ಮೈಸೂರು ನಗರ

ಷೇರು ಮಾರುಕಟ್ಟೆ ಹೆಸರಲ್ಲಿ ವಂಚನೆ : ದೂರು

ಮೈಸೂರು : ಫೇಸ್‌ಬುಕ್‌ನಲ್ಲಿ ಪರಿಚಿತವಾದ ಅಪರಿಚಿತ ಮಹಿಳೆಯ ಮೂಲಕ ಷೇರು ಮಾರುಕಟ್ಟೆಗೆ ಹಣ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು 27,29 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ.

ವಿಜಯನಗರ ನಿವಾಸಿಯೊಬ್ಬರು ಫೇಸ್ ಬುಕ್ ವೀಕ್ಷಿಸುತ್ತಿದ್ದ ವೇಳೆ ಅಲ್ಲಿ ಮಹಿಳೆಯ ಭಾವಚಿತ್ರ ಗಮನಿಸಿ ಆಕೆಯ ಮೊಬೈಲ್ ಸಂಖ್ಯೆ ಪಡೆದು ಪರಿಚಯ ಮಾಡಿಕೊಂಡಿದ್ದಾರೆ. ನಂತರ ಆಕೆ ಷೇರು ಮಾರುಕಟ್ಟೆ ಬಗ್ಗೆ ಹೇಳಿದ್ದಾಳೆ.

ನೀವು ಹಣ ಹೂಡಿಕೆ ಮಾಡಿದಲ್ಲಿ ಹಣವನ್ನು ಹತ್ತುಪಟ್ಟು ಹೆಚ್ಚು ಮಾಡಬಹುದು ಎಂದು ನಂಬಿಸಿದ್ದಾಳೆ. ಆಕೆಯ ಮಾತನ್ನು ನಂಬಿ ಹಂತ ಹಂತವಾಗಿ 27,29,193ರೂ. ಹಣವನ್ನು ಅವರು ಹೇಳಿದ ಖಾತೆಗೆ ಜಮೆ ಮಾಡಿದ್ದಾರೆ. ನಂತರ ಅವರಿಗೆ ಯಾವ ಲಾಭವೂ ಬಂದಿಲ್ಲ. ಕೊಟ್ಟ ಹಣ ಕೂಡ ವಾಪಸ್ ಬಂದಿಲ್ಲ. ಹೀಗಾಗಿ ಅವರು ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪಡಿತರ ಅಕ್ಕಿ-ರಾಗಿ ಅಕ್ರಮ ಸಾಗಣೆ : ವಶ
ಮೈಸೂರು : ಪಡಿತರವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆಟೋ ಮೇಲೆ ದಾಳಿ ನಡೆಸಿರುವ ಆಹಾರ ಇಲಾಖೆ ಅಧಿಕಾರಿಗಳು ೧೦ ಚೀಲ ಅಕ್ಕಿ ಹಾಗೂ ಒಂದು ಚೀಲ ರಾಗಿಯನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಜೆಎಸ್‌ಎಸ್ ಕಾಲೇಜಿನ ಎಲೆತೋಟದ ಬಳಿ ಪಡಿತರವನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಆಹಾರ ನಿರೀಕ್ಷಕ ಲಿಖಿತ್ ಪ್ರಸಾದ್‌ಗೆ ಬಂದಿದೆ. ನ.೩೦ರ ಸಂಜೆ ಕೃಷ್ಣರಾಜ ಠಾಣೆಯ ಪೊಲೀಸರ ಸಹಾಯದೊಂದಿಗೆ ದಾಳಿ ನಡೆಸಲಾಗಿದೆ.

ಈ ವೇಳೆ ಪ್ಯಾಸೆಂಜರ್ ಆಟೋವನ್ನು ತಡೆದು ನಿಲ್ಲಿಸಿದ್ದಾರೆ. ಪೊಲೀಸರನ್ನು ಕಂಡೊಡನೆ ಆಟೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅಕ್ಕಿ ಹಾಗೂ ರಾಗಿಯನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

6 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

12 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

12 hours ago

ಓದುಗರ ಪತ್ರ: ಬಂದ್ ಮಾಡುವುದರಿಂದ ನಮಗೇ ತೊಂದರೆ ಅಲ್ಲವೇ?

ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್‌ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…

12 hours ago

ತಂಬಾಕು ನಿಯಂತ್ರಣ: ಕೇಂದ್ರ ದ್ವಂದ್ವ ನೀತಿ

ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…

12 hours ago

ಮಳೆಗಾಲದಲ್ಲಿ ಶುದ್ಧ ಕುಡಿಯುವ ನೀರು, ಬಿಸಿ ನೀರು ಒದಗಿಸಿ

ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್‌ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ  ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…

12 hours ago