ಮೈಸೂರು ನಗರ

ಗ್ಯಾಸ್ ಸಿಲಿಂಡರ್‌ ಅಭಾವ: ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ: ಎಂ ಲಕ್ಷ್ಮಣ್ ಕಿಡಿ

ಮೈಸೂರು: ರಾಜ್ಯದಲ್ಲಿ ಗ್ಯಾಸ್‌ ಸಿಲಿಂಡರ್‌ ಅಭಾವ ಸೃಷ್ಟಿಯಾಗಿರುವ ಹಿನ್ನೆಲೆಯಲ್ಲಿ ಆಟೋ ಚಾಲಕರನ್ನು ಮುಂದೆ ಬಿಟ್ಟು ಸರ್ಕಾರಕ್ಕೆ ಕೆಟ್ಟ ಹೆಸರು ತರುವ ಕೆಲಸ ಮಾಡಲಾಗುತ್ತಿದೆ ಎಂದು ಕೆಪಿಸಿಸ ವಕ್ತಾರ ಎಂ.ಲಕ್ಷ್ಮಣ್‌ ಆರೋಪಿಸಿದ್ದಾರೆ.

ಈ ಕುರಿತು ಮೈಸೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಎಲ್‌ಪಿಜಿ ಗ್ಯಾಸ್ ಅಭಾವಕ್ಕೆ ಸಂಬಂಧಿಸಿದಂತೆ ಆಟೋ ಚಾಲಕರನ್ನು ಮುಂದೆ ಬಿಟ್ಟು ರಾಜ್ಯ ಸರ್ಕಾರದ ಮೇಲೆ ಆಪಾದನೆ ಮಾಡುವಂತಹ ಷಡ್ಯಂತ್ರವನ್ನ ಬಿಜೆಪಿ ನಾಯಕರು ಮಾಡುತ್ತಿದ್ದಾರೆ. ಇಂಧನ ಪೂರೈಕೆ ಮಾಡುವುದು ಕೇಂದ್ರ ಸರ್ಕಾರ. ಕೇಂದ್ರ ಸರ್ಕಾರದ ಮೇಲೆ ಆಪಾದನೆ ಮಾಡುವುದನ್ನು ಬಿಟ್ಟು ರಾಜ್ಯ ಸರ್ಕಾರದ ಮೇಲೆ ನಮ್ಮ ಬಿಜೆಪಿ ನಾಯಕರು ಆಪಾದನೆ ಮಾಡುತ್ತಾರೆ. ಕರ್ನಾಟಕದಲ್ಲಿ ಒಟ್ಟು 372 ಎಲ್‌ಪಿಜಿ ಗ್ಯಾಸ್ ಬಂಕ್‌ಗಳಿವೆ. ಆಟೋ ಸಂಘಟನೆಗಳ ಪದಾಧಿಕಾರಿಗಳು ಅಂತ ಹೇಳಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಮಾತನಾಡುತ್ತಾರೆ. ಆಯಿಲ್ ಕಂಪನಿಗಳು, ಸರಬರಾಜು ಮಾಡುವುದು ಯಾವುದು ಎಂದು ಮೊದಲು ಅರ್ಥ ಮಾಡಿಕೊಳ್ಳಬೇಕು. ಕಳೆದ ಒಂದು ತಿಂಗಳ ಹಿಂದೆ ಒಂದು ಕೆ.ಜಿ ಗ್ಯಾಸ್ ಗೆ 60 ರೂ ಇತ್ತು ಈಗ 162 ರೂ ಬ್ಲಾಕ್ ನಲ್ಲಿ ಮಾರಾಟ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಸುಮಾರು 5 ಲಕ್ಷ ಜನ ಆಟೋ ಚಾಲಕರು, ಕಿಗ್ ವರ್ಕರ್ಸ್ ಗೆ ಸಮಸ್ಯೆ ಎದುರಾಗಿದೆ. ಈ ವಿಚಾರವಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಸೋಮಣ್ಣ, ಶೋಭಕ್ಕ, ಕುಮಾರಸ್ವಾಮಿ ಸೇರಿದಂತೆ ಯಾರೂ ತುಟಿ ಬಿಚ್ಚುತ್ತಿಲ್ಲ. ರಾಜ್ಯ ಸರ್ಕಾರದ ಮೇಲೆ ಇಲ್ಲ ಸಲ್ಲದ ಆರೋಪ ಮಾಡುವವರಿಗೆ ಕನಿಷ್ಠ ಸಾಮಾನ್ಯ ಜ್ಞಾನ ಇಲ್ಲ. ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರ ಆಟೋ ಚಾಲಕರಿಗೆ ಪರಿಹಾರ ಕೊಡಬೇಕು ಎನ್ನುತ್ತಾರೆ. ಕರ್ನಾಟಕ ಸರ್ಕಾರ ಯಾಕೆ‌ ಕೊಡಬೇಕು.? ಕೇಂದ್ರ ಸರ್ಕಾರದಿಂದ ನೀವು ಕೊಡಿಸಿ ಎಂದು ಇಂಧನ ಸರಬರಾಜು ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ನಾಯಕರು ಮಾಡುವ ಆರೋಪವನ್ನು ತಳ್ಳಿಹಾಕಿದರು.

ಇನ್ನು ಹೋಟೆಲ್‌ಗಳೀಗೆ ಸಪ್ಲೈ ಆಗುತ್ತಿದ್ದ ಗ್ಯಾಸ್ ಸರಿಯಾಗಿ ಸಪ್ಲೈ ಆಗದೆ ಬೆಂಗಳೂರಿನಲ್ಲಿ ಶೇ.50.ರಷ್ಟು ಹೋಟೆಲ್ ಗಳು ಮುಚ್ಚಿವೆ. ವಾಣಿಜ್ಯ ಗ್ಯಾಸ್ ಸಿಲಿಂಡರ್ ಸುಮಾರು 8 ಸಾವಿರ ಕೊಟ್ಟು ಬ್ಲ್ಯಾಕ್ ನಲ್ಲಿ ಖರೀದಿ ಮಾಡುತ್ತಿದ್ದಾರೆ. ಮೇ 4 ರ ಬಳಿಕ ದೇಶದಲ್ಲಿ ಪೆಟ್ರೋಲ್ ಬೆಲೆ ಲೀಟರ್ ಗೆ 150 ಆಗುತ್ತೆ. ಗೃಹ ಬಳಕೆ ಸಿಲಿಂಡರ್ 2 ಸಾವಿರ ಆಗುತ್ತೆ, ವಾಣಿಜ್ಯ ಸಿಲಿಂಡರ್ 4 ಸಾವಿರ ಆಗುತ್ತೆ ಕಾದು ನೋಡಿ. ಈಗಲೇ ಏರಿಕೆ ಮಾಡಬೇಕಿತ್ತು. ಈಗ ಚುನಾವಣೆ ಇದೆ ಅಂತ ಬೆಲೆ ಏರಿಕೆ ಮಾಡುತ್ತಿಲ್ಲ. ಚುನಾವಣೆ ಮುಗಿದ ಮಾರನೇ ದಿನವೇ ಏರಿಕೆ ಮಾಡ್ತಾರೆ ಕಾದು ನೋಡಿ ಎಂದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

 

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

9 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

10 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

11 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

12 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

17 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

17 hours ago