ಮೈಸೂರು ನಗರ

ಸೆಸ್ಕ್‌ ಅಧಿಕಾರಿಗಳು, ಸಿಬ್ಬಂದಿಗೆ ಉಚಿತ ಶ್ರವಣ ಪರೀಕ್ಷೆ

ನಿಗಮ ಕಚೇರಿಯಲ್ಲಿ ಎರಡು ದಿನಗಳ ಶಿಬಿರ ಆಯೋಜನೆ

ಮೈಸೂರು : ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌) ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರಿಗೆ ನಿಗಮದ ವತಿಯಿಂದ ಉಚಿತ ಶ್ರವಣ ಪರೀಕ್ಷೆ ಶಿಬಿರ ನಡೆಸಲಾಗುತ್ತಿದೆ.

ಸೆಸ್ಕ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಫೋಕಸ್‌ ಸ್ಪೀಚ್‌ ಅಂಡ್‌ ಹಿಯರಿಂಗ್‌ ಕ್ಲಿನಿಕ್‌ ಸಹಯೋಗದಲ್ಲಿ ಸೆಸ್ಕ್ ಆಯೋಜಿಸಿರುವ ಎರಡು ದಿನಗಳ ಶಿಬಿರಕ್ಕೆ ಶಾಸಕರೂ ಆಗಿರುವ ನಿಗಮದ ಅಧ್ಯಕ್ಷ ರಮೇಶ್‌ ಬಂಡಿಸಿದ್ದೇಗೌಡ ಹಾಗೂ ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು ಚಾಲನೆ ನೀಡಿದರು.

ದಿನವಿಡೀ ನಡೆದ ಶಿಬಿರದಲ್ಲಿ ಸೆಸ್ಕ್‌ ಪ್ರಧಾನ ಕಚೇರಿಯ ಅಧಿಕಾರಿಗಳು, ಸಿಬ್ಬಂದಿ, ಗುತ್ತಿಗೆ ಹಾಗೂ ಹೊರ ಗುತ್ತಿಗೆಯಲ್ಲಿ ಕೆಲಸ ಮಾಡುತ್ತಿರುವ ಡೇಟಾ ಎಂಟ್ರಿ ಸಿಬ್ಬಂದಿ, ವಾಹನ ಚಾಲಕರುಗಳು, ನಿಗಮ ಕಚೇರಿಯ ಸಹಾಯಕ ಸಿಬ್ಬಂದಿ ಸೇರಿದಂತೆ 300ಕ್ಕೂ ಹೆಚ್ಚು ಮಂದಿ ಶ್ರವಣ ದೋಷದ ಪರೀಕ್ಷೆ ಮಾಡಿಸಿಕೊಂಡು, ಅಗತ್ಯ ಚಿಕಿತ್ಸೆ ಹಾಗೂ ಸಲಹೆಗಳನ್ನು ಪಡೆದುಕೊಂಡರು.

ಶಿಬಿರದಲ್ಲಿ ಫೋಕಸ್‌ ಸ್ಪೀಚ್‌ ಅಂಡ್‌ ಹಿಯರಿಂಗ್‌ ಕ್ಲಿನಿಕ್‌ನ ಆಡಿಯೋಲಜಿಸ್ಟ್‌ ಎ.ಕುಶಾಲ್‌ ಕುಮಾರ್‌ ಹಾಗೂ ಆಡಿಯೋಲಜಿಸ್ಟ್‌ ಹಾಗೂ ಸ್ಪೀಚ್‌ ಥೆರಪಿಸ್ಟ್‌ ಎ.ಕೃತಿಕಾ ಅವರುಗಳು ಶ್ರವಣ ಪರೀಕ್ಷೆ ನಡೆಸಿದರು.

“ಸೆಸ್ಕ್‌ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಆರೋಗ್ಯದ ಬಗ್ಗೆ ಸೆಸ್ಕ್‌ ಹೆಚ್ಚಿನ ಕಾಳಜಿ ವಹಿಸುತ್ತಾ ಬಂದಿದೆ. ಇದಕ್ಕಾಗಿ ಸಿಬ್ಬಂದಿಯ ಆರ್ಥಿಕ ಹೊರೆಯನ್ನು ಕಡಿಮೆ ಮಾಡುವ ಸಲುವಾಗಿ ಈಗಾಗಲೇ ಕ್ಯಾಶ್ ಲೆಸ್ ಹೆಲ್ತ್ ಕಾರ್ಡ್ ನೀಡಲಾಗಿದೆ. ಇದರ ಜತೆಗೆ ಇತ್ತೀಚೆಗೆ ಸೆಸ್ಕ್ ನಿಗಮ ಕಚೇರಿ ಸಿಬ್ಬಂದಿ, ಹೊರ ಗುತ್ತಿಗೆ ನೌಕರರಿಗೆ ಆರೋಗ್ಯ ತಪಾಸಣೆ ಸಹ ನಡೆಸಲಾಗಿದೆ. ಪ್ರತಿಯೊಬ್ಬ ನೌಕರರು ಇಂತಹ ಕಾರ್ಯಕ್ರಮಗಳ ಉಪಯೋಗ ಪಡೆದುಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದು ಸೆಸ್ಕ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ ರಾಜು ಹೇಳಿದರು.

ಆಂದೋಲನ ಡೆಸ್ಕ್

Recent Posts

ಮುತ್ತತ್ತಿಯಲ್ಲಿ ಘೋರ ದುರಂತ: ಒಂದೇ ಕುಟುಂಬದ ನಾಲ್ವರು ಮಹಿಳೆಯರು ಸೇರಿ ಐವರು ನೀರುಪಾಲು

ಹಲಗೂರು: ಸಮೀಪದ ಪ್ರವಾಸಿ ತಾಣವಾದ ಮುತ್ತತ್ತಿಯ ಕಾವೇರಿ ನದಿಯಲ್ಲಿ ಸೆಲ್ಫಿ ತೆಗೆಯುವ ವೇಳೆ ಕಾಲು ಜಾರಿ ನೀರಿನ ಪ್ರಬಲ ಸೆಳೆತಕ್ಕೆ…

10 hours ago

ಚಾಮರಾಜನಗರ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆ

ಚಾಮರಾಜನಗರ: ನಗರದ ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹುಸಿ ಬಾಂಬ್ ಬೆದರಿಕೆಯ ಇ-ಮೇಲ್ ಸಂದೇಶ ಬಂದ ಹಿನ್ನೆಲೆಯಲ್ಲಿ ಪೊಲೀಸರು,…

13 hours ago

ಬಿಆರ್‌ಟಿ ವ್ಯಾಪ್ತಿಯಲ್ಲಿ ಕಾಡಾನೆ ಕಳೇಬರ ಪತ್ತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಪುಣಜನೂರು ವನ್ಯಜೀವಿ ವಲಯ ವ್ಯಾಪ್ತಿಯ ಕಾರೆಪಾಳ್ಯ ಗಸ್ತಿನ ಸಮೀಪ ಅರಣ್ಯ ಪ್ರದೇಶದಿಂದ ಸುಮಾರು…

13 hours ago

ತೊಟ್ಟಿಲುಶಾಸ್ತ್ರ, ಸಿದ್ದಪ್ಪಾಜಿ ಕಂಡಾಯೋತ್ಸವದಲ್ಲಿ ತಾರಾ, ಶಶಿಕುಮಾರ್ ಭಾಗಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ದೊಡ್ಡಾಲತ್ತೂರು ಗ್ರಾಮದ ಶ್ರೀ ಮಕ್ಕಳೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ…

13 hours ago

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

14 hours ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

16 hours ago