ಮೈಸೂರು: ಕಲಿಯುಗದ ಕಾಮಧೇನು ಶ್ರೀ ಗುರುರಾಘವೇಂದ್ರಸ್ವಾಮಿ ದರ್ಶನಕ್ಕೆ ತೆರಳುವ ಭಕ್ತರಿಗೆ ಗುಡ್ನ್ಯೂಸ್ ಸಿಕ್ಕಿದ್ದು, ಕಾಕಿನಾಡ-ಮೈಸೂರು ಬೈ ವೀಕ್ಲಿ ಎಕ್ಸ್ಪ್ರೆಸ್ಗೆ ಅನುಮೋದನೆ ಸಿಕ್ಕಿದೆ.
ಮೇ.1.2026ರಿಂದ ಸಂಚಾರ, ಮೈಸೂರು, ಬೆಂಗಳೂರು, ಕಲ್ಯಾಣ ಕರ್ನಾಟಕದಿಂದ ಮಂತ್ರಾಲಯ ರೋಡ್ಗೆ ನೇರ ಸಂಪರ್ಕ ಕಲ್ಪಿಸುವ ರೈಲು ಇದಾಗಿದ್ದು, ಮಂತ್ರಾಲಯಕ್ಕೆ ಹೋಗುವವರೆಗೆ 33 ನಿಲ್ದಾಣಗಳಲ್ಲಿ ನಿಲುಗಡೆಯಾಗಲಿದೆ.
ಮೈಸೂರು, ಮಂಡ್ಯ ಹಾಗೂ ಬೆಂಗಳೂರಿನಿಂದ ಮಂತ್ರಾಲಯಕ್ಕೆ ಹೋಗುವ ಭಕ್ತರ ಪಾಲಿಗೆ ಈ ರೈಲು ಸಾಕ್ಷಾತ್ ವರದಾನವೇ ಸರಿ ಎನ್ನುವಂತಾಗಿದೆ. ಮೈಸೂರಿನಿಂದ ಸಂಜೆ 5:05ಕ್ಕೆ (ಬೆಂಗಳೂರು ಸಿಟಿಯಿಂದ ರಾತ್ರಿ 8:25ಕ್ಕೆ) ಹೊರಡುವ ರೈಲು, ಮರುದಿನ ಮುಂಜಾನೆ ಸರಿಯಾಗಿ 3:28ಕ್ಕೆ ಮಂತ್ರಾಲಯ ರಸ್ತೆ ನಿಲ್ದಾಣವನ್ನು ತಲುಪಲಿದೆ.
ಅಂದು ಮುಂಜಾನೆಯೇ ತುಂಗಭದ್ರೆಯಲ್ಲಿ ಪುಣ್ಯಸ್ನಾನ ಮಾಡಿ ಭಕ್ತರು ಮುಂಜಾನೆಯ ಶಾಂತ ವಾತಾವರಣದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆಯಲು ಅನುಕೂಲವಾಗಲಿದೆ.
ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ…
ಬೆಂಗಳೂರು : ಭಾರಿ ಕುತೂಹಲ ಮೂಡಿಸಿದ್ದ ವಿಧಾನ ಪರಿಷತ್ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಕಾಂಗ್ರೆಸ್ನ ಐವರು ಮತ್ತು ಬಿಜೆಪಿಯ ಎರಡು…
ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ನ ಐದನೇ ಅಭ್ಯರ್ಥಿ ವಿನಯ್ ಕಾರ್ತಿಕ್ ಜಯ ಸಾಧಿಸಿದ್ದಾರೆ. ಅಡ್ಡಮತದ ಪರಿಣಾಮ ಮೈತ್ರಿ ಅಭ್ಯರ್ಥಿ…
ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ…
ಚಾಮರಾಜನಗರ : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಎಚ್.ಆರ್.ಸುರೇಶ್ ಅವರನ್ನು ಸೇವೆಯಿಂದ ಅಮಾನತ್ತು ಮಾಡಿ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಏಳು ದಿನ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…