ಮೈಸೂರು ನಗರ

ಷೇರು ಮಾರುಕಟ್ಟೆ ಹೆಸರಲ್ಲಿ ವಂಚನೆ : ದೂರು

ಮೈಸೂರು : ಫೇಸ್‌ಬುಕ್‌ನಲ್ಲಿ ಪರಿಚಿತವಾದ ಅಪರಿಚಿತ ಮಹಿಳೆಯ ಮೂಲಕ ಷೇರು ಮಾರುಕಟ್ಟೆಗೆ ಹಣ ಹೂಡಿಕೆ ಮಾಡಿದ ವ್ಯಕ್ತಿಯೊಬ್ಬರು 27,29 ಲಕ್ಷ ರೂ. ಹಣವನ್ನು ಕಳೆದುಕೊಂಡಿದ್ದಾರೆ.

ವಿಜಯನಗರ ನಿವಾಸಿಯೊಬ್ಬರು ಫೇಸ್ ಬುಕ್ ವೀಕ್ಷಿಸುತ್ತಿದ್ದ ವೇಳೆ ಅಲ್ಲಿ ಮಹಿಳೆಯ ಭಾವಚಿತ್ರ ಗಮನಿಸಿ ಆಕೆಯ ಮೊಬೈಲ್ ಸಂಖ್ಯೆ ಪಡೆದು ಪರಿಚಯ ಮಾಡಿಕೊಂಡಿದ್ದಾರೆ. ನಂತರ ಆಕೆ ಷೇರು ಮಾರುಕಟ್ಟೆ ಬಗ್ಗೆ ಹೇಳಿದ್ದಾಳೆ.

ನೀವು ಹಣ ಹೂಡಿಕೆ ಮಾಡಿದಲ್ಲಿ ಹಣವನ್ನು ಹತ್ತುಪಟ್ಟು ಹೆಚ್ಚು ಮಾಡಬಹುದು ಎಂದು ನಂಬಿಸಿದ್ದಾಳೆ. ಆಕೆಯ ಮಾತನ್ನು ನಂಬಿ ಹಂತ ಹಂತವಾಗಿ 27,29,193ರೂ. ಹಣವನ್ನು ಅವರು ಹೇಳಿದ ಖಾತೆಗೆ ಜಮೆ ಮಾಡಿದ್ದಾರೆ. ನಂತರ ಅವರಿಗೆ ಯಾವ ಲಾಭವೂ ಬಂದಿಲ್ಲ. ಕೊಟ್ಟ ಹಣ ಕೂಡ ವಾಪಸ್ ಬಂದಿಲ್ಲ. ಹೀಗಾಗಿ ಅವರು ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಪಡಿತರ ಅಕ್ಕಿ-ರಾಗಿ ಅಕ್ರಮ ಸಾಗಣೆ : ವಶ
ಮೈಸೂರು : ಪಡಿತರವನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಆಟೋ ಮೇಲೆ ದಾಳಿ ನಡೆಸಿರುವ ಆಹಾರ ಇಲಾಖೆ ಅಧಿಕಾರಿಗಳು ೧೦ ಚೀಲ ಅಕ್ಕಿ ಹಾಗೂ ಒಂದು ಚೀಲ ರಾಗಿಯನ್ನು ವಶಕ್ಕೆ ಪಡೆದಿದ್ದಾರೆ.
ನಗರದ ಜೆಎಸ್‌ಎಸ್ ಕಾಲೇಜಿನ ಎಲೆತೋಟದ ಬಳಿ ಪಡಿತರವನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಆಹಾರ ನಿರೀಕ್ಷಕ ಲಿಖಿತ್ ಪ್ರಸಾದ್‌ಗೆ ಬಂದಿದೆ. ನ.೩೦ರ ಸಂಜೆ ಕೃಷ್ಣರಾಜ ಠಾಣೆಯ ಪೊಲೀಸರ ಸಹಾಯದೊಂದಿಗೆ ದಾಳಿ ನಡೆಸಲಾಗಿದೆ.

ಈ ವೇಳೆ ಪ್ಯಾಸೆಂಜರ್ ಆಟೋವನ್ನು ತಡೆದು ನಿಲ್ಲಿಸಿದ್ದಾರೆ. ಪೊಲೀಸರನ್ನು ಕಂಡೊಡನೆ ಆಟೋ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಅಕ್ಕಿ ಹಾಗೂ ರಾಗಿಯನ್ನು ವಶಕ್ಕೆ ಪಡೆದ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ರಾಜ್ಯ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಹೆಚ್ಚಳ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ(ಡಿಎ)ಯನ್ನು ಶೇ.1.50ರಷ್ಟು ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2026 ಜನವರಿ 1ರಿಂದ ಅನ್ವಯವಾಗುವಂತೆ…

8 hours ago

ಮೇ.13ರಂದು ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್:‌ ಡಿಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಮೇ.13ಕ್ಕೆ ಬೆಂಗಳೂರು ಜನತೆಗೆ ಬಿಗ್‌ ಗಿಫ್ಟ್‌ ನೀಡಲಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ…

8 hours ago

ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಒಡೆಯರ್‌ ಭೇಟಿ

ಮೈಸೂರು: ಮೈಸೂರಿನ ಪಾರಂಪರಿಕ ಕಟ್ಟಡದಲ್ಲಿ ಒಂದಾಗಿರುವ ದೇವರಾಜ ಮಾರುಕಟ್ಟೆಗೆ ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಅವರಿಂದು ಭೇಟಿ ನೀಡಿ…

9 hours ago

ಪಂಚಭೂತಗಳಲ್ಲಿ ಲೀನರಾದ ಸಚಿವ ಡಿ.ಸುಧಾಕರ್‌

ಚಿತ್ರದುರ್ಗ: ಸಕಲ ಸರ್ಕಾರಿ ಗೌರವಗಳೊಂದಿಗೆ ಚಳ್ಳಕೆರೆಯ ಚಿತಾಗಾರದಲ್ಲಿ ಹಿರಿಯೂರು ಶಾಸಕ ಡಿ.ಸುಧಾಕರ್‌ ಅವರ ಅಂತ್ಯಕ್ರಿಯೆ ನೆರವೇರಿತು. ಬೆಳಿಗ್ಗೆಯಿಂದ ಸುಧಾಕರ್‌ ಅವರ…

9 hours ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡಾನೆ ದಾಳಿ: ಗಂಭೀರ ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಜಮೀನಿನಲ್ಲಿದ್ದ ರೈತನೋರ್ವನ ಮೇಲೆ ಕಾಡಾನೆ ದಾಳಿ ಮಾಡಿದ ಪರಿಣಾಮ ತೀವ್ರ…

9 hours ago

ಎಂ.ಕೆ.ಸ್ಟಾಲಿನ್‌ ಭೇಟಿಯಾದ ತಮಿಳುನಾಡು ನೂತನ ಸಿಎಂ ವಿಜಯ್‌

ಚೆನ್ನೈ: ತಮಿಳುನಾಡಿನ ನೂತನ ಸಿಎಂ ವಿಜಯ್‌ ಅವರಿಂದು ಮಾಜಿ ಸಿಎಂ ಎಂ.ಕೆ.ಸ್ಟಾಲಿನ್‌ ಅವರನ್ನು ಭೇಟಿಯಾದರು. ಸದ್ಯ ಇಂದಿನ ಸಭೆಯಲ್ಲಿ ಇಬ್ಬರು…

10 hours ago