ಮೈಸೂರು : ಆಷಾಢ ಶುಕ್ರವಾರದ ಪೂಜೆಗೆ ಜಿಲ್ಲಾಡಳಿತದಿಂದ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆಯನ್ನ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ವರ್ಷವೂ ಕೂಡ ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬಂದು ಸರದಿ ಸಾಲಿನಲ್ಲಿ ನಿಂತು ತಾಯಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ ಜಿಲ್ಲಾಡಳಿತ ಕೂಡ ಅಧಿಕಾರಗಳ ಜೊತೆ ಸಭೆ ನಡೆಸಿ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿದೆ.
ಚಾಮುಂಡೇಶ್ವರಿ ದೇವಾಲಯದಲ್ಲಿ ಜುಲೈ ೧೨ , ೧೯,೨೬ ಹಾಗೂ ವರ್ದಂತಿಯ ೨೭ ರಂದು ಮತ್ತು ಆಗಸ್ಟ್ ೨ ರ ಕಡೆಯ ಶುಕ್ರವಾರ ಈ ಐದು ದಿನಗಳು ಮಾತ್ರ ದೇವಾಲಯದ ವತಿಯಿಂದ KSRTC ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಖಾಸಗಿ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಆಷಾಢ ಮಾಸದ ಶನಿವಾರ ಮತ್ತು ಭಾನುವಾರ ಗಳಂದು ಸಾರ್ವಜನಿಕ ವಾಹನಗಳ ಪ್ರವೇಶವನ್ನು ಚಾಮುಂಡಿಬೆಟ್ಟದಲ್ಲಿ ನಿರ್ಬಂಧಿಸಲಾಗಿದ್ದು,ಲಲಿತಾ ಮಹಲ್ ಪಾರ್ಕಿಂಗ್ ನಲ್ಲೆ ಸಾರ್ವಜನಿಕರುತಮ್ಮ ವಾಹನವನ್ನು ಪಾರ್ಕಿಂಗ್ ಮಾಡಿ KSRTC ಬಸ್ ಮೂಲಕ ಹಣವನ್ನು ಪಾವತಿ ಟಿಕೆಟ್ ಪಡೆದು ಬೆಟ್ಟಕ್ಕೆ ಆಗಮಿಸಬೇಕಾಗಿದೆ.
ಇನ್ನು ತಾಯಿ ಚಾಮುಂಡೇಶ್ವರಿ ದೇವಾಲಯದ ಪ್ರವೇಶಕ್ಕೆ ಯಾವುದೇ ರೀತಿಯ ಪಾಸ್ ವ್ಯವಸ್ಥೆ ಮಾಡಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷವಾಗಿ ವ್ಯವಸ್ಥೆ ಮಾಡಲಾಗಿರುವ ೫೦ ಹಾಗೂ ೩೦೦ ರೂಪಾಯಿ ಪ್ರವೇಶ ಮತ್ತು ಸರ್ವದರ್ಶನದ ಮೂಲಕ ದೇವಾಲಯಕ್ಕೆ ಪ್ರವೇಶ ಪಡೆಯುವ ಅವಕಾಶವಿದೆ.
ಲಲಿತಾ ಮಹಲ್ ಪಾರ್ಕಿಂಗ್ ಸ್ಥಳದಲ್ಲಿ ಮತ್ತು ಮಹಿಷಾಸುರ ವೃತ್ತದ ಬಳಿ ಹಾಗೂ ವಿಶೇಷ ಪ್ರವೇಶದ ಬಳಿಯಲ್ಲಿಯೇ ಪ್ರವೇಶದ ಟಿಕೆಟ್ ಗಳನ್ನ ವಿತರಿಸುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ತುರ್ತು ಚಿಕಿತ್ಸೆ ವ್ಯವಸ್ಥೆ ಹಾಗೂ ತುರ್ತು ವಾಹನದ ವ್ಯವಸ್ಥೆ ಮಾಡಲಾಗಿದೆ.
ಶ್ರೀರಂಗಪಟ್ಟಣ ತಾಲ್ಲೂಕಿನ ನಗುವನಹಳ್ಳಿಯ ರಾಜೀವ್ ಗಾಂಧಿ ನಗರದಲ್ಲಿ ಬಸ್ ತಂಗುದಾಣವಿಲ್ಲದೆ ಸಾರ್ವಜನಿಕರು ಬೇಸಿಗೆಯಲ್ಲಿ ಬಿಸಿಲಿನಲ್ಲಿ ಹಾಗೂ ಮಳೆಗಾಲದಲ್ಲಿ ಮಳೆಯಲ್ಲೇ ನಿಲ್ಲುವುದು…
ಲೋಕಸಭೆ ಮತ್ತು ವಿಧಾನಸಭೆ ಅಧಿವೇಶನಗಳು ಜನರ ಸಮಸ್ಯೆಗಳನ್ನು ಚರ್ಚಿಸಲು, ನೀತಿಗಳನ್ನು ರೂಪಿಸಲು ಹಾಗೂ ದೇಶ, ರಾಜ್ಯದ ಅಭಿವೃದ್ಧಿ ಕುರಿತು ಚರ್ಚಿಸಲು…
ಇತ್ತೀಚೆಗೆ ನಡೆದ ರಾಜ್ಯ ವಿಧಾನಮಂಡಲದ ವಿಶೇಷ ಅಧಿವೇಶನದಲ್ಲಿ ಕೆಲವು ಸದಸ್ಯರು ನಡೆದುಕೊಂಡ ರೀತಿ ತಲೆ ತಗ್ಗಿಸುವಂತಿದೆ. ಅವರು ಬಳಸಿದ ಪದ…
ಅತ್ಯಂತ ಅಪಾಯಕಾರಿ ಪರಿಸ್ಥಿತಿಯೊಂದನ್ನು ನನಗೆ ಹಸ್ತಾಂತರಿಸಲಾಗಿತ್ತು: ನರವಣೆ ‘ಜವಾಬ್ದಾರಿಯಿಂದ ಸಂಪೂರ್ಣವಾಗಿ ದೂರವೇ ಉಳಿದಿದ್ದ ಪ್ರಧಾನಿ’ ‘ಇಂದಿರಾ ಗಾಂದಿ, ವಾಜಪೇಯಿ ಪ್ರಧಾನಿಗಳಾಗಿದ್ದಾಗ…
ಲಕ್ಷ್ಮೀಕಾಂತ್ ಕೊಮಾರಪ್ಪ ಜನತೆಯ ೩೦ ವರ್ಷಗಳ ಕನಸು ಕೊನೆಗೂ ನನಸು; ೧.೦೫ ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನಿಲ್ದಾಣ ಸೋಮವಾರಪೇಟೆ:…
ಮಹೇಂದ್ರ ಹಸಗೂಲಿ ನಿಯಮಾವಳಿ ಪಾಲಿಸದ ಕ್ರಷರ್; ದೂಳು-ಶಬ್ದ ಮಾಲಿನ್ಯ ಆರೋಪ ಗುಂಡ್ಲುಪೇಟೆ: ತಾಲ್ಲೂಕಿನ ಮಡಹಳ್ಳಿ ಗ್ರಾಮದ ಬಳಿ ಇರುವ ಪಾರ್ವತಿ…