ಮೈಸೂರು ನಗರ

ದಲಿತ ವ್ಯಕ್ತಿಗೆ ಸಿಎಂ ಸ್ಥಾನ ಕೊಡಿ: ಜ್ಞಾನಪ್ರಕಾಶ್‌ ಸ್ವಾಮೀಜಿ ಆಗ್ರಹ

ಮೈಸೂರು: ಮುಂದಿನ ದಿನಗಳಲ್ಲಿ ಸಿದ್ದರಾಮಯ್ಯ ಅವರ ಸಿಎಂ ಸ್ಥಾನ ಅಸ್ತವ್ಯಸ್ತವಾದರೆ, ದಲಿತ ವ್ಯಕ್ತಿಗೆ ಸಿಎಂ ಸ್ಥಾನ ಕೊಡಿ ಎಂದು ಉರಿಲಿಗಪೆದ್ದಿ ಮಠದ ಅಧ್ಯಕ್ಷ ಜ್ಞಾನಪ್ರಕಾಶ್‌ ಸ್ವಾಮೀಜಿ ಆಗ್ರಹಿಸಿದ್ದಾರೆ.

ಈ ಕುರಿತು ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದಲ್ಲಿ ದಲಿತರಿಗೆ ಸಿಎಂ ಸ್ಥಾನ ನೀಡಬೇಕು. ಈ ಕೂಗು ಬಹಳ ಹಿಂದಿನಿಂದಲೂ ಕೇಳಿ ಬರುತ್ತಿದೆ. ಇನ್ನೂ ಕೂಡ ಅದು ಈಡೇರಿಲ್ಲ. ಆದ್ದರಿಂದ ದಲಿತರಿಗೆ ಸಿಎಂ ಸ್ಥಾನ ನೀಡಿ ಎಂದು ಆಗ್ರಹಿಸಿದರು.

ಇದನ್ನೂ ಓದಿ:-ಡಿಕೆಶಿ ಸಿಎಂ ಆಗಬಾರದು ಎಂಬುದೇ ಸಿದ್ದರಾಮಯ್ಯರ ಮುಖ್ಯ ಉದ್ದೇಶ: ಜಗದೀಶ್‌ ಶೆಟ್ಟರ್‌

ಇದೇ ವೇಳೆ ಮಾತನಾಡಿದ ಮಾಜಿ ಮೇಯರ್‌ ಪುರುಷೋತ್ತಮ್‌ ಅವರು, ಆರ್‌ಎಸ್‌ಎಸ್‌ ನೋಂದಣಿ ಆಗಿರದಿದ್ದರೂ ಅದಕ್ಕೆ 100 ವರ್ಷ ತುಂಬಿದ ಸಂದರ್ಭದಲ್ಲಿ ಪಥಸಂಚಲನಕ್ಕೆ ಅವಕಾಶ ನೀಡಬೇಕೆಂದು ಕೇಳುತ್ತಿದ್ದಾರೆ. ತಮ್ಮ ಸಂಸ್ಥೆ ನೋಂದಣಿಯಾಗಿದ್ದರೂ ಮಹಿಷನಿಗೆ ಪುಷ್ಪಾರ್ಚನೆ ಮಾಡಬೇಕೆಂದರೂ ಅವಕಾಶ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಮರ್ಥ, ಹಿರಿಯ, ಪರಿಸ್ಥಿತಿ ನಿಭಾಯಿಸುವ ದಲಿತ ನಾಯಕರೊಬ್ಬರಿಗೆ ರಾಜ್ಯದಲ್ಲಿ ಸಿಎಂ ಸ್ಥಾನ ನೀಡಬೇಕೆಂಬುದು ನಮ್ಮ ನಿರೀಕ್ಷೆಯಾಗಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ವಿಚಾರಣೆ ಇಲ್ಲದೆ ಶಿಕ್ಷೆ ಕೊಡಲು ಸಂವಿಧಾನ ಒಪ್ಪುವುದಿಲ್ಲ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ ಹೊಳೆಮುರಿ ದಟ್ಟಿ ಅರಣ್ಯ ಪ್ರದೇಶದಲ್ಲಿ…

3 hours ago

ಆ ಮೂರು ಜೀವಗಳಿಗೂ ಬೆಲೆಯೇ ಇರಲಿಲ್ಲವೇ?

ಅನ್ಬುರಾಜ್ ಅರಣ್ಯ ಇಲಾಖೆ ಮತ್ತೆ ತನ್ನ ಇತಿಹಾಸವನ್ನು ಹಿಂದಕ್ಕೆ ಕೊಂಡೊಯ್ಯುತ್ತಿರುವಂತೆ ಕಾಣುತ್ತಿದೆ. ಜನವಿರೋಧಿ ಧೋರಣೆಯನ್ನು ಅನುಸರಿಸಿ, ಅರಣ್ಯದ ಅಂಚಿನಲ್ಲಿ ವಾಸಿಸುವ…

3 hours ago

ಅಸಮಾಧಾನದ ಬೇಗೆ: ಸಿಎಂ ಡಿಕೆಶಿಗೆ ಹೈಕಮಾಂಡ್ ‘ಎಸಿ’

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ಕಾಂಗ್ರೆಸ್‌ನಲ್ಲಿ ಪರ್ಯಾಯ ಶಕ್ತಿ ಕೇಂದ್ರ ತಲೆ ಎತ್ತುತ್ತದೆಯೇ? ಇಂತಹದೊಂದು ಪ್ರಶ್ನೆಗೆ ತಕ್ಷಣ ಉತ್ತರ…

3 hours ago

ನಾಲ್ಕು ಶೂಟೌಟ್ ಪ್ರಕರಣ; ಏಳು ಸಾವು

ಮಹಾದೇಶ ಎಂ ಗೌಡ ೨೦೧೪ರಿಂದ ೨೦೨೬ರವರೆಗೆ ನಡೆದ ಪ್ರಕರಣಗಳು ಹನೂರು: ತಾಲ್ಲೂಕಿನ ಕಾವೇರಿ ವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ…

3 hours ago

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

12 hours ago