ಮೈಸೂರು ನಗರ

ಹನಗೋಡು ಸೊಸೈಟಿಯಲ್ಲಿ ನಾಲ್ಕು ಕೋಟಿ ಅವ್ಯವಹಾರ ನಡೆದಿದೆ: ಮಾಜಿ ಶಾಸಕ ಎಚ್.ಪಿ.ಮಂಜುನಾಥ್‌

ಮೈಸೂರು: ಹನಗೋಡು ಸೊಸೈಟಿಯಲ್ಲಿ ನಾಲ್ಕು ಕೋಟಿ ಅವ್ಯವಹಾರ ನಡೆದಿದ್ದು, ರೈತರು ಕಟ್ಟಿರುವ ಹಣವನ್ನು ಅಲ್ಲಿನ ಕಾರ್ಯದರ್ಶಿ‌ ಕೊಂಡೊಯ್ದಿದ್ದಾನೆ ಎಂದು ಮಾಜಿ ಶಾಸಕ ಎಚ್.ಪಿ.ಮಂಜುನಾಥ್‌ ಗಂಭೀರ ಆರೋಪ ಮಾಡಿದ್ದಾರೆ.

ಈ ಕುರಿತು ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹನಗೋಡು ಸೊಸೈಟಿಯಲ್ಲಿ ಸತ್ತವರ ಹೆಸರಿನಲ್ಲೂ ಸಾಲ ಮಂಜೂರು ಮಾಡಿ ಹಣ ತಿಂದು ತಿಂದಿದ್ದಾರೆ. ಇದೀಗ ಸತ್ತವರ ಮಕ್ಕಳ ಕುಟುಂಬ ಸದಸ್ಯರಿಗೆ ನೋಟಿಸ್ ಬಂದಿವೆ ಎಂದು ಆರೋಪಿಸಿದರು.

ಇನ್ನು ಹುಣಸೂರಿನ ಹಾಲಿ ಶಾಸಕರು ನಿನ್ನೆ ಅನಗತ್ಯವಾಗಿ ನನ್ನನ್ನು ಎಳೆದು ತಂದಿದ್ದಾರೆ. ಅವರು ಎಲ್ಲಿಯೂ ನನ್ನ ಹೆಸರನ್ನು ಪ್ರಸ್ತಾಪ ಮಾಡಿಲ್ಲ. ಆದರೆ ಹದಿನೈದು ವರ್ಷ ಅಧಿಕಾರ ನಡೆಸಿದವರು ಎಂದು ಹೇಳಿದ್ದಾರೆ. ಹಾಗಾಗಿ ಬಹುತೇಕ ಮಾಧ್ಯಮಗಳಲ್ಲಿ ಮಾಜಿ ಶಾಸಕರ ಹೆಸರು ಹೇಳದೇ ಎಂದು ವರದಿಯಾಗಿದೆ. ನನ್ನ ಹದಿನೈದು ವರ್ಷಗಳ ಅವಧಿಯಲ್ಲಿ ಜನಪರ ಕಾರ್ಯಗಳನ್ನು ಮಾಡಿದ್ದೇನೆ. 2008ರಲ್ಲಿ ಗೊಬ್ಬರಕ್ಕೆ ಅಭಾವ ಉಂಟಾದಾಗ ಹುಣಸೂರು ರೈತರಿಗೆ ವೈಯಕ್ತಿಕವಾಗಿ 36 ಲಕ್ಷ ರೂಪಾಯಿ ವೆಚ್ಚದಲ್ಲಿ 27 ಸೊಸೈಟಿಗಳಿಗೆ ಗೊಬ್ಬರ ಪೂರೈಕೆ ಮಾಡಿದೆ. ನಾನು ರೈತ ವಿರೋಧೀನಾ? ಎಂದು ಪ್ರಶ್ನೆ ಮಾಡಿದರು.

ಇನ್ನು ದೇವರಾಜ ಅರಸು ಅವರ ಕಾಲಿನ ಧೂಳಿಗೂ ನಾವು ಸಮವಲ್ಲ. ಅರಸುರವರು ಕ್ಷೇತ್ರಕ್ಕೆ 4 ಏತ ನೀರಾವರಿ ಯೋಜನೆ ತಂದಿದ್ದಾರೆ. ನಾನು 11 ಏತ ನೀರಾವರಿ ಯೋಜನೆ ಮಾಡಿದ್ದೇನೆ. 21 ಸಾವಿರ ಹೆಕ್ಟೇರ್‌ಗೆ ನೀರು ಕೊಟ್ಟಿದ್ದೇನೆ. ನಾಲೆಗಳ ಆಧುನೀಕರದ ಮೂಲಕ 38 ಸಾವಿರ ಹೆಕ್ಟೇರ್ ಪ್ರದೇಶದ ರೈತರಿಗೆ ಅನುಕೂಲ ಮಾಡಿದ್ದೇನೆ. ಉಂಡುವಾಡಿ ಯೋಜನೆ ತಂದಿದ್ದೇ ನಾನು. ಕೆರೆಗಳಿಗೆ ನೀರು ತುಂಬುವ ಯೋಜನೆ ಜಾರಿಗೊಳಿಸಿದೆ. ರೈತರಿಗೋಸ್ಕರ ನಾನು ಇಷ್ಟೆಲ್ಲಾ ಮಾಡಿದ್ದೇನೆ. ಹಾಲಿ ಶಾಸಕರು ನಿನ್ನೆ ಧರ್ಮಾಪುರ ಮತ್ತು ಹೆಗ್ಗಂದೂರು ಸೊಸೈಟಿಗಳಿಗೋಸ್ಕರ ಹೋರಾಟ ಮಾಡಿದ್ದಾರೆ. ಆದರೆ ರೈತ ಕಟ್ಟಿದ ಹಣವನ್ನು ಸೆಕ್ರೆಟರಿಗಳು ತಿಂದುಕೊಂಡಿದ್ದಾರೆ. ಪರಿಣಾಮ ರೈತರು ಸಾಲ ತೀರಿಸಿದ್ದರೂ ಈಗ ಸಾಲ ಸಿಗುತ್ತಿಲ್ಲ‌. ಹಣ ಗುಳುಂ ಮಾಡಿರುವವರ ಪರವಾಗಿ ಇವರು ಹೋರಾಟ ಮಾಡಿದ್ದಾರೆ. ಸೆಕ್ರೆಟರಿಗಳನ್ನು ರಕ್ಷಣೆ ಮಾಡಲು ಹೋರಾಟ ಮಾಡಿದ್ದಾರೆ. ಇವರ ಹೋರಾಟ ರೈತರಿಗಾಗಿ ನಡೆದಿಲ್ಲ. ಕೇವಲ 91 ಜನರಿಗೋಸ್ಕರ ನಡೆದಿದೆ. ಧರ್ಮಾಪುರ ಸೊಸೈಟಿಯಲ್ಲಿ ಆಡಿಟ್ ನಡೆದಿಲ್ಲ‌. ಆಡಿಟ್ ನಡೆಯದೇ ಸಾಲ ಹೇಗೆ ಕೊಡುತ್ತಾರೆ ಎಂದು ಪ್ರಶ್ನಿಸಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅರ್ಧಕ್ಕೆ ನಿಂತ ಕಾಮಗಾರಿ; ಸವಾರರಿಗೆ ಕಿರಿಕಿರಿ

ಮಹೇಶ್ ಕರೋಟಿ ಗುದ್ದಲಿ ಪೂಜೆಗಷ್ಟೇ ಸೀಮಿತವಾದ ರಸ್ತೆ ಕಾಮಗಾರಿ ; ಎಚ್ಚರ ತಪ್ಪಿದಲ್ಲಿ ಅನಾಹುತ; ದುರಸ್ತಿಗೆ ಗ್ರಾಮಸ್ಥರ ಒತ್ತಾಯ ಕಿಕ್ಕೇರಿ:…

31 mins ago

ಜೂ.13ರಂದು ಡೋರ‍್ನಹಳ್ಳಿಯಲ್ಲಿ ಸಂತ ಅಂತೋಣಿ ಜಾತ್ರೆ

ಭೇರ್ಯ ಮಹೇಶ್ ಕೆ.ಆರ್.ನಗರ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ; ಸಾವಿರಾರು ಮಂದಿ ಸೇರುವ ನಿರೀಕ್ಷೆ ಕೆ.ಆರ್.ನಗರ: ತಾಲ್ಲೂಕಿನ ಡೋರ‍್ನಹಳ್ಳಿಯ ವಿಶ್ವವಿಖ್ಯಾತ…

35 mins ago

ಕೋಟೆಗೆ 15ಕ್ಕೂ ಹೆಚ್ಚು ಬಾರಿ ಭೇಟಿ ನೀಡಿದ್ದ ಸಿದ್ದರಾಮಯ್ಯ

ಮಂಜು ಕೋಟೆ ಮುಖ್ಯಮಂತ್ರಿಯಾಗಿದ್ದ ೮ ವರ್ಷಗಳ ಅವಧಿಯಲ್ಲಿ ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಅನುದಾನ ಮಂಜೂರು ಎಚ್.ಡಿ.ಕೋಟೆ: ರಾಜ್ಯದ ಮತ್ತು…

41 mins ago

ಬುಡಕಟ್ಟು ಜೀವನ ಬಿಚ್ಚಿಡುವ ಮ್ಯೂಸಿಯಂ!

ಮದನ್ ಕೆ.ಪಿ ಸಾಂಪ್ರದಾಯಿಕ ಮನೆಗಳು, ಧರಿಸುವ ಉಡುಪುಗಳು, ಒಡವೆಗಳ ಅನಾವರಣ ಮೈಸೂರು: ನಗರದ ಬೋಗಾದಿಯಲ್ಲಿರುವ ಭಾರತೀಯ ಮಾನವ ವಿಜ್ಞಾನ ಸರ್ವೇಕ್ಷಣಾ…

44 mins ago

ಕಲಾಕೃತಿ ಮೂಲಕ ತ್ಯಾಜ್ಯ ನಿರ್ವಹಣಾ ಜಾಗೃತಿ

ಎಚ್.ಎಸ್.ದಿನೇಶ್‌ಕುಮಾರ್ ಕಸ ಎಸೆಯುವ ಹಾಟ್ ಸ್ಪಾಟ್‌ಗಳಲ್ಲಿ ತ್ಯಾಜ್ಯಗಳಿಂದಲೇ ‘ಕಲಾಕೃತಿ’ ರಚನೆ!; ಜನರಲ್ಲಿ ಅರಿವು ಮೂಡಿಸುತ್ತಿರುವ ಪೌರಕಾರ್ಮಿಕರು ಮೈಸೂರು: ಸಿಕ್ಕಸಿಕ್ಕಲ್ಲಿ ಕಸ…

54 mins ago