ಮೈಸೂರು ನಗರ

ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ವಿಚಾರ: ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯೆ

ಮೈಸೂರು: ಕಾಳಸಂತೆಯಲ್ಲಿ ಗ್ಯಾಸ್‌ ಸಿಲಿಂಡರ್‌ ಮಾರಾಟವಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯೆ ನೀಡಿದ್ದಾರೆ.

ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ಜಂಟಿ ದಾಳಿ ಮುಂದುವರಿದಿರುವ ಬೆನ್ನಲ್ಲೇ ದೇಶದಲ್ಲಿ ಗ್ಯಾಸ್‌ ಸಿಲಿಂಡರ್‌ಗಳಿಗೆ ಅಭಾವ ಶುರುವಾಗಿದೆ. ಈ ಮಧ್ಯೆ ಸಿಲಿಂಡರ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಈ ಕುರಿತು ಮೈಸೂರಿನಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಅವರು, ಪೊಲೀಸರು ಸ್ವಯಂ ಪ್ರೇರಿತರಾಗಿ ಕೇಸ್ ದಾಖಲು ಮಾಡಲು ಬರುವುದಿಲ್ಲ. ಆಹಾರ ಇಲಾಖೆ ಮಾಹಿತಿ ಕೊಟ್ಟರೆ ಪೊಲೀಸರು ದಾಳಿ ಮಾಡಿ ಕೇಸ್ ಹಾಕುತ್ತಾರೆ. ಆಹಾರ ಇಲಾಖೆಯ ಗಮನಕ್ಕೆ ಈ ವಿಚಾರ ಬಂದ ತಕ್ಷಣ ಪೊಲೀಸರ ಗಮನಕ್ಕೆ ತರಬೇಕು. ಆಗ ಮಾತ್ರ ಪೊಲೀಸರು ಕ್ರಮ ವಹಿಸಲು ಸಾಧ್ಯ. ಪೊಲೀಸರೇ ದಾಳಿ ಮಾಡಿ ಸುಮೋಟೊ ಕೇಸ್ ದಾಖಲಿಸಲು ಸಾಧ್ಯವಿಲ್ಲ ಎಂದು ಸ್ಪಷ್ಟನೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

2 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

3 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

3 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

3 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

8 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

11 hours ago