ಮೈಸೂರು: ಈ ಬಾರಿಯ ಅದ್ದೂರಿ ದಸರಾ ಆಚರಣೆಗೆ ಜಿಲ್ಲಾಡಳಿತ ಸಕಲ ಸಿದ್ದತೆ ನಡೆಸಿದೆ. ಅದರಂತೆ ಅರಮನೆಯು ಜಗಮಗಿಸಲು 20 ಸಾವಿರ ನೂತನ ಬಲ್ಬ್ಗಳ ಅಳವಡಿಕೆಯ ಕಾರ್ಯವು ಭರದಿಂದ ಸಾಗಿದೆ.
ಗಾಳಿ ಮಳೆಯಿಂದ ಹಾಳಾಗಿದ್ದ ವಿದ್ಯುತ್ ಬಲ್ಬ್ ಗಳನ್ನು ತೆಗೆದು ನೂತನ ಬಲ್ಬ್ಗಳನ್ನು ಅಳವಡಿಸುವ ಕಾರ್ಯವನ್ನು ಅರಮನೆ ಮಂಡಳಿಯ ವಿದ್ಯುತ್ ವಿಭಾಗದ 12 ಸಿಬ್ಬಂದಿಗಳು ಮಾಡಿದ್ದಾರೆ.
ಸೋಮವಾರದಿಂದ ಅರಮನೆಯ ಎಲ್ಲಾ ದ್ವಾರಗಳು ಮತ್ತು ಒಳಾಂಗಣಕ್ಕೆ ಬಣ್ಣ ಲೇಪನದ ಕಾಮಗಾರಿ ನಡೆಯುತ್ತಿದೆ. ಇದರ ಜೊತೆಗೆ ವರಾಹ, ಬಲರಾಮ ಹಾಗೂ ಜಯಮಾರ್ತಾಂಡ ದ್ವಾರಗಳು ಸೇರಿದಂತೆ ಆವರಣದಲ್ಲಿರುವ ಎಲ್ಲಾ ದೇಗುಲಗಳು ಮತ್ತು ಕೋಟೆಗಳನ್ನು ಒಳಗೊಂಡಂತೆ ಇನ್ನಿತರ ಎಲ್ಲಾ ಭಾಗಗಳಿಗೂ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ.
ಅರಮನೆಯ ಒಳಾಂಗಣದಲ್ಲಿ ಮಸಿಯಾಗಿದ್ದ ಅಲಂಕೃತ ದೀಪಗಳ ಗಾಜುಗಳನ್ನು ಕೆಳಗೆ ಇಳಿಸಿ ಅವುಗಳಲ್ಲಿರುವ ಕೊಳೆಯನ್ನು ತೆಗೆದು ಹೊಳೆಯುವಂತೆ ಮಾಡಲಾಗಿದೆ. ಅಲ್ಲದೇ ಅರಮನೆ ತೂಗುವ ದೀಪಗಳಲ್ಲಿ ಒಡೆದ ಗಾಜುಗಳನ್ನು ಬದಲಿಸಿ, ಎತ್ತರದ ಕಂಬಗಳಿಗೆ ಕ್ರೇನ್ನ ಮೂಲಕ ದುರಸ್ತಿ ವ್ಯವಸ್ಥೆಯನ್ನು ಕೈಗೆತ್ತಿಕೊಂಡು ಸರಿಪಡಿಸಲಾಗುತ್ತಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…
ಬೆಂಗಳೂರು: ವೈದ್ಯಕೀಯ ಕಾಲೇಜುಗಳಿಗೆ ಪರೀಕ್ಷೆ ನಡೆಸುವ ಸಿಇಟಿ ವ್ಯವಸ್ಥೆಯನ್ನು ನಡೆಸಲು ರಾಜ್ಯಗಳಿಗೇ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.…
ಕಾಂಗೋ: ಆಫ್ರಿಕಾದ ಕಾಂಗೋದಲ್ಲಿ ಎಬೋಲಾ ಮಾರಣಾಂತಿಕ ಸೋಂಕಿನಿಂದ ಉಂಟಾದ ಸಾವಿನ ಸಂಖ್ಯೆ 136ಕ್ಕೆ ಏರಿದೆ. ಈ ಬಗ್ಗೆ ವಿಶ್ವ ಆರೋಗ್ಯ…
ಮಂಗಳೂರು: ಅರಬ್ಬೀ ಸಮುದ್ರದಲ್ಲಿ ಪ್ರಕ್ಷುಬ್ಧ ವಾತಾವರಣ ಉಂಟಾಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಮೇ.25ರವರೆಗೆ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಹವಾಮಾನ ಇಲಾಖೆ…
ನವದೆಹಲಿ: ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಸಂಬಂಧ ಸುಪ್ರಿಂಕೋರ್ಟ್ ಮುಂದಿನ ಅರ್ಜಿ ವಿಚಾರಣೆಯನ್ನು…