ಮೈಸೂರು ನಗರ

ಜುಲೈ.19ರಂದು ಮೈಸೂರಿನಲ್ಲಿ ಸರ್ಕಾರದ ಸಾಧನೆಗಳ ಸಮಾವೇಶ

ಮೈಸೂರು: ಇದೇ ಜುಲೈ.19ರಂದು ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಸರ್ಕಾರದ ಸಾಧನೆಗಳ ಸಮಾವೇಶ ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಕಾರ್ಯಕ್ರಮ ನಡೆಯಲಿದೆ.

ಈ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ಅತಿಥಿಗೃಹದಲ್ಲಿ ಪೂರ್ವಭಾವಿ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು, ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಮೈಸೂರು ಹಾಗೂ ಚಾಮರಾಜನಗರ ಭಾಗದ ಶಾಸಕರು, ಮಾಜಿ ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ಜನಪ್ರತಿನಿಧಿಗಳು, ಅಧಿಕಾರಿ ವರ್ಗದವರು ಹಾಗೂ ಮುಖಂಡರೊಂದಿಗೆ ಸಚಿವರು ಚರ್ಚಿಸಿ ಅಭಿಪ್ರಾಯ ಸಂಗ್ರಹಿಸಿದರು.

ಬಳಿಕ ಮಾತನಾಡಿದ ಅವರು, ವೇದಿಕೆಯಲ್ಲಿ ಅತಿಥಿಗಳಿಗೆ ಶಿಷ್ಟಾಚಾರದಂತೆ ಆಸನ ವ್ಯವಸ್ಥೆ ಮಾಡುವುದು. ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಗತ್ಯ ಆಸನದ ವ್ಯವಸ್ಥೆ, ಆಗಮನ ಹಾಗೂ ನಿರ್ಗಮನಕ್ಕೆ ಪ್ರತ್ಯೇಕ ಗೇಟ್‌ಗಳನ್ನು ನಿರ್ಮಾಣ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು

ಸಭೆಯಲ್ಲಿ ಶಾಸಕರಾದ ತನ್ವೀರ್‌ ಸೇಠ್‌, ಪುಟ್ಟರಂಗಶೆಟ್ಟಿ, ಎ.ಆರ್.‌ಕೃಷ್ಣಮೂರ್ತಿ, ಹರೀಶ್‌ ಗೌಡ, ಅನಿಲ್‌ ಚಿಕ್ಕಮಾದು, ಎಂಎಲ್‌ಸಿ ಡಾ.ಡಿ.ತಿಮ್ಮಯ್ಯ, ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಮಂಡ್ಯ ವಿವಿ ಅಭಿವೃದ್ಧಿಗೆ ಅನುಮಾನವೇ ಅಡ್ಡಿ

ಬಿ.ಟಿ.ಮೋಹನ್ ಕುಮಾರ್ ಮಂಡ್ಯ: ಮಂಡ್ಯ ವಿವಿ ಆರಂಭವಾದಾಗಿನಿಂದ ಒಂದಲ್ಲಾ ಒಂದು ಸಮಸ್ಯೆ ಎದುರಾಗುತ್ತಿದ್ದು, ವಿವಿಗೆ ೧೨ಬಿ ಮಾನ್ಯತೆ ಸಿಕ್ಕಿಲ್ಲದಿರುವುದು ಹಲವು…

12 mins ago

ಕೊಡಗು ವಿಶ್ವವಿದ್ಯಾಲಯ ಬಗೆಹರಿಯದ ಕೊರಗು!

ನವೀನ್ ಡಿಸೋಜ ಮಂಗಳೂರು ವಿವಿ ಅಧೀನದಲ್ಲಿದ್ದ ಕೊಡಗು ಈಗ ಪ್ರತ್ಯೇಕ ವಿವಿಯಾಗಿ ರೂಪುಗೊಂಡಿದೆ. ಆದರೆ, ಆಡಳಿತಾತ್ಮಕ ಹುದ್ದೆ ಭರ್ತಿಯಾಗದಿರುವುದು ಮತ್ತು…

15 mins ago

ಚಾ.ನಗರ ವಿವಿಗೆ ಅತಿಥಿ ಅಧ್ಯಾಪಕರೇ ಆಧಾರ!

ಚಾಮರಾಜನಗರ ವಿವಿ ಪ್ರಾರಂಭವಾಗಿ ೩ ವರ್ಷಗಳನ್ನು ಪೂರೈಸಿದೆ. ಈ ಬಾರಿ ಪ್ರಪ್ರಥಮ ಘಟಿಕೋತ್ಸವದ ಸಂಭ್ರಮದಲ್ಲಿದೆ. ಆದರೆ ಇನ್ನೂ ಅತಿಥಿ ಅಧ್ಯಾಪಕರು,…

20 mins ago

ಮೈಸೂರು ವಿವಿಗೆ ಹಣಕಾಸು ಮುಗ್ಗಟ್ಟು

ಗಿರೀಶ್ ಹುಣಸೂರು ರಾಜ್ಯದ ಮೊತ್ತ ಮೊದಲ ವಿವಿ ಎಂಬ ಹೆಗ್ಗಳಿಕೆಯ ಮೈಸೂರು ವಿವಿಗೆ ೧೧೦ ವರ್ಷಗಳಷ್ಟು ಹಿರಿತನವಿದೆ. ಆದರೆ, ಕೆಲವು…

27 mins ago

ಓದುಗರ ಪತ್ರ: ಒಣಗಿದ ಮರ ತೆರವುಗೊಳಿಸಿ

ಮೈಸೂರು ವಿವಿ ಕ್ರಾಫರ್ಡ್ ಭವನದ ಎದುರಿನ ರಸ್ತೆ ಬದಿಯಲ್ಲಿರುವ ಮರ ಒಣಗಿದೆ. ಈ ಮಾರ್ಗದಲ್ಲಿ ಪ್ರತಿನಿತ್ಯ ನೂರಾರು ವಾಹನಗಳು ಹಾಗೂ…

3 hours ago

ಓದುಗರ ಪತ್ರ: ಎಸ್.ಜಾನಕಿ ಅಜರಾಮರ

ದಕ್ಷಿಣ ಭಾರತದ ಕೋಗಿಲೆ ಎಂದೇ ಜನಪ್ರಿಯರಾಗಿದ್ದ, ಎಸ್. ಜಾನಕಿಯವರು ತಮ್ಮ ಅಂತಿಮ ಇಚ್ಛೆಯಂತೆ ಕನ್ನಡದ ನೆಲದಲ್ಲಿ ಅದರಲ್ಲೂ ಸಾಂಸ್ಕೃತಿಕ ನಗರಿ…

3 hours ago