ಮೈಸೂರು : ಆಷಾಢ ಶುಕ್ರವಾರದ ಪೂಜೆಗೆ ಜಿಲ್ಲಾಡಳಿತದಿಂದ ಚಾಮುಂಡಿಬೆಟ್ಟದಲ್ಲಿ ಸಕಲ ಸಿದ್ಧತೆಯನ್ನ ಮಾಡಿಕೊಳ್ಳಲಾಗುತ್ತಿದೆ. ಪ್ರತಿ ವರ್ಷವೂ ಕೂಡ ಆಷಾಢ ಶುಕ್ರವಾರದಂದು ಚಾಮುಂಡಿಬೆಟ್ಟಕ್ಕೆ ಲಕ್ಷಾಂತರ ಭಕ್ತರು ಬಂದು ಸರದಿ ಸಾಲಿನಲ್ಲಿ ನಿಂತು ತಾಯಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುತ್ತಾರೆ. ಹೀಗಾಗಿ ಜಿಲ್ಲಾಡಳಿತ ಕೂಡ ಅಧಿಕಾರಗಳ ಜೊತೆ ಸಭೆ ನಡೆಸಿ ಅಗತ್ಯ ಕ್ರಮಗಳನ್ನ ಕೈಗೊಳ್ಳಲಾಗಿದೆ.
ಚಾಮುಂಡೇಶ್ವರಿ ದೇವಾಲಯದಲ್ಲಿ ಜುಲೈ ೧೨ , ೧೯,೨೬ ಹಾಗೂ ವರ್ದಂತಿಯ ೨೭ ರಂದು ಮತ್ತು ಆಗಸ್ಟ್ ೨ ರ ಕಡೆಯ ಶುಕ್ರವಾರ ಈ ಐದು ದಿನಗಳು ಮಾತ್ರ ದೇವಾಲಯದ ವತಿಯಿಂದ KSRTC ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಲು ವ್ಯವಸ್ಥೆ ಕಲ್ಪಿಸಲಾಗಿದೆ. ಖಾಸಗಿ ವಾಹನಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ.
ಆಷಾಢ ಮಾಸದ ಶನಿವಾರ ಮತ್ತು ಭಾನುವಾರ ಗಳಂದು ಸಾರ್ವಜನಿಕ ವಾಹನಗಳ ಪ್ರವೇಶವನ್ನು ಚಾಮುಂಡಿಬೆಟ್ಟದಲ್ಲಿ ನಿರ್ಬಂಧಿಸಲಾಗಿದ್ದು,ಲಲಿತಾ ಮಹಲ್ ಪಾರ್ಕಿಂಗ್ ನಲ್ಲೆ ಸಾರ್ವಜನಿಕರುತಮ್ಮ ವಾಹನವನ್ನು ಪಾರ್ಕಿಂಗ್ ಮಾಡಿ KSRTC ಬಸ್ ಮೂಲಕ ಹಣವನ್ನು ಪಾವತಿ ಟಿಕೆಟ್ ಪಡೆದು ಬೆಟ್ಟಕ್ಕೆ ಆಗಮಿಸಬೇಕಾಗಿದೆ.
ಇನ್ನು ತಾಯಿ ಚಾಮುಂಡೇಶ್ವರಿ ದೇವಾಲಯದ ಪ್ರವೇಶಕ್ಕೆ ಯಾವುದೇ ರೀತಿಯ ಪಾಸ್ ವ್ಯವಸ್ಥೆ ಮಾಡಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷವಾಗಿ ವ್ಯವಸ್ಥೆ ಮಾಡಲಾಗಿರುವ ೫೦ ಹಾಗೂ ೩೦೦ ರೂಪಾಯಿ ಪ್ರವೇಶ ಮತ್ತು ಸರ್ವದರ್ಶನದ ಮೂಲಕ ದೇವಾಲಯಕ್ಕೆ ಪ್ರವೇಶ ಪಡೆಯುವ ಅವಕಾಶವಿದೆ.
ಲಲಿತಾ ಮಹಲ್ ಪಾರ್ಕಿಂಗ್ ಸ್ಥಳದಲ್ಲಿ ಮತ್ತು ಮಹಿಷಾಸುರ ವೃತ್ತದ ಬಳಿ ಹಾಗೂ ವಿಶೇಷ ಪ್ರವೇಶದ ಬಳಿಯಲ್ಲಿಯೇ ಪ್ರವೇಶದ ಟಿಕೆಟ್ ಗಳನ್ನ ವಿತರಿಸುವ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ, ವೈದ್ಯಕೀಯ ತುರ್ತು ಚಿಕಿತ್ಸೆ ವ್ಯವಸ್ಥೆ ಹಾಗೂ ತುರ್ತು ವಾಹನದ ವ್ಯವಸ್ಥೆ ಮಾಡಲಾಗಿದೆ.
ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…
ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…
ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…
ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…
ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…
ತಕ್ಷಣವೇ ನೈಸ್ ರಸ್ತೆ ಟೋಲ್ ಸಂಗ್ರಹಕ್ಕೆ ತಡೆ ಹಾಕಬೇಕು ಎಂದು ಕೇಂದ್ರ ಸಚಿವರ ಅಗ್ರಹ ಹೈಕೋರ್ಟ್ ಅಭಿಪ್ರಾಯದಂತೆ ನೈಸ್ ಯೋಜನೆಯನ್ನು…