ಮೈಸೂರು ನಗರ

ಜುಲೈ.19ರಂದು ಮೈಸೂರಿನಲ್ಲಿ ಸರ್ಕಾರದ ಸಾಧನೆಗಳ ಸಮಾವೇಶ

ಮೈಸೂರು: ಇದೇ ಜುಲೈ.19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನೆಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ಅತಿಥಿಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಮೈಸೂರು ಹಾಗೂ ಚಾಮರಾಜನಗರ ಭಾಗದ ಶಾಸಕರು, ಮಾಜಿ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು ಹಾಗೂ ಮುಖಂಡರೊಂದಿಗೆ ಸಚಿವರು ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿದರು.

ಬಳಿಕ ಮಾತನಾಡಿದ ಅವರು, ವೇದಿಕೆಯಲ್ಲಿ ಅತಿಥಿಗಳಿಗೆ ಶಿಷ್ಟಾಚಾರದಂತೆ ಆಸನ ವ್ಯವಸ್ಥೆ ಮಾಡುವುದು. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಆಸನದ ವ್ಯವಸ್ಥೆ, ಆಗಮನ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ಗೇಟ್‌ಗಳನ್ನು ನಿರ್ಮಾಣ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು

ಸಭೆಯಲ್ಲಿ ಶಾಸಕರಾದ ತನ್ವೀರ್‌ ಸೇಠ್‌, ಪುಟ್ಟರಂಗಶೆಟ್ಟಿ, ಎ.ಆರ್.‌ಕೃಷ್ಣಮೂರ್ತಿ, ಹರೀಶ್‌ ಗೌಡ, ಅನಿಲ್‌ ಚಿಕ್ಕಮಾದು, ಎಂಎಲ್‌ಸಿ ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ದೇಶಾದ್ಯಂತ ಗಣರಾಜ್ಯೋತ್ಸವ ಸಂಭ್ರಮ ; ಜನತೆಗೆ ಶುಭಾ ಕೋರಿದ ಪ್ರಧಾನಿ ಮೋದಿ

ಹೊಸದಿಲ್ಲಿ : ದೇಶಾದ್ಯಂತ ಗಣರಾಜ್ಯೋತ್ಸವ ದಿನದ ಸಂಭ್ರಮ ಮನೆ ಮಾಡಿದೆ. 77ನೇ ಗಣರಾಜ್ಯೋತ್ಸವವನ್ನು ಭಾರತಿಯರು ಸಂಭ್ರಮದಿಂದ ಆಚರಿಸುತ್ತಿದ್ದಾರೆ. ಎಲ್ಲಾ ಶಾಲೆಗಳು,…

4 mins ago

‘ಗಾಡಿಚೌಕ’ ಶಾಲೆಗೆ ಡಿಜಿಟಲ್ ಜೀವಕಳೆ

ಶತಮಾನದ ಶಾಲೆಗೆ ಹಳೆಯ ವಿದ್ಯಾರ್ಥಿಗಳು, ದಾನಿಗಳ ಆಸರೆ ಲೇಖಕ : ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು:…

19 mins ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | 26 ಜನವರಿ,  ಶನಿವಾರ

38 mins ago

ಶೇ.56ರಷ್ಟು ಮೀಸಲಾತಿ | 9ನೇ ಶೆಡ್ಯೂಲ್‌ಗೆ ಸೇರಿಸಲು ವಿ.ಎಸ್.ಉಗ್ರಪ್ಪ ಆಗ್ರಹ

ಬೆಂಗಳೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ಜಾತಿಗಳ ಮೀಸಲಾತಿ ಪ್ರಮಾಣವನ್ನು ಶೇ.56ಕ್ಕೆ ಹೆಚ್ಚಳ…

12 hours ago

Padma Award | ಧರ್ಮೇಂದ್ರಗೆ ಪದ್ಮವಿಭೂಷಣ, ಮಮ್ಮುಟಿಗೆ ಪದ್ಮಭೂಷಣ ಪ್ರಶಸ್ತಿ

ಹೊಸದಿಲ್ಲಿ : ಹಿರಿಯ ನಟ ಧರ್ಮೇಂದ್ರ, ದಂತಕಥೆ ಹಿನ್ನೆಲೆ ಗಾಯಕಿ ಅಲ್ಕಾ ಯಾಜ್ಞಿಕ್, ಮಲಯಾಳಂ ಸಿನಿಮಾ ದಿಗ್ಗಜ ಮಮ್ಮುಟ್ಟಿ, ಬಂಗಾಳಿ…

13 hours ago

ನ್ಯಾಯಾಂಗ ಸ್ವಾತಂತ್ರ್ಯಕ್ಕೆ ʼಆಂತರಿಕ ಅಪಾಯʼ : ಸುಪ್ರೀಂ ನ್ಯಾಯಾಧೀಶರಿಂದ ಕಾರ್ಯಾಂಗದ ಬಗ್ಗೆ ಅಸಮಾಧಾನ

ಹೊಸದಿಲ್ಲಿ : ನ್ಯಾಯಾಂಗ ಸ್ವಾತಂತ್ರ್ಯಕ್ಕೆ ಅಪಾಯ ಹೊರಗಿನಿಂದಲ್ಲ, ‘ಆಂತರಿಕ ವ್ಯವಸ್ಥೆ’ಯಿಂದಲೇ ಇದೆ ಎಂದು ಹೇಳಿರುವ ಸರ್ವೋಚ್ಚ ನ್ಯಾಯಾಲಯದ ನ್ಯಾಯಮೂರ್ತಿ ಉಜ್ಜಲ್…

13 hours ago