Fraud cases on the rise in Mandya district
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ ಚಿನ್ನದಂಗಡಿಯ ಮಾಲೀಕನನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿಜಯನಗರದ ತ್ರಿನೇತ್ರ ಸರ್ಕಲ್ನ ಬಳಿ ಇರುವ ಸ್ಟಾರ್ಗೋಲ್ಡ್ ಕಂಪೆನಿ ಹೆಸರಿನ ಚಿನ್ನದಂಗಡಿ ಮಾಲೀಕ ಯೋಗೇಶ್ ಬಂಧಿತನಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈತ ಸ್ಟಾರ್ಗೋಲ್ಡ್ ಕಂಪೆನಿ ಹೆಸರಿನಲ್ಲಿ ಚಿನ್ನದಂಗಡಿ ತೆರೆದು ಅತೀ ಕಡಿಮೆ ಬಡ್ಡಿ ದರದಲ್ಲಿ ಚಿನ್ನದ ಮೇಲೆ ಅತೀ ಹೆಚ್ಚು ಸಾಲ ಕೊಡುವುದಾಗಿ ಗ್ರಾಹಕರನ್ನು ನಂಬಿಸಿ ಅವರು ಅಡಮಾನ ಇರಿಸಿದ ಚಿನ್ನವನ್ನು ಅಕ್ರಮ ವಾಗಿ ತನ್ನ ಲಾಭಕ್ಕಾಗಿ ಗ್ರಾಹಕರ ಗಮನಕ್ಕೆ ತರದೇ ಕರಗಿಸಿ ಒಳಗೊಳಗೇ ಮಾರಾಟ ಮಾಡಿ ಸುಮಾರು ೧೫ ಜನರಿಗೆ ಮೋಸ ಮಾಡಿ ಸುಮಾರು ೧.೫ ಕೋಟಿ ರೂ. ಮೌಲ್ಯದ ೮೫೦ ಗ್ರಾಂ ಚಿನ್ನಾಭರಣವನ್ನು ದೋಚಿದ್ದರು.
ಈ ಸಂಬಂಧ ಗ್ರಾಹಕರು ಆತನ ವಿರುದ್ಧ ವಂಚನೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಯ ಪತ್ತೆಗೆ ಜಾಲ ಬೀಸಿದ್ದರು. ಶುಕ್ರವಾರ ವಿಜಯನಗರದ ಬಳಿ ಕಾರ್ಯಾಚರಣೆ ನಡೆಸಿ ಯೋಗೇಶ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…
ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…
ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದು ಭೇಟಿ ನೀಡಿ…
ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್ ಅವರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…
ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…