ಮೈಸೂರು ನಗರ

ಗ್ಯಾಸ್ ಸಿಲಿಂಡರ್‌ ಅಭಾವ: ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ: ಎಂ ಲಕ್ಷ್ಮಣ್ ಕಿಡಿ

ಮೈಸೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಕೆಲಸ ಮಾಡಲಾಗುತ್ತಿದೆ ಎಂದು ಕೆಪಿಸಿಸ ವಕ್ತಾರ ಎಂ.ಲಕ್ಷ್ಮಣ್‌ ಆರೋಪಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್‌ಪಿಜಿ ಗ್ಯಾಸ್ ಅಭಾವಕ್ಕೆ ಸಂಬಂಧಿಸಿದಂತೆ ಆಟೋ ಚಾಲಕರನ್ನು ಮುಂದೆ ಬಿಟ್ಟು ರಾಜ್ಯ ಸರ್ಕಾರದ ಮೇಲೆ ಆಪಾದನೆ ಮಾಡುವಂತಹ ಷಡ್ಯಂತ್ರವನ್ನ ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಇಂಧನ ಪೂರೈಕೆ ಮಾಡುವುದು ಕೇಂದ್ರ ಸರ್ಕಾರ. ಕೇಂದ್ರ ಸರ್ಕಾರದ ಮೇಲೆ ಆಪಾದನೆ ಮಾಡುವುದನ್ನು ಬಿಟ್ಟು ರಾಜ್ಯ ಸರ್ಕಾರದ ಮೇಲೆ ನಮ್ಮ ಬಿಜೆಪಿ ನಾಯಕರು ಆಪಾದನೆ ಮಾಡುತ್ತಾರೆ. ಕರ್ನಾಟಕದಲ್ಲಿ ಒಟ್ಟು 372 ಎಲ್‌ಪಿಜಿ ಗ್ಯಾಸ್ ಬಂಕ್‌ಗಳಿವೆ. ಆಟೋ ಸಂಘಟನೆಗಳ ಪದಾಧಿಕಾರಿಗಳು ಅಂತ ಹೇಳಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಮಾತನಾಡುತ್ತಾರೆ. ಆಯಿಲ್ ಕಂಪನಿಗಳು, ಸರಬರಾಜು ಮಾಡುವುದು ಯಾವುದು ಎಂದು ಮೊದಲು ಅರ್ಥ ಮಾಡಿಕೊಳ್ಳಬೇಕು. ಕಳೆದ ಒಂದು ತಿಂಗಳ ಹಿಂದೆ ಒಂದು ಕೆ.ಜಿ ಗ್ಯಾಸ್ ಗೆ 60 ರೂ ಇತ್ತು ಈಗ 162 ರೂ ಬ್ಲಾಕ್ ನಲ್ಲಿ ಮಾರಾಟ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸುಮಾರು 5 ಲಕ್ಷ ಜನ ಆಟೋ ಚಾಲಕರು, ಕಿಗ್ ವರ್ಕರ್ಸ್ ಗೆ ಸಮಸ್ಯೆ ಎದುರಾಗಿದೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸೋಮಣ್ಣ, ಶೋಭಕ್ಕ, ಕುಮಾರಸ್ವಾಮಿ ಸೇರಿದಂತೆ ಯಾರೂ ತುಟಿ ಬಿಚ್ಚುತ್ತಿಲ್ಲ. ರಾಜ್ಯ ಸರ್ಕಾರದ ಮೇಲೆ ಇಲ್ಲ ಸಲ್ಲದ ಆರೋಪ ಮಾಡುವವರಿಗೆ ಕನಿಷ್ಠ ಸಾಮಾನ್ಯ ಜ್ಞಾನ ಇಲ್ಲ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರ ಆಟೋ ಚಾಲಕರಿಗೆ ಪರಿಹಾರ ಕೊಡಬೇಕು ಎನ್ನುತ್ತಾರೆ. ಕರ್ನಾಟಕ ಸರ್ಕಾರ ಯಾಕೆ‌ ಕೊಡಬೇಕು.? ಕೇಂದ್ರ ಸರ್ಕಾರದಿಂದ ನೀವು ಕೊಡಿಸಿ ಎಂದು ಇಂಧನ ಸರಬರಾಜು ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಮಾಡುವ ಆರೋಪವನ್ನು ತಳ್ಳಿಹಾಕಿದರು.

ಇನ್ನು ಹೋಟೆಲ್‌ಗಳೀಗೆ ಸಪ್ಲೈ ಆಗುತ್ತಿದ್ದ ಗ್ಯಾಸ್ ಸರಿಯಾಗಿ ಸಪ್ಲೈ ಆಗದೆ ಬೆಂಗಳೂರಿನಲ್ಲಿ ಶೇ.50.ರಷ್ಟು ಹೋಟೆಲ್ ಗಳು ಮುಚ್ಚಿವೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಸುಮಾರು 8 ಸಾವಿರ ಕೊಟ್ಟು ಬ್ಲ್ಯಾಕ್ ನಲ್ಲಿ ಖರೀದಿ ಮಾಡುತ್ತಿದ್ದಾರೆ. ಮೇ 4 ರ ಬಳಿಕ ದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 150 ಆಗುತ್ತೆ. ಗೃಹ ಬಳಕೆ ಸಿಲಿಂಡರ್ 2 ಸಾವಿರ ಆಗುತ್ತೆ, ವಾಣಿಜ್ಯ ಸಿಲಿಂಡರ್ 4 ಸಾವಿರ ಆಗುತ್ತೆ ಕಾದು ನೋಡಿ. ಈಗಲೇ ಏರಿಕೆ ಮಾಡಬೇಕಿತ್ತು. ಈಗ ಚುನಾವಣೆ ಇದೆ ಅಂತ ಬೆಲೆ ಏರಿಕೆ ಮಾಡುತ್ತಿಲ್ಲ. ಚುನಾವಣೆ ಮುಗಿದ ಮಾರನೇ ದಿನವೇ ಏರಿಕೆ ಮಾಡ್ತಾರೆ ಕಾದು ನೋಡಿ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

 

ಆಂದೋಲನ ಡೆಸ್ಕ್

Recent Posts

ಮೂಕಾಂಬಿಕೆ ದರ್ಶನ ಪಡೆದ ಸಿಎಂ ವಿಜಯ್

ಬೆಳ್ಳಿ ಖಡ್ಗ, ದೇವಿಗೆ ರೇಷ್ಮೆ ಸೀರೆ ಅರ್ಪಿಸಿ ವಿಶೇಷ ಪೂಜೆ, ಪ್ರಾರ್ಥನೆ ಉಡುಪಿ : ತಮಿಳುನಾಡು ಮುಖ್ಯಮಂತ್ರಿ ಸಿ.ಜೋಸೆಫ್ ವಿಜಯ್…

8 hours ago

ವೈದ್ಯಕೀಯ ಕೋರ್ಸ್‌ಗಳ ಶುಲ್ಕ ಹೆಚ್ಚಳ ಇಲ್ಲ

ಹಿಂದಿನ ವರ್ಷದ ಶುಲ್ಕವೇ ಈ ವರ್ಷಕ್ಕೂ ಅನ್ವಯ   ಬೆಂಗಳೂರು :  ಪ್ರಸಕ್ತ ಶೈಕ್ಷಣಿಕ ವರ್ಷದಿಂದ ವೈದ್ಯಕೀಯ, ದಂತ ವೈದ್ಯಕೀಯ,…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ | ಪ್ರೇಕ್ಷಕ ಚಿತ್ರಮಂದಿರದಿಂದ ವಿಮುಖನಾಗುತ್ತಿದ್ದಾನೆಯೇ?

ಸಾಮಾಜಿಕ ತಾಣಗಳಲ್ಲಿ, ನವ ಮಾಧ್ಯಮಗಳಲ್ಲಿ ಅವರವರ ಭಾವಕ್ಕೆ ಅವರವರ ಅನುಭವಕ್ಕೆ ತಕ್ಕಂತೆ ಜಿಜ್ಞಾಸೆ ನಡೆದಿದೆ. ಚಿತ್ರಮಂದಿರಗಳಿಂದ ಪ್ರೇಕ್ಷಕ ದೂರವಾಗುತ್ತಿದ್ದಾನೆ; ಅವನನ್ನು…

14 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜೂನ್‌ 12 ಶುಕ್ರವಾರ

17 hours ago

ಮಳವಳ್ಳಿ | ಚಿರತೆ ಪ್ರತ್ಯಕ್ಷ ; ಆತಂಕ

ಮಳವಳ್ಳಿ: ತಾಲ್ಲೂಕಿನ ತಳಗವಾದಿ ಗ್ರಾಮಕ್ಕೆ ಹೊಂದುಕೊಂಡಂತೆ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರು ಆತಂಕಗೊಂಡಿದ್ದಾರೆ. ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜು ಸಮೀಪವೇ…

1 day ago

ಎಚ್.ಸಿ.ಮಹದೇವಪ್ಪಗೆ ಸಚಿವ ಸ್ಥಾನ ನೀಡಲು ಆಗ್ರಹ

ಬೆಂಗಳೂರು : ಕರ್ನಾಟಕದ ಪ್ರಭಾವಿ ದಲಿತ ಸಮುದಾಯದ ನಾಯಕ ಹಾಗೂ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಅವರಿಗೆ ಮುಖ್ಯಮಂತ್ರಿ ಡಿ.ಕೆ…

1 day ago