ಮೈಸೂರು: ಹಾಲಿನ ದರ 4 ರೂ. ಏರಿಕೆ ಮಾಡುವ ಮೂಲಕ ರೈತರ ಹಿತದೃಷ್ಠಿಯಿಂದ ಸರ್ಕಾರ ಒಳ್ಳೆಯ ನಿರ್ಧಾರ ಮಾಡಿದೆ ಎಂದು ಮೈಮುಲ್ ಅಧ್ಯಕ್ಷ ಚೆಲುವರಾಜು ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಯುಗಾದಿ ಹಬ್ಬದಂದು ಸರ್ಕಾರ ರೈತರಿಗೆ ವಿಶೇಷ ಕೊಡುಗೆ ನೀಡಿದೆ. ಇಂತಹ ನಿರ್ಧಾರ ತೆಗೆದುಕೊಂಡ ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು.
ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಹಾಲಿನ ಬೆಲೆ ಕಡಿಮೆ ಇದೆ. ಕೇರಳ, ತಮಿಳುನಾಡು, ಗುಜರಾತ್ ಭಾಗದಲ್ಲಿ ಸಾಮಾನ್ಯ ಹಾಲಿಗೆ 54 ರೂ ಇದೆ. ನಮ್ಮಲ್ಲಿ ಬೆಲೆ ಏರಿಕೆ ಮಾಡಿದರೂ ಸಾಮಾನ್ಯ ಹಾಲಿಗೆ 46 ರೂ. ಇದೆ ಎಂದು ತಿಳಿಸಿದರು.
ನಮ್ಮ ನಂದಿನಿ ಹಾಲು ಪರಿಶುದ್ಧ ಹಾಲು. ಈಗ ಹೆಚ್ಚಳ ಮಾಡಿರುವ ಹಣ ರೈತರಿಗೆ ನೇರವಾಗಿ ತಲುಪಿಸಲಾಗುತ್ತದೆ. ನಮ್ಮ ಸಂಸ್ಥೆ ಆರ್ಥಿಕ ಸಂಕಷ್ಟದಲ್ಲೇನು ಇಲ್ಲ. ಈ ವರ್ಷ ವಾರ್ಷಿಕ 6 ರಿಂದ 7 ಕೋಟಿ ಲಾಭದಲ್ಲಿ ಇದೆ ಎಂದು ಹೇಳಿದರು.
ಸಾಮಾನ್ಯ ದಿನಗಳಿಗಿಂತ ಬೇಸಿಗೆ ಸಂದರ್ಭದಲ್ಲಿ ನಂದಿನಿ ಮಜ್ಜಿಗೆ, ಮೊಸರು, ಲಸ್ಸಿ ಹೆಚ್ಚು ಮಾರಾಟವಾಗುತ್ತದೆ. ಬೇಡಿಕೆ ಎಷ್ಟೇ ಬಂದರೂ ಪೂರೈಸುವ ನಿಟ್ಟಿನಲ್ಲಿ ನಮ್ಮ ಪ್ರೊಡಕ್ಸನ್ ತಂಡ ಸಿದ್ದವಿದೆ ಎಂದು ತಿಳಿಸಿದರು.
ರಾಮನಗರ: ಬೆಂಗಳೂರು ಮತ್ತು ಮೈಸೂರು ನಡುವೆ ನಿತ್ಯ ಸಂಚರಿಸುವ ಒಡೆಯರ್ ಎಕ್ಸ್ಪ್ರೆಸ್ ರೈಲಿಗೆ ಈಗ ರಾಮನಗರ ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ…
ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ. ಚೆನ್ನೈನ ಪಣಿಯೂರಿನಲ್ಲಿರುವ…
ಬೆಂಗಳೂರು: ತಮಿಳುನಾಡಿನ ಮತದಾರರು ಬದಲಾವಣೆ ಬಯಸಿದ್ದರು. ಅದರಂತೆ ಬದಲಾವಣೆಗೆ ಮತ ಹಾಕಿದ್ದಾರೆ. ಈ ಫಲಿತಾಂಶ ತುಂಬಾ ಆಶ್ಚರ್ಯಕರವಾಗಿದೆ ಎಂದು ಸಿಎಂ…
ಚೆನ್ನೈ: ಡಿಎಂಕೆ ಅಧ್ಯಕ್ಷ ಎಂ ಕೆ ಸ್ಟಾಲಿನ್ ಅವರಿಂದು ತಮಿಳುನಾಡು ಸಿಎಂ ಹುದ್ದಗೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆ ಪತ್ರವನ್ನು ಲೋಕಭವನದಲ್ಲಿರುವ…
ಮೈಸೂರು: ಸೂರ್ಯ ಉದಯಿಸುವ ಮುನ್ನವೇ ಮೈಸೂರಿನ ಉದಯಗಿರಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ಉದಯಗಿರಿ ಪೊಲೀಸ್ ಠಾಣೆಯಿಂದ ಕೇವಲ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಮಾಪುರ ವ್ಯಾಪ್ತಿಯಲ್ಲಿ ಜಮೀನುಗಳಲ್ಲಿ ಇರುತ್ತಿದ್ದ ನೀರೆತ್ತುವ ಪಂಪ್ ಸೆಟ್ ಮೋಟಾರ್ಗಳನ್ನು…