ಮೈಸೂರು : ರೈತರ ಕೃಷಿ ಉತ್ಪನ್ನಗಳನ್ನು ಕೈಗಾರಿಕೆಗಳ ಸಹಯೋಗದೊಂದಿಗೆ ಮೌಲ್ಯವರ್ಧನೆ ಮಾಡಿ ಮಾರುಕಟ್ಟೆಯಲ್ಲಿ ಮಾರಾಟ ಮಾಡಿದರೆ ಕೃಷಿ ಹಾಗೂ ಕೈಗಾರಿಕೆಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಮೈಸೂರು ಕೈಗಾರಿಕೆಗಳ ಸಂಘದ ಪ್ರದಾನ ಕಾರ್ಯದರ್ಶಿ ಸುರೇಶ್ ಕುಮಾರ್ ಜೈನ್ ಅವರು ಹೇಳಿದರು.
ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರದ ವತಿಯಿಂದ ರಫ್ತು ನಿರ್ವಹಣಾ ತರಬೇತಿ ಹಾಗೂ ಕರ್ನಾಟಕ ಸರ್ಕಾರದ ರೈತ ಸಮೃದ್ಧಿ ಯೋಜನೆಯಡಿ ಕಾರ್ಯಕ್ರಮವನ್ನು ಹೊಟೇಲ್ ಪ್ರೆಸಿಡೆಂಟ್ ನಲ್ಲಿ ಉದ್ಘಾಟಿಸಿ ಮಾತನಾಡಿದರು.
ಭಾರತ ಕೃಷಿ ಪ್ರಧಾನವಾದ ದೇಶ, ರೈತರು ತಾವು ಬೆಳೆದ ಬೆಳೆಗಳನ್ನು ಮೌಲ್ಯವರ್ಧನೆ ಮಾಡಲು ಸಣ್ಣ ಕೈಗಾರಿಕೆಗಳನ್ನು ಅವಲಂಬಿಸಿದರೆ ಇಬ್ಬರೂ ದೇಶವನ್ನು ಆರ್ಥಿಕವಾಗಿ ಅಭಿವೈದ್ಧಿಯಾಗುತ್ತದೆ. ರೈತ ದೇಶದ ಬೆನ್ನೆಲುಬಿದ್ದಂತೆ, ಕೈಗಾರಿಕೆಗಳು ಪೆಕ್ಕೆಲುಬಿದ್ದಂತೆ ಎಂದು ಬಣ್ಣಿಸಿದರು.
ಕೃಷಿ ಉತ್ಪನ್ನ ಮಾರಾಟ ಕೇಂದ್ರಗಳು ಅವರ ಕಾರ್ಯಗಳ ಮಧ್ಯದಲ್ಲಿ ಮೌಲ್ಯವರ್ಧನೆಯಲ್ಲೂ ಸಕ್ರಿಯವಾಗಿ ಭಾಗವಹಿಸಿದರೆ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗುತ್ತದೆ. ದೇಶವನ್ನ ಪ್ರಗತಿ ಯತ್ತ ಕೊಂಡೊಯ್ಯಲು ಸಾಧ್ಯವಾಗುತ್ತದೆ ಎಂದರು.
ಕೃಷಿ ಇಲಾಖೆಯ ಉಪನಿರ್ದೇಶಕ ಕೆ. ನಾಗರಾಜು ಅವರು ಮಾತನಾಡಿ ಕೃಷಿ ಇಲಾಖೆಯು ಕೃಷಿ ಭಾಗ್ಯ ಯೋಜನೆ ಅಡಿಯಲ್ಲಿ ಸಮಗ್ರ ಯೋಜನಾ ಕೃಷಿಯನ್ನು ಉತ್ತೇಜನ ಮಾಡಲು ಕೃಷಿಯೊಂದಿಗೆ ಹೈನುಗಾರಿಕೆ, ರೇಷ್ಮೆ, ಮೀನುಗಾರಿಕೆಗಳಂತಹ ಉಪಕಸುಬು ರೂಢಿಸಿಕೊಳ್ಳುವಂತೆ ಪ್ರೋತ್ಸಾಹಿಸುತ್ತಿದೆ. ರೈತರು ಉಪಕಸುಬು ರೂಢಸಿಕೊಂಡು ಸಮಗ್ರವಾಗಿ ಲಾಭವನ್ನು ಗಳಿಸಬಹುದಾಗಿದೆ ಎಂದರು.
ರೈತರು ಬೆಳೆದ ಪದಾರ್ಥವನ್ನ ಮೌಲ್ಯ ವರ್ಧನೆ ಮಾಡಿಕೊಂಡು ಮಾರಾಟ ಮಾಡುವುದರಿಂದ ರೈತನೆ ಸ್ವತ; ಲಾಭವನ್ನು ಪಡೆಯಬಹುದು ಎಂದು ಹೇಳಿದರು.
ವಿಟಿಪಿಸಿ ಜಂಟಿ ನಿರ್ದೇಶಕರಾದ ಸಿ.ಎಸ್.ಬಾಬು ನಾಗೇಶ್ ಅವರು ಮಾತನಾಡಿ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನಾ ಕೇಂದ್ರದ ಸಂಸ್ಥೆಯು ರಾಜ್ಯ ಸರಕಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಯಾಗಿದ್ದು, ರಪ್ತಿ ಗಾಗಿ ಮೀಸಲಾಗಿರುವ ಸಂಸ್ಥೆಯಾಗಿದೆ, ಆದರೆ ಈ ಸಂಸ್ಥೆಯ ಬಗ್ಗೆ ರೈತರಿಗೆ ಹೆಚ್ಚಾಗಿ ಮಾಹಿತಿ ಇಲ್ಲ. ಈ ಸಂಸ್ಥೆಗೆ ಸರಕಾರವು ವಿವಿಧ ರೀತಿಯ ಸಾವಲತ್ತುಗಳನ್ನು ನೀಡುತ್ತಾ ಬಂದಿದೆ. ರೈತರು ಸದುಪಯೋಗಪಡಿಸಿಕೊಳ್ಳಿ ಎಂದು ಹೇಳಿದರು.
ಕಳೆದ ವರ್ಷದಲ್ಲಿ 2024-25 ನೆ ಸಾಲಿನಲ್ಲಿ ಕರ್ನಾಟಕ ರಾಜ್ಯದ ರಫ್ತು 25% ರಷ್ಟು ಹೆಚ್ಚಾಗಿದೆ. ಸರಕು ರಫ್ತು ಮಾಡುದರಲ್ಲಿ ಕರ್ನಾಟಕ ರಾಜ್ಯವು ದೇಶದ 4 ನೇ ಸ್ಥಾನ ದಲ್ಲಿದೆ, ಸೇವೆ ರಫ್ತು ನಲ್ಲಿ 1 ನೇ ಸ್ಥಾನ ದಲ್ಲಿದೆವೆ ಎಂದು ತಿಳಿಸಿದರು.
ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕರಾದ ಸೋಮಶೇಖರ್ ಅವರು ಮಾತನಾಡಿ ರೈತರು ಬೆಳೆದಂತಹ ಬೆಳೆಗಳು ಎಲ್ಲಿ ಬೇಡಿಕೆ ಇದೆ ಎಂಬುದನ್ನ ಸಂಘ ಸಂಸ್ಥೆಗಳು ಸರಕಾರ ಸಂಸ್ಥೆಗಳ ಮುಖಂತರ ಮಾಹಿತಿಯನ್ನು ಪಡೆದು ಡಿಜಿಟಲೀಕರಣ ಮಾಡಿ ಬೇರೆ ದೇಶಗಳಿಗೆ ನಿಮ್ಮದೇ ಬ್ರಾಂಡ್ ಮೂಲಕ ರಫ್ತು ಮಾಡಿದರೆ ರೈತರಿಗೆ ಲಾಭವಾಗುತ್ತದೆ ಎಂದು ತಿಳಿಸಿದರು.
ರೈತರು ಬೆಳೆದ ಬೆಳೆಗಳಿಗೆ ಯಾವ ಕಾರಣಕ್ಕಾಗಿ ಬೆಲೆ ಸಿಗುತ್ತಿಲ್ಲ ಎಂಬುದರ ಬಗ್ಗೆ ಸಂಶೋಧನೆಗಳು ಆಗುತ್ತಿಲ್ಲ ಅದರಿಂದ ರೈತರು ಬೆಳೆದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುವ ಬಗ್ಗೆ ಸಂಶೋಧನೆ ಆದರೆ ಎಲ್ಲಾ ವಸ್ತುಗಳಿಗಗೆ ಸೂಕ್ತ ಬೆಲೆ ಸಿಗುತ್ತದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಮತ್ತು ವಿಟಿಪಿಸಿ – ರಫ್ತು ಸೌಲಭ್ಯ ಕೇಂದ್ರದ ಉಪ ನಿರ್ದೇಶಕರಾದ ಮೇಘಲಾ ಎಲ್, ಕಾರ್ಯಕ್ರಮ ಪ್ರಾಯೋಜಕರಾದ ಅರವಿಂದ ಭಟ್, ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷರಾದ ಕೆ.ಬಿ ಲಿಂಗರಾಜು, ಹಾಗೂ ಶಿಬಿರಾರ್ಥಿಗಳು ಇತರರು ಉಪಸ್ಥಿತರಿದ್ದರು
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…
ಚಾಮರಾಜನಗರ: ವೃತ್ತ ನಿರೀಕ್ಷಕರ ಕಚೇರಿಯಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ಶಾರ್ಟ್ ಸರ್ಕ್ಯೂಟ್ನಿಂದಾಗಿ ಚಾಮರಾಜನಗರ ವೃತ್ತ ನಿರೀಕ್ಷಕರ ಕಚೇರಿಯಲ್ಲಿ…
ಪಶ್ಚಿಮ ಏಷ್ಯಾದ ಯುದ್ಧದ ಹಿನ್ನೆಲೆಯಲ್ಲಿ ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿದ್ದು, ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ ದರ ರೂ.೬೦…
ಭಾರತದಲ್ಲೇ ಮೊದಲ ಆಕಾಶವಾಣಿ ಕೇಂದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮೈಸೂರಿನ ಆಕಾಶವಾಣಿ ಕೇಂದ್ರ ೯೦ ವಸಂತಗಳನ್ನು ಪೂರೈಸಿದ್ದು, ಪ್ರಭಾವಿ ಸಾರ್ವಜನಿಕ…
ಟಿ-೨೦ವಿಶ್ವಕಪ್ನಲ್ಲಿ ಕಿವೀಸ್ ಕಿವಿ ಹಿಂಡಿದ ಇಂಡಿಯಾ ಆಡಿದ್ದು ದಾಖಲೆಗಳ ಆಟ ! ಅದಕ್ಕೇ ಒಲಿಯಿತು ಭಾರತಕ್ಕೆ ವಿಶ್ವಕಪ್ ಕಿರೀಟ !…