಾವರಿ ಯೋಜನೆ ಮಾಡಿದ್ದೇನೆ. 21 ಸಾವಿರ ಹೆಕ್ಟೇರ್‌ಗೆ ನೀರು ಕೊಟ್ಟಿದ್ದೇನೆ. ನಾಲೆಗಳ ಆಧುನೀಕರದ ಮೂಲಕ 38 ಸಾವಿರ ಹೆಕ್ಟೇರ್ ಪ್ರದೇಶದ ರೈತರಿಗೆ ಅನುಕೂಲ ಮಾಡಿದ್ದೇನೆ. ಉಂಡುವಾಡಿ ಯೋಜನೆ ತಂದಿದ್ದೇ ನಾನು. ಕೆರೆಗಳಿಗೆ ನೀರು ತುಂಬುವ ಯೋಜನೆ ಜಾರಿಗೊಳಿಸಿದೆ. ರೈತರಿಗೋಸ್ಕರ ನಾನು ಇಷ್ಟೆಲ್ಲಾ ಮಾಡಿದ್ದೇನೆ. ಹಾಲಿ ಶಾಸಕರು ನಿನ್ನೆ ಧರ್ಮಾಪುರ ಮತ್ತು ಹೆಗ್ಗಂದೂರು ಸೊಸೈಟಿಗಳಿಗೋಸ್ಕರ ಹೋರಾಟ ಮಾಡಿದ್ದಾರೆ. ಆದರೆ ರೈತ ಕಟ್ಟಿದ ಹಣವನ್ನು ಸೆಕ್ರೆಟರಿಗಳು ತಿಂದುಕೊಂಡಿದ್ದಾರೆ. ಪರಿಣಾಮ ರೈತರು ಸಾಲ ತೀರಿಸಿದ್ದರೂ ಈಗ ಸಾಲ ಸಿಗುತ್ತಿಲ್ಲ‌. ಹಣ ಗುಳುಂ ಮಾಡಿರುವವರ ಪರವಾಗಿ ಇವರು ಹೋರಾಟ ಮಾಡಿದ್ದಾರೆ. ಸೆಕ್ರೆಟರಿಗಳನ್ನು ರಕ್ಷಣೆ ಮಾಡಲು ಹೋರಾಟ ಮಾಡಿದ್ದಾರೆ. ಇವರ ಹೋರಾಟ ರೈತರಿಗಾಗಿ ನಡೆದಿಲ್ಲ. ಕೇವಲ 91 ಜನರಿಗೋಸ್ಕರ ನಡೆದಿದೆ. ಧರ್ಮಾಪುರ ಸೊಸೈಟಿಯಲ್ಲಿ ಆಡಿಟ್ ನಡೆದಿಲ್ಲ‌. ಆಡಿಟ್ ನಡೆಯದೇ ಸಾಲ ಹೇಗೆ ಕೊಡುತ್ತಾರೆ ಎಂದು ಪ್ರಶ್ನಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

11 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

11 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

11 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

11 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

12 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

12 hours ago