ಮೈಸೂರು ನಗರ

ನವರಾತ್ರಿಗೆ ಮೆರುಗು: ಅರಮನೆಗೆ 20 ಸಾವಿರ ಬಲ್ಬ್‌ ಅಳವಡಿಕೆ

ಮೈಸೂರು: ಈ ಬಾರಿಯ ಅದ್ದೂರಿ ದಸರಾ ಆಚರಣೆಗೆ ಜಿಲ್ಲಾಡಳಿತ ಸಕಲ ಸಿದ್ದತೆ ನಡೆಸಿದೆ. ಅದರಂತೆ ಅರಮನೆಯು ಜಗಮಗಿಸಲು 20 ಸಾವಿರ ನೂತನ ಬಲ್ಬ್‌ಗಳ ಅಳವಡಿಕೆಯ ಕಾರ್ಯವು ಭರದಿಂದ ಸಾಗಿದೆ.

ಗಾಳಿ ಮಳೆಯಿಂದ ಹಾಳಾಗಿದ್ದ ವಿದ್ಯುತ್‌ ಬಲ್ಬ್‌ ಗಳನ್ನು ತೆಗೆದು ನೂತನ ಬಲ್ಬ್‌ಗಳನ್ನು ಅಳವಡಿಸುವ ಕಾರ್ಯವನ್ನು ಅರಮನೆ ಮಂಡಳಿಯ ವಿದ್ಯುತ್‌ ವಿಭಾಗದ 12 ಸಿಬ್ಬಂದಿಗಳು ಮಾಡಿದ್ದಾರೆ.

ಸೋಮವಾರದಿಂದ ಅರಮನೆಯ ಎಲ್ಲಾ ದ್ವಾರಗಳು ಮತ್ತು ಒಳಾಂಗಣಕ್ಕೆ ಬಣ್ಣ ಲೇಪನದ ಕಾಮಗಾರಿ ನಡೆಯುತ್ತಿದೆ. ಇದರ ಜೊತೆಗೆ ವರಾಹ, ಬಲರಾಮ ಹಾಗೂ ಜಯಮಾರ್ತಾಂಡ ದ್ವಾರಗಳು ಸೇರಿದಂತೆ ಆವರಣದಲ್ಲಿರುವ ಎಲ್ಲಾ ದೇಗುಲಗಳು ಮತ್ತು ಕೋಟೆಗಳನ್ನು ಒಳಗೊಂಡಂತೆ ಇನ್ನಿತರ ಎಲ್ಲಾ ಭಾಗಗಳಿಗೂ ವಿದ್ಯುತ್‌ ದೀಪಗಳನ್ನು ಅಳವಡಿಸಲಾಗಿದೆ.

ಅರಮನೆಯ ಒಳಾಂಗಣದಲ್ಲಿ ಮಸಿಯಾಗಿದ್ದ ಅಲಂಕೃತ ದೀಪಗಳ ಗಾಜುಗಳನ್ನು ಕೆಳಗೆ ಇಳಿಸಿ ಅವುಗಳಲ್ಲಿರುವ ಕೊಳೆಯನ್ನು ತೆಗೆದು ಹೊಳೆಯುವಂತೆ ಮಾಡಲಾಗಿದೆ. ಅಲ್ಲದೇ ಅರಮನೆ ತೂಗುವ ದೀಪಗಳಲ್ಲಿ ಒಡೆದ ಗಾಜುಗಳನ್ನು ಬದಲಿಸಿ, ಎತ್ತರದ ಕಂಬಗಳಿಗೆ ಕ್ರೇನ್‌ನ ಮೂಲಕ ದುರಸ್ತಿ ವ್ಯವಸ್ಥೆಯನ್ನು ಕೈಗೆತ್ತಿಕೊಂಡು ಸರಿಪಡಿಸಲಾಗುತ್ತಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಹನೂರಿನಲ್ಲಿ ಮೇವು-ನೀರಿಲ್ಲದೆ ಜಾನುವಾರುಗಳ ಪರದಾಟ: ಕಸ, ಪೇಪರ್ ತಿಂದು ಜೀವ ಉಳಿಸಿಕೊಳ್ಳುತ್ತಿರುವ ಮೂಕ ಪ್ರಾಣಿಗಳು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಹಲವು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಲವು ಗ್ರಾಮಗಳಲ್ಲಿ ಮಳೆಯ…

3 hours ago

ಬಂಡೀಪುರ ಸಫಾರಿ ವಾಹನಗಳಿಗೆ ಜಿಪಿಎಸ್ ಡ್ಯಾಶ್ ಕ್ಯಾಮರಾ ಅಳವಡಿಕೆ

ಗುಂಡ್ಲುಪೇಟೆ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೇಲುಕಾಮನಹಳ್ಳಿ ಸಫಾರಿ ಕೇಂದ್ರದ ವಾಹನಗಳಿಗೆ ಜಿಪಿಎಸ್ ಹಾಗೂ ಡ್ಯಾಶ್ ಕ್ಯಾಮ್‌ಗಳನ್ನು ಅಳವಡಿಸಲಾಗಿದೆ ಎಂದು…

3 hours ago

ಮೈಸೂರಿನಲ್ಲಿ ಯತೀಂದ್ರ ಮಹಾರಾಜನ ಏಕಚಕ್ರಾಧಿಪತ್ಯವಿದೆ: ಎಚ್.ವಿಶ್ವನಾಥ್ ವಾಗ್ದಾಳಿ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಸಚಿವ ಯತೀಂದ್ರ ಅವರ ಏಕಚಕ್ರಾಧಿಪತ್ಯ ನಡೆಯುತ್ತಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಚ್. ವಿಶ್ವನಾಥ್…

4 hours ago

ಜೈಲಿನಲ್ಲಿ ಮೊಬೈಲ್ ಬಳಕೆ ಆರೋಪ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…

4 hours ago

ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ CWRC ಶಿಫಾರಸು

ನವದೆಹಲಿ: ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದೆ. ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ಸ್‌ ಕಾವೇರಿ…

5 hours ago

ಓದುಗರ ಪತ್ರ: ಮನವಿಗೆ ಸ್ಪಂದಿಸಿದಕ್ಕಾಗಿ ಅಭಿನಂದನೆಗಳು

ಮೈಸೂರಿನ ವಿ.ವಿ.ಮೊಹಲ್ಲದ ೨ನೇ ಮುಖ್ಯರಸ್ತೆಯಲ್ಲಿರುವ (ಕ್ಲಬ್ ಹಿಂಭಾಗ) ವಾರ್ಡ್ ಸಂಖ್ಯೆ ೧೯ರ ವ್ಯಾಪ್ತಿಗೆ ಒಳಪಡುವ ಕನ್ಸರ್‌ವೆನ್ಸಿಯಲ್ಲಿ ಗಿಡ ಗಂಟಿಗಳು ಬೃಹದಾಕಾರವಾಗಿ…

13 hours ago