ಮೈಸೂರು ನಗರ

ಮುಡಾದಲ್ಲಿ ಅಕ್ರಮ ಪ್ರಭಾವ ಆರೋಪ| ಲೋಕಾಯುಕ್ತ ತನಿಖೆ ಮಾಡಿದರೆ ಮಾಡಲಿ, ನನ್ನದೇನು ಅಭ್ಯಂತರವಿಲ್ಲ: ಜಿ.ಡಿ.ದೇವೇಗೌಡ

ಮೈಸೂರು: ನನ್ನ ಮಗಳು ಮತ್ತು ಅಳಿಯ ಮುಡಾದಿಂದ 50:50 ಅನುಪಾತದ ಬದಲಿ ನಿವೇಶನಗಳನ್ನು ಪಡೆಯುವಾಗ ವೈಟ್‌ ಮನಿ ನೀಡಿ ನಿವೇಶನವನ್ನು ಖರೀದಿಸಿದ್ದಾರೆ. ಈ ಬಗ್ಗೆ ಲೋಕಾಯುಕ್ತ ತನಿಖೆ ಮಾಡಿದರೆ ಮಾಡಲಿ. ನನ್ನದೇನು ಅಭ್ಯಂತರವಿಲ್ಲ ಎಂದು ಶಾಸಕ ಜಿ.ಡಿ.ದೇವೇಗೌಡ ತಿಳಿಸಿದ್ದಾರೆ.

ಮೈಸೂರಿನಲ್ಲಿ ಇಂದು(ಜನವರಿ.11) ಮುಡಾದಲ್ಲಿ ಅಕ್ರಮ ಪ್ರಭಾವ ಬೀರಿರುವ ಬಗ್ಗೆ ಸ್ನೇಹಮಯಿ ಕೃಷ್ಣ ದೂರು ನೀಡಿರುವ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಮುಡಾದಿಂದ ನನ್ನ ಮಗಳು ಮತ್ತು ಅಳಿಯ ವೈಟ್‌ ಮನಿ ನೀಡಿಯೇ ನಿವೇಶನವನ್ನು ಖರೀದಿಸಿದ್ದಾರೆ. ಈ ವಿಚಾರದ ಬಗ್ಗೆ ನನಗೆ ತಿಳಿದಿರಲಿಲ್ಲ. ಆದರೆ ಇಂದು ಬೆಳಿಗ್ಗೆ ಮಗಳಿಗೆ ಕರೆ ಮಾಡಿ ಈ ವಿಷಯನ್ನು ತಿಳಿದುಕೊಂಡೆ ಎಂದಿದ್ದಾರೆ.

ಈ ಪ್ರಕರಣದ ಬಗ್ಗೆ ಲೋಕಾಯುಕ್ತರಿಗೆ ದೂರು ನೀಡಿದ್ದರೆ ಸಂತೋಷ. ನಾನು ತಪ್ಪು ಮಾಡಿದ್ದರೆ ನನ್ನ ವಿರುದ್ಧ ತನಿಖೆ ಆರಂಭಿಸಲಿ. ನಿವೇಶನ ಪಡೆದು ಮಾರಾಟ ಮಾಡಿದವರಿಗೆ ಮಾರಾಟ ಮಾಡುವ ಹಕ್ಕಿದೆ. ಹಾಗಾಗಿ ನನ್ನ ಮಗಳು ಯಾರ ಜೊತೆ ಮಾತನಾಡಿ ನಿವೇಶವನ್ನು ಪಡೆದಿದ್ದಾರೋ ತಿಳಿದಿಲ್ಲ. ಆದರೆ ನನ್ನ ಮೇಲಿರುವ ಪ್ರಭಾವ ಅಕ್ರಮ ಆರೋಪದ ತನಿಖೆಯಿಂದ ತಿಳಿಯಲಿದೆ ಎಂದು ಹೇಳಿದ್ದಾರೆ.

ಇನ್ನೂ ಮುಡಾ ವಿಚಾರದಲ್ಲಿ ನಾನು ತಪ್ಪು ಮಾಡಿದ್ದರೆ ಲೋಕಾಯುಕ್ತದಿಂದ ತನಿಖೆಯಾಗಿ ನನ್ನ ವಿರುದ್ಧ ಕ್ರಮ ಕೈಗೊಳ್ಳಲಿ ನನ್ನದೇನು ಅಭ್ಯಂತರವಿಲ್ಲ. ದೂರು ನೀಡಿರುವ ಸ್ನೇಹಮಯಿ ಕೃಷ್ಣ ನಮ್ಮ ಹುಡುಗನೇ ಒಳ್ಳೆ ಕೆಲಸ ಮಾಡುತ್ತಿದ್ದಾರೆ. ಅವರು ನೀಡಿರುವ ದೂರಿನಿಂದ ರಾಜಕಾರಣಿಗಳು ಮತ್ತು ಅಧಿಕಾರಿಗಳು ತಪ್ಪು ಮಾಡಿದರೆ ಅವರಿಗೆ ಶಿಕ್ಷೆಯಾಗಲಿ ಎಂದು ಹೋರಾಟ ಮಾಡುತ್ತಿದ್ದಾರೆ. ಹೀಗಾಗಿ ಸ್ನೇಹಮಯಿ ಕೃಷ್ಣ ಅವರಿಗೆ ಯಶಸ್ಸು ಸಿಗಲಿ ಎಂದು ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ.

ನಾಳೆ ಜೆಡಿಎಸ್‌ ರಾಜ್ಯಾಧ್ಯಕ್ಷರ ಆಯ್ಕೆ ಸಭೆಗೆ ನಾನು ಭಾಗಿಯಾಗಲ್ಲ

ಇದೇ ಸಂದರ್ಭದಲ್ಲಿ ನಾಳೆ(ಜನವರಿ.12) ನಡೆಯಲಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಆಯ್ಕೆ ಸಭೆ ಕುರಿತು ಮಾತನಾಡಿದ ಅವರು, ನಾನು ಕ್ಷೇತ್ರದ ಅಭಿವೃದ್ಧಿಗಾಗಿ ಓಡಾಟ ಮಾಡುತ್ತಿದ್ದೇನೆ. ಈ ಕಾರಣಕ್ಕೆ ಸಭೆಯಾಗಿಲು ಸಾಧ್ಯವಾಗುತ್ತಿಲ್ಲ ಅಷ್ಟೇ. ಅದನ್ನು ಹೊರತು ಪಡಿಸಿದರೆ ನನಗೆ ಯಾವುದೇ ಬೇಸರವಿಲ್ಲ. ಇನ್ನೂ ದಿಶಾ ಸಭೆಗೆ ನಮ್ಮ ನಾಯಕರು ಬಂದಾಗ ಹೋಗಬೇಕಿತ್ತು. ಆದರೆ ಆರೋಗ್ಯ ಸರಿ ಇಲ್ಲದಿದ್ದರಿಂದ ನಾನು ಹೋಗಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ನಿಖಿಲ್‌ ಕುಮಾರಸ್ವಾಮಿಗೆ ಜೆಡಿಎಸ್‌ ರಾಜ್ಯಾಧ್ಯಕ್ಷ ಸ್ಥಾನ ನೀಡುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ನಮ್ಮ ಪಕ್ಷದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಿರಿಯರಿದ್ದಾರೆ. ಅಲ್ಲದೇ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿದ್ದಾರೆ. ಹೀಗಾಗಿ ಎಲ್ಲರೂ ಸೇರಿ ಯಾರನ್ನೂ ಆಯ್ಕೆ ಮಾಡುತ್ತಾರೆ, ಅವರೇ ಅಧ್ಯಕ್ಷರಾಗುತ್ತಾರೆ. ಜೊತೆಗೆ ನನ್ನ ಮಗ ಜಿ.ಡಿ. ಹರೀಶ್‌ ಗೌಡ ಹಾಗೂ ನಿಖಿಲ್‌ ಕುಮಾರಸ್ವಾಮಿ ಇಬ್ಬರೂ ಸ್ನೇಹಿತರಾಗಿದ್ದಾರೆ. ಆ ಕಾರಣಕ್ಕೆ ನಿಖಿಲ್‌ ರಾಜ್ಯಾಧ್ಯಕ್ಷರಾಗಲಿ ಅನ್ನೋ ಆಸೆ ವ್ಯಕ್ಯಪಡಿಸಿದ್ದಾರೆ. ಅದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿದ್ದಾರೆ.

2028ರ ವಿಧಾನಸಭೆ ಚುನಾವಣೆ ನಂತರ ನಾನೇ ಸಿಎಂ ಆಗುತ್ತೇನೆಂಬ ವಿಚಾರ

ಸಚಿವ ಸತೀಶ್‌ ಜಾರಕಿಹೊಳಿ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು, 2028ರ ವಿಧಾನಸಭೆ ಚುನಾವಣೆಯ ನಂತರ ನಾನು ಸಿಎಂ ಆಗುತ್ತೇನೆಂದು ಹೇಳಿಕೆ ನೀಡಿರುವುದಕ್ಕೆ ಪ್ರತಿಕ್ರಿಯೆ ನೀಡಿದ ಜಿ.ಡಿ.ದೇವೇಗೌಡರು, ಈ ರೀತಿ ಯಾರೇ ಹೇಳಿಕೆ ನೀಡಿದ್ದರೂ ಅದು ಭ್ರಮೆಯಾಗುತ್ತದೆ. ಏಕೆಂದರೆ 2028ಕ್ಕೆ ಏನಾಗುತ್ತೆ ಎಂಬುದನ್ನು ಯಾರಿಂದಲೂ ಹೇಳಲು ಸಾಧ್ಯವಿಲ್ಲ. ಒಂದು ರಾಜ್ಯದ ಮುಖ್ಯಮಂತ್ರಿಯಾಗಬೇಕೆಂದರೆ ಸಾರ್ವಜನಿಕರು ಮತ ನೀಡಬೇಕು. ಅಲ್ಲದೇ ಶಾಸಕರೇ ಸಿಎಂ ಅನ್ನು ಆಯ್ಕೆ ಮಾಡಬೇಕು. ಹೀಗಿರುವಾಗ ನಾನೇ ಸಿಎಂ ಆಗುತ್ತೇನೆಂಬ ಹೇಳಿಕೆ ಭ್ರಮೆಯಾಗಿದೆ ಎಂದಿದ್ದಾರೆ.

2028ಕ್ಕೆ ಸಿಎಂ ಯಾರಾಗುತ್ತಾರೆಂದು ಹೇಳಲು ನಾನೇನು ಜೋತಿಷಿ ಅಲ್ಲ. ಆದರೂ ಈ ಹಿಂದೆ ಜನರ ಅಭಿಪ್ರಾಯವನ್ನು ಸಂಗ್ರಹಿಸಿ ಬಿ.ಎಸ್‌.ಯಡಿಯೂರಪ್ಪ, ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಸಿಎಂ ಆಗುತ್ತಾರೆಂದು ಹೇಳಿದ್ದೆ ಅಷ್ಟೇ. ಅಲ್ಲದೇ ಈಗ ನನಗೆ ಮುಖ್ಯಮಂತ್ರಿಯಾಗುವ ಆಸೆ ಇಲ್ಲ. ಕೆಲವರು ಸಿಎಂ ಆಗಬೇಕೆಂಬ ಕಾರಣಕ್ಕೆ ಹಣ ಖರ್ಚು ಮಾಡಿ ಕಾದಿದ್ದಾರೆ. ಆದರೆ ನನ್ನ ಹಣ ಮತ್ತು ಆ ಶಕ್ತಿವಿಲ್ಲ ಎಂದು ಹೇಳಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ನೀಟ್-ಯುಜಿ ಮರುಪರೀಕ್ಷೆ : ಪರೀಕ್ಷೆ ಬರೆದ 22 ಲಕ್ಷ ವಿದ್ಯಾರ್ಥಿಗಳು

ಹೊಸದಿಲ್ಲಿ : ದೇಶದಾದ್ಯಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆದ ನೀಟ್-ಯುಜಿ ಮರುಪರೀಕ್ಷೆಯಲ್ಲಿ 22 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ದೇಶದ…

11 hours ago

ತಮಿಳುನಾಡು ಸೀಫುಡ್‌ ಘಟಕದಲ್ಲಿ ಅನಿಲ ಸೋರಿಕೆ ; 7 ಜನ ಸಾವು, ಹಲವರು ಗಂಭೀರ

ಚೆನ್ನೆ : ಇಲ್ಲಿನ ತಿರುವಳ್ಳೂರಿನಲ್ಲಿರುವ ಸೀಗಡಿ ಸಂಸ್ಕರಣಾ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ ಅಮೋನಿಯಾ ಅನಿಲ ಸೋರಿಕೆಯಾಗಿ, ಏಳು ಮಂದಿ ಮಹಿಳಾ…

11 hours ago

ಬೆಂಗಾಳಿಗಳನ್ನು ಬಾಂಗ್ಲಾ ವಲಸಿಗರೆಂದು ಗ್ರಹಿಕೆ ; ಮೈಸೂರು ರೈಲ್ವೆ ನಿಲ್ದಾಣದಲ್ಲಿ ಕೆಲಕಾಲ ಆತಂಕ

ಆಧಾರ್‌ ಕಾರ್ಡ್‌ ಪರಿಶೀಲನೆ ನಂತರ ಶಂಕೆ ನಿವಾರಣೆ ಮೈಸೂರು : ಪಶ್ಚಿಮ ಬಂಗಾಳದಿಂದ ಬಂದವರನ್ನು ಬಾಂಗ್ಲಾ ದೇಶದ ನಿವಾಸಿಗಳೆಂದು ತಿಳಿದ…

13 hours ago

ಚಾ.ನಗರ | ಸಿದ್ದಲಿಂಗಪುರ ಬಳಿ ಹುಲಿ ದಾಳಿ ; 4 ಮೇಕೆಗಳು ಸಾವು

ರೈತರು, ದನಗಾಹಿಗಳಲ್ಲಿ ಆತಂಕ ಬೇಗ ಹುಲಿ ಸೆರೆ ಹಿಡಿಯಲು ಆಗ್ರಹ ಚಾಮರಾಜನಗರ : ತಾಲ್ಲೂಕಿನ ಸಿದ್ದಲಿಂಗಪುರದ ಸಮೀಪ ಭಾನುವಾರ ಮಧ್ಯಾಹ್ನ…

14 hours ago

ಕರ್ನಾಟಕದಲ್ಲಿ ಮುಂಗಾರು ವಿಳಂಬ: ಕಂಗಾಲಾದ ರೈತರು

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ವಿಳಂಬವಾಗಿದ್ದು, ಇದು ಉತ್ಪಾದನೆಯ ಮೇಲೆ ಪರಿಣಾಮ ಬೀರಬಹುದು. ಕೃಷಿ ಇಲಾಖೆಯ ಅಧಿಕಾರಿಗಳು ಬಿತ್ತನೆ ಗುರಿಯ ಶೇಕಡಾ…

17 hours ago

ಇದು ಕೇವಲ ಆರಂಭ: ಮುಂದೆ ಹೋರಾಟ ದೊಡ್ಡಮಟ್ಟದಲ್ಲಿ ಇದೆ ಎಂದ ನಿಖಿಲ್‌ ಕುಮಾರಸ್ವಾಮಿ

ರಾಮನಗರ: ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್‌ ಕೈಗೊಂಡಿರುವ ಕೈಗೊಂಡಿರುವ ಬೃಹತ್‌ ಪಾದಯಾತ್ರೆಯಲ್ಲಿ ಮಾತನಾಡಿದ ಯುವನಾಯಕ ನಿಖಿಲ್‌ ಕುಮಾರಸ್ವಾಮಿ ಇದು ಕೇವಲ…

17 hours ago