Fraud cases on the rise in Mandya district
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ ಚಿನ್ನದಂಗಡಿಯ ಮಾಲೀಕನನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ವಿಜಯನಗರದ ತ್ರಿನೇತ್ರ ಸರ್ಕಲ್ನ ಬಳಿ ಇರುವ ಸ್ಟಾರ್ಗೋಲ್ಡ್ ಕಂಪೆನಿ ಹೆಸರಿನ ಚಿನ್ನದಂಗಡಿ ಮಾಲೀಕ ಯೋಗೇಶ್ ಬಂಧಿತನಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಈತ ಸ್ಟಾರ್ಗೋಲ್ಡ್ ಕಂಪೆನಿ ಹೆಸರಿನಲ್ಲಿ ಚಿನ್ನದಂಗಡಿ ತೆರೆದು ಅತೀ ಕಡಿಮೆ ಬಡ್ಡಿ ದರದಲ್ಲಿ ಚಿನ್ನದ ಮೇಲೆ ಅತೀ ಹೆಚ್ಚು ಸಾಲ ಕೊಡುವುದಾಗಿ ಗ್ರಾಹಕರನ್ನು ನಂಬಿಸಿ ಅವರು ಅಡಮಾನ ಇರಿಸಿದ ಚಿನ್ನವನ್ನು ಅಕ್ರಮ ವಾಗಿ ತನ್ನ ಲಾಭಕ್ಕಾಗಿ ಗ್ರಾಹಕರ ಗಮನಕ್ಕೆ ತರದೇ ಕರಗಿಸಿ ಒಳಗೊಳಗೇ ಮಾರಾಟ ಮಾಡಿ ಸುಮಾರು ೧೫ ಜನರಿಗೆ ಮೋಸ ಮಾಡಿ ಸುಮಾರು ೧.೫ ಕೋಟಿ ರೂ. ಮೌಲ್ಯದ ೮೫೦ ಗ್ರಾಂ ಚಿನ್ನಾಭರಣವನ್ನು ದೋಚಿದ್ದರು.
ಈ ಸಂಬಂಧ ಗ್ರಾಹಕರು ಆತನ ವಿರುದ್ಧ ವಂಚನೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಆರೋಪಿಯ ಪತ್ತೆಗೆ ಜಾಲ ಬೀಸಿದ್ದರು. ಶುಕ್ರವಾರ ವಿಜಯನಗರದ ಬಳಿ ಕಾರ್ಯಾಚರಣೆ ನಡೆಸಿ ಯೋಗೇಶ್ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…