Mysuru
ಮೈಸೂರು: ಆರ್ಸಿಬಿ ಗೆದ್ದರೆ ಮೈಸೂರಿನ ಎಲ್ಲಾ ಇಂದಿರಾ ಕ್ಯಾಂಟೀನ್ಗಳಲ್ಲೂ ಉಚಿತ ಹೋಳಿಗೆ ಊಟ ನೀಡಲಾಗುವುದು ಎಂದು ಮೈಸೂರಿನ ಆರ್ಸಿಬಿ ಅಭಿಮಾನಿ ಬಸವರಾಜ ಬಸಪ್ಪ ಘೋಷಣೆ ಮಾಡಿದ್ದಾರೆ.
ಮೈಸೂರಿನ ಗನ್ ಹೌಸ್ ವೃತ್ತದಲ್ಲಿ ಸಾಂಕೇತಿಕವಾಗಿ ಇಂದೇ ಉಚಿತ ಹೋಳಿಗೆ ಊಟ ವಿತರಣೆ ಮಾಡಲಾಗುತ್ತಿದ್ದು, ನಾಳೆ ಮೈಸೂರಿನ 16 ಕ್ಯಾಂಟೀನ್ಗಳಲ್ಲೂ ಉಚಿತ ಹೋಳಿಗೆ ಊಟ ವಿತರಣೆ ಮಾಡಲಾಗುತ್ತದೆ.
ಇದನ್ನೂ ಓದಿ:- ಮೈಸೂರಿನಲ್ಲಿ ಆರ್ಸಿಬಿ ಟೀಂಗಾಗಿ ವಿಶೇಷ ಕಾರು ಸಿದ್ಧ
ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಬಳಿ ಮನವಿ ಮಾಡಿರುವ ಆರ್ಸಿಬಿ ಅಭಿಮಾನಿಗಳು ರಾಜ್ಯದ ಎಲ್ಲಾ ಇಂದಿರಾ ಕ್ಯಾಂಟೀನ್ಗಳಲ್ಲೂ ಉಚಿತ ಹೋಳಿಗೆ ಊಟ ಹಾಕಿಸಿ ಎಲ್ಲಾ ಕನ್ನಡಿಗರು ಸಿಹಿ ಹೋಳಿಗೆ ರುಚಿ ಸವಿಯಲಿ. ಆರ್ಸಿಬಿ ಗೆಲುವಿನ ಸಂಭ್ರಮ ಹಂಚಿಕೊಳ್ಳಲಿ ಎಂದು ಮನವಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರು ಈ ಮನವಿಗೆ ಸ್ಪಂದಿಸುವ ಸಾಧ್ಯತೆಗಳಿದ್ದು, ನಾಳೆ ಆರ್ಸಿಬಿ ಫೈನಲ್ನಲ್ಲಿ ಗೆದ್ದರೆ ಹೋಳಿಗೆ ಊಟ ಸವಿಯುವ ಅವಕಾಶ ಸಿಗಲಿದೆ.
ಚೆನ್ನೈ: ತಮಿಳುನಾಡಿನ ಹಾಲಿ ಸಿಎಂ ಎಂ.ಕೆ.ಸ್ಟಾಲಿನ್ ಸ್ವ ಕ್ಷೇತ್ರದಲ್ಲೇ ಸೋಲು ಅನುಭವಿಸಿದ್ದಾರೆ. ಈ ಮೂಲಕ ಸತತ 2ನೇ ಬಾರಿಗೆ ಸರ್ಕಾರ…
ದಾವಣಗೆರೆ: ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಪ್ರಕಟವಾಗಿದ್ದು, ಎರಡೂ ಕ್ಷೇತ್ರದಲ್ಲೂ ಕಾಂಗ್ರೆಸ್ ಜಯಭೇರಿ ಬಾರಿಸಿದೆ.…
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವ ಮತ್ತು ವಿಕಸಿತ ಭಾರತದ ಮೇಲೆ ಜನರು ಹೊಂದಿರುವ ನಂಬಿಕೆಯಿಂದಾಗಿ ಎನ್ಡಿಎ…
ಬೆಂಗಳೂರು: ತಮಿಳುನಾಡಿನ ಮತ ಎಣಿಕೆಯಲ್ಲಿ ಟಿವಿಕೆ ಭಾರೀ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆ ಪಕ್ಷದ ಮುಖ್ಯಸ್ಥ ನಟ ವಿಜಯ್ಗೆ ಸಿಎಂ…
ಬಾಗಲಕೋಟೆ : ಹಿರಿಯ ನಾಯಕ ಎಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್…
ತಿರುವನಂತಪುರಂ : ಕೇರಳ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಮುನ್ನಡೆ ಸಾಧಿಸುತ್ತಿದ್ದು, ದಶಕದ ನಂತರ ಅಧಿಕಾರಕ್ಕೆ ಮರಳುವ ಸಂಭವನೀಯ…