gowri fest
ಮೈಸೂರು: ನಾಡಿನಾದ್ಯಂತ ಗೌರಿ ಹಬ್ಬದ ಸಂಭ್ರಮ ಮನೆಮಾಡಿದ್ದು, ಅತ್ಯಂತ ಸಡಗರದಿಂದ ಹಬ್ಬ ಆಚರಣೆ ಮಾಡಲಾಗುತ್ತಿದೆ.
ಗೌರಿ ಹಬ್ಬದ ಪ್ರಯುಕ್ತ ವಿವಿಧ ದೇವಾಲಯಗಳಲ್ಲಿ ಹಾಗೂ ಮನೆಗಳಲ್ಲಿ ಗೌರಿಯನ್ನು ಪ್ರತಿಷ್ಠಾಪಿಸಿ ವಿಶೇಷವಾಗಿ ಪೂಜೆ ಸಲ್ಲಿಸಲಾಯಿತು. ನಾಳಿನ ಗಣಪತಿ ಹಬ್ಬಕ್ಕೂ ಸಹ ಎಲ್ಲಾ ಸಿದ್ಧತೆಗಳು ಜೋರಾಗಿ ನಡೆಯುತ್ತಿದ್ದು, ಈಗಾಗಲೇ ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಸಿದ್ಧತೆ ಸಾಗಿದೆ.
ಯುವಕರು ತಮ್ಮ ತಮ್ಮ ಏರಿಯಾಗಳಲ್ಲಿ ಗಣಪತಿಯನ್ನು ಪ್ರತಿಷ್ಠಾಪಿಸಲು ಪೆಂಡಾಲ್ ನಿರ್ಮಾಣದಲ್ಲಿ ತೊಡಗಿದ್ದಾರೆ. ಈಗಾಗಲೇ ದೊಡ್ಡ ದೊಡ್ಡ ಗಣಪತಿ ಮೂರ್ತಿಯನ್ನು ಖರೀದಿ ಮಾಡಿದ್ದು, ನಾಳಿನ ಗಣಪತಿ ಹಬ್ಬಕ್ಕೆ ತಯಾರಿ ನಡೆಸಲಾಗಿದೆ.
ಇನ್ನು ಮನೆಗಳಲ್ಲಿಯೂ ಗಣಪತಿಯನ್ನು ಪ್ರತಿಷ್ಠಾಪಿಸಲಾಗುತ್ತದೆ. ಇದಕ್ಕಾಗಿ ಮಾರುಕಟ್ಟೆಯಲ್ಲಿ ಚಿಕ್ಕ ಗಾತ್ರದ ಗಣಪತಿ ಮೂರ್ತಿಗಳು ಬಂದಿವೆ. ಹಬ್ಬದ ಹಿನ್ನೆಲೆಯಲ್ಲಿ ಇಂದೂ ಕೂಡ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ಹೂ, ಹಣ್ಣು, ಬಾಳೆದಿಂಡು ಇನ್ನಿತರ ಪೂಜಾ ಸಾಮಾಗ್ರಿಗಳ ಖರೀದಿ ಭರಾಟೆ ಬಲು ಜೋರಾಗಿದೆ ನಡೆಯುತ್ತಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…