ನಿಗಮ ಕಚೇರಿಯಲ್ಲಿ ಎರಡು ದಿನಗಳ ಶಿಬಿರ ಆಯೋಜನೆ
ಮೈಸೂರು : ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ನಿಗಮದ ವತಿಯಿಂದ ಉಚಿತ ಶ್ರವಣ ಪರೀಕ್ಷೆ ಶಿಬಿರ ನಡೆಸಲಾಗುತ್ತಿದೆ.
ಸೆಸ್ಕ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಫೋಕಸ್ ಸ್ಪೀಚ್ ಅಂಡ್ ಹಿಯರಿಂಗ್ ಕ್ಲಿನಿಕ್ ಸಹಯೋಗದಲ್ಲಿ ಸೆಸ್ಕ್ ಆಯೋಜಿಸಿರುವ ಎರಡು ದಿನಗಳ ಶಿಬಿರಕ್ಕೆ ಶಾಸಕರೂ ಆಗಿರುವ ನಿಗಮದ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ ಹಾಗೂ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು ಅವರು ಚಾಲನೆ ನೀಡಿದರು.
ದಿನವಿಡೀ ನಡೆದ ಶಿಬಿರದಲ್ಲಿ ಸೆಸ್ಕ್ ಪ್ರಧಾನ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ, ಗುತ್ತಿಗೆ ಹಾಗೂ ಹೊರ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವ ಡೇಟಾ ಎಂಟ್ರಿ ಸಿಬ್ಬಂದಿ, ವಾಹನ ಚಾಲಕರುಗಳು, ನಿಗಮ ಕಚೇರಿಯ ಸಹಾಯಕ ಸಿಬ್ಬಂದಿ ಸೇರಿದಂತೆ 300ಕ್ಕೂ ಹೆಚ್ಚು ಮಂದಿ ಶ್ರವಣ ದೋಷದ ಪರೀಕ್ಷೆ ಮಾಡಿಸಿಕೊಂಡು, ಅಗತ್ಯ ಚಿಕಿತ್ಸೆ ಹಾಗೂ ಸಲಹೆಗಳನ್ನು ಪಡೆದುಕೊಂಡರು.
ಶಿಬಿರದಲ್ಲಿ ಫೋಕಸ್ ಸ್ಪೀಚ್ ಅಂಡ್ ಹಿಯರಿಂಗ್ ಕ್ಲಿನಿಕ್ನ ಆಡಿಯೋಲಜಿಸ್ಟ್ ಎ.ಕುಶಾಲ್ ಕುಮಾರ್ ಹಾಗೂ ಆಡಿಯೋಲಜಿಸ್ಟ್ ಹಾಗೂ ಸ್ಪೀಚ್ ಥೆರಪಿಸ್ಟ್ ಎ.ಕೃತಿಕಾ ಅವರುಗಳು ಶ್ರವಣ ಪರೀಕ್ಷೆ ನಡೆಸಿದರು.
“ಸೆಸ್ಕ್ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಆರೋಗ್ಯದ ಬಗ್ಗೆ ಸೆಸ್ಕ್ ಹೆಚ್ಚಿನ ಕಾಳಜಿ ವಹಿಸುತ್ತಾ ಬಂದಿದೆ. ಇದಕ್ಕಾಗಿ ಸಿಬ್ಬಂದಿಯ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಸಲುವಾಗಿ ಈಗಾಗಲೇ ಕ್ಯಾಶ್ ಲೆಸ್ ಹೆಲ್ತ್ ಕಾರ್ಡ್ ನೀಡಲಾಗಿದೆ. ಇದರ ಜತೆಗೆ ಇತ್ತೀಚೆಗೆ ಸೆಸ್ಕ್ ನಿಗಮ ಕಚೇರಿ ಸಿಬ್ಬಂದಿ, ಹೊರ ಗುತ್ತಿಗೆ ನೌಕರರಿಗೆ ಆರೋಗ್ಯ ತಪಾಸಣೆ ಸಹ ನಡೆಸಲಾಗಿದೆ. ಪ್ರತಿಯೊಬ್ಬ ನೌಕರರು ಇಂತಹ ಕಾರ್ಯಕ್ರಮಗಳ ಉಪಯೋಗ ಪಡೆದುಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು ಹೇಳಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…