ಮೈಸೂರು : ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ಶಿಕ್ಷಕರ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ ನೇಮಕಾತಿ ನಡೆಸುವಂತೆ ಆದೇಶ ಹೊರಡಿಸಿರುವುದನ್ನು ಮೈಸೂರು ವಿ.ವಿ ಸಂಶೋಧಕರ ಸಂಘ ಸ್ವಾಗತಿಸಿದೆ.
ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ ನೇಮಕಾತಿ ನಡೆಸಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಪುರುಷೋತ್ತಮ ಬಿಳಿಮಲೆ ಅವರಿಗೆ ಈ ಹಿಂದೆ ಸಲ್ಲಿಸಿದ್ದ ಮನವಿಗೆ ಸ್ಪಂದಿಸಿರುವ ಅವರು, ಈ ಸಂಬಂಧ ಸರ್ಕಾರದೊಂದಿಗೆ ಮಾತನಾಡಿ ಕೈಗೊಂಡ ಕ್ರಮಗಳ ಕುರಿತು ಸಂಶೋಧಕರ ಸಂಘದ ಅಧ್ಯಕ್ಷ ವರಹಳ್ಳಿ ಆನಂದ್ ಅವರ ವಿಳಾಸಕ್ಕೆ ಪ್ರತಿಕ್ರಿಯೆ ಪತ್ರ ಕಳುಹಿಸಿದ್ದಾರೆ.
ಇತ್ತೀಚೆಗೆ ಶಾಲಾ ಶಿಕ್ಷಣ ಇಲಾಖೆಯ ಜಿಪಿಎಸ್ಟಿಆರ್ ಹಾಗೂ ಎಚ್ಎಸ್ಟಿಆರ್ ನೇಮಕಾತಿಯಲ್ಲಿ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳಿಗೆ ಪ್ರತ್ಯೇಕವಾಗಿ ನೇಮಕಾತಿ ಪ್ರಕ್ರಿಯೆ ನಡೆಸಲು ಅವಕಾಶ ಕಲ್ಪಿಸಿರುವ ಹಿಂದೆ ಪ್ರೊ.ಪುರುಷೋತ್ತಮ ಬಿಳಿಮಲೆ ಅವರ ಒತ್ತಾಸೆ ಹಾಗೂ ನಿರಂತರ ಪ್ರಯತ್ನ ಮಹತ್ವದ ಪಾತ್ರ ವಹಿಸಿದೆ ಎಂದು ಸಂಘದ ಅಧ್ಯಕ್ಷ ವರಹಳ್ಳಿ ಆನಂದ ತಿಳಿಸಿದ್ದಾರೆ.
ಕಳೆದ ನಾಲ್ಕು ಶಿಕ್ಷಕರ ನೇಮಕಾತಿಗಳಲ್ಲಿಯೂ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ ಕರೆಯದೆ ಕಡೆಗಣಿಸಲಾಗಿತ್ತು. ಇದೀಗ ಕನ್ನಡ ಭಾಷಾ ಶಿಕ್ಷಕರ ಹುದ್ದೆಗಳನ್ನು ಪ್ರತ್ಯೇಕವಾಗಿ ನೇಮಕಾತಿ ಪ್ರಕ್ರಿಯೆಗೆ ಒಳಪಡಿಸಿರುವುದು ಕನ್ನಡ ಭಾಷೆ ಹಾಗೂ ಕನ್ನಡನಾಡಿಗೆ ದೊರೆತ ಗೌರವವಾಗಿದೆ ಎಂದು ಸಂಘ ಅಭಿಪ್ರಾಯಪಟ್ಟಿದೆ.
ಕನ್ನಡ ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಒಟ್ಟು ೧೫ ಸಾವಿರ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿರುವುದು ಎಲ್ಲರಿಗೂ ತಿಳಿದ ಸಂಗತಿಯಾಗಿದೆ. ನೇಮಕಾತಿ ಪರೀಕ್ಷೆಗಳು ಯಾವುದೇ ರೀತಿಯ ಭ್ರಷ್ಟಾಚಾರಕ್ಕೆ ಅವಕಾಶವಿಲ್ಲದಂತೆ ಸಂಪೂರ್ಣ ಪಾರದರ್ಶಕವಾಗಿ ನಡೆಯಬೇಕು. ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ದೊರೆಯುವ ರೀತಿಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಯಬೇಕು ಎಂಬುದು ಸಂಘದ ಆಗ್ರಹವಾಗಿದೆ.
ಬೆಂಗಳೂರು: ಗುಟ್ಕಾ ನಿಷೇಧ ಆದೇಶವನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ವಾಪಸ್ ಪಡೆಯುವ ಸಾಧ್ಯತೆಯಿದೆ. ಆಡಳಿತರೂಢ ಕಾಂಗ್ರೆಸ್ ಶಾಸಕರಿಂದಲೇ ಸರ್ಕಾರದ ನಿರ್ಧಾರಕ್ಕೆ…
ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲ ತಾಲ್ಲೂಕಿನ ಶಿವಗಂಗೆ ಬೆಟ್ಟದಲಲಿ ಟ್ರೆಕ್ಕಿಂಗ್ಗೆ ತೆರಳಿ ನಾಪತ್ತೆಯಾಗಿದ್ದ ಟೆಕ್ಕಿ ಟದ್ವೈತ್ಗಾಗಿ ನಡೆಸುತ್ತಿದ್ದ ಶೋಧ ಕಾರ್ಯಾಚರಣೆಗೆ…
ಬೆಂಗಳೂರು: ವಿಧಾನಸಭೆಯ ನೂತನ ಸ್ಪೀಕರ್ ಆಗಿ ಜಿ.ಎಸ್.ಪಾಟೀಲ್ ಸರ್ವಾನುಮತದಿಂದ ಆಯ್ಕೆಯಾದರು. ಸಂಪ್ರದಾಯದಂತೆ ವಿಪಕ್ಷ ನಾಯಕ ಆರ್.ಅಶೋಕ್ ಹಾಗೂ ಸಿಎಂ ಡಿ.ಕೆ.ಶಿವಕುಮಾರ್…
ಡೆಹ್ರಾಡೂನ್: ಉತ್ತರಾಖಂಡದ ಚಮೋಲಿ ಜಿಲ್ಲೆಯಲ್ಲಿ ನಿರ್ಮಾಣ ಹಂತದಲ್ಲಿದ್ದ ಜಲವಿದ್ಯುತ್ ಯೋಜನೆಗೆ ಸಂಬಂಧಿಸಿದ ಸುರಂಗದೊಳಗೆ ಏಕಾಏಕಿ ನೀರು ಮತ್ತು ಮಣ್ಣಿನ ಅವಶೇಷಗಳು…
ಸ್ವಾಗತಾರ್ಹ ಸಂಕಲ್ಪ! ಮತ್ತೆ ಗುಡಿಗಿದ್ದಾರೆ ಮುಖ್ಯಮಂತ್ರಿಗಳು ‘ಭ್ರಷ್ಟಾಚಾರಿಗಳ ಬಡಿದು ಹಾಕುವೆ’ಎಂದು ಅಭಿವೃದ್ಧಿಗೆ ಮಾರಕ ಪ್ರಜೆಗಳ ಶೋಷಕ ಈ ಭ್ರಷ್ಟಾಚಾರ ಎಂಬ…
ಆಗಸ್ಟ್ ಹದಿನೈದು ಬಂತೆಂದರೆ ಸಾಕು, ನಮ್ಮಲ್ಲಿ ದೇಶಪ್ರೇಮದ ರೋಮಾಂಚನ. ಶಾಲೆ-ಕಚೇರಿಗಳಲ್ಲಿ ರಾಷ್ಟ್ರಧ್ವಜರೋಹಣ, ಸಿಹಿತಿಂಡಿ ಹಂಚಿಕೆ, ದೇಶಭಕ್ತಿ ಗೀತೆಗಳು ಮತ್ತು ಭಾಷಣಗಳು…