ಮೈಸೂರು ನಗರ

ಸರ್ಕಾರಿ ಉದ್ಯೋಗಿ ಮಹಿಳೆಗೆ ಲಕ್ಷಾಂತರ ರೂ. ವಂಚನೆ : ದೂರು ದಾಖಲು

ಮೈಸೂರು : ಸರ್ಕಾರಿ ಉದ್ಯೋಗಿ ಮಹಿಳೆಯೊಬ್ಬರನ್ನು ಪರಿಚಯ ಮಾಡಿಕೊಂಡ ವಂಚಕನೋರ್ವ, ಆಕೆಯ ಬಳಿ ಇದ್ದ 500 ಗ್ರಾಂ ಚಿನ್ನದ ಆಭರಣಗಳು ಹಾಗೂ 10.50 ಲಕ್ಷ ರೂ. ಹಣವನ್ನು ಲಪಟಾಯಿಸಿರುವ ಘಟನೆ ನಡೆದಿದೆ.

ಲೋಕೋಪಯೋಗಿ ಇಲಾಖೆಯಲ್ಲಿ ಪ್ರಥಮ ದರ್ಜೆ ಸಹಾಯಕಿಯಾಗಿ ಕೆಲಸ ನಿರ್ವಹಿಸುತ್ತಿರುವ ಹಾಗೂ ವಿಜಯನಗರದಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮಹಿಳೆಗೆ ಫೇಸ್‌ಬುಕ್ ಮೂಲಕ ತಮಿಳುನಾಡಿನ ತಿರುವಂತಪುರಂ ಮೂಲದ ವೈದ್ಯ ಡಾ.ಎ.ಎಂ.ಶಿವಕುಮಾರ್ ಪರಿಚಯವಾಗಿದ್ದಾನೆ.

ನಂತರ ಆಕೆಗೆ ಆತ್ಮೀಯನಂತೆ ನಟಿಸಿದ ವಂಚಕ ಮಹಿಳೆಯ ಮನೆಗೆ ಆಗಾಗ್ಗೆ ಬರುತ್ತಿದ್ದ. ನಂತರ ಆಕೆಯೊಂದಿಗೆ ಮಾತನಾಡಿದ ಆತ, ಒಂಟಿಯಾಗಿರುವ ನೀವು ಚಿನ್ನಾಭರಣವನ್ನು ಜೊತೆಯಲ್ಲಿ ಇಟ್ಟುಕೊಳ್ಳಬೇಡಿ. ಬ್ಯಾಂಕ್‌ನ ಲಾಕರ್‌ನಲ್ಲಿ ಇಡಿ ಎಂದು ಹೇಳಿ ಆತನೇ ಬ್ಯಾಂಕ್‌ಗೆ ಕರೆದೊಯ್ದು ಲಾಕರ್‌ನಲ್ಲಿ ಚಿನ್ನಾಭರಣಗಳನ್ನು ಇರಿಸುವಂತೆ ನಾಟಕವಾಡಿ ನಕಲಿ ಕೀಲಿಯನ್ನು ನೀಡಿದ್ದಾನೆ.

ನಂತರ ನಿಮ್ಮ ಬಳಿ ಇರುವ ಹಣವನ್ನು ವ್ಯಾಪಾರದಲ್ಲಿ ಹೂಡಿಕೆ ಮಾಡಿದಲ್ಲಿ ಹೆಚ್ಚಿನ ಲಾಭಗಳಿಸಬಹುದು ಎಂದು ಆಸೆ ಹುಟ್ಟಿಸಿದ ಆತ, ಅವರ ಬಳಿ ಇದ್ದ 10.50 ಲಕ್ಷ ರೂ. ಹಣವನ್ನು ಪಡೆದಿದ್ದಾನೆ. ನಂತರ ಆತನ ಕೈಲಿ ವಜ್ರದ ಉಂಗುರ ಇದ್ದುದನ್ನು ಗಮನಿಸಿದ ಆಕೆ ಈ ಬಗ್ಗೆ ಪ್ರಶ್ನಿಸಿದ್ದಾರೆ.

ನಾನು ಲಾಕರ್‌ನಲ್ಲಿ ಇಟ್ಟಿದ್ದ ಉಂಗುರ ನಿನ್ನ ಕೈಲಿ ಹೇಗೆ ಬಂತು ಎಂದು ದಬಾಯಿಸಿ, ನನ್ನ ಚಿನ್ನಾಭರಣ ಹಾಗೂ ಹಣವನ್ನು ವಾಪಸ್ ನಿಡುವಂತೆ ಒತ್ತಾಯಿಸಿದ್ದಾರೆ. ಈ ಸಂಬಂಧ ಆತನೇ ಆಕೆಯ ಮೇಲೆ ಹರಿಹಾಯ್ದಿದ್ದಾನೆ.
ಇದರಿಂದಾಗಿ ತಾನು ವಂಚನೆಗೆ ಒಳಗಾಗಿರುವುದು ಆಕೆಗೆ ಗೊತ್ತಾಗಿದೆ. ಕೂಡಲೇ ಅವರು ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮಹಾರಾಷ್ಟ್ರದಲ್ಲಿ ಖಾಸಗಿ ವಿಮಾನ ಪತನ: ಡಿಸಿಎಂ ಅಜಿತ್‌ ಪವಾರ್‌ ಸೇರಿ 5 ಮಂದಿ ದುರ್ಮರಣ

ಬಾರಾಮತಿ: ಮಹಾರಾಷ್ಟ್ರದ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಡಿಸಿಎಂ ಅಜಿತ್ ಪವಾರ್ ಸಾವನ್ನಪ್ಪಿದ್ದಾರೆ. ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ…

25 mins ago

ಓದುಗರ ಪತ್ರ: ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ

ಬೆಲೆಯಲ್ಲಿ ನಾವು ತಗ್ಗೋದೇ ಇಲ್ಲ ಅಂತ ಚಿನ್ನ ಬೆಳ್ಳಿ! ಬೆಲೆ ಎಷ್ಟಾದರೂ ನಾವು ಬಗ್ಗೋದೇ ಇಲ್ಲ ಅಂತ ಕೆಲ ಗ್ರಾಹಕರು…

4 hours ago

ಓದುಗರ ಪತ್ರ: ಡಿಕೆಶಿಯವರ ನಿಲುವು ಸ್ವಾಗತಾರ್ಹ

ವಿದೇಶಿ ನೆಲದಲ್ಲಿ ದೇಶವನ್ನು ಟೀಕಿಸುವುದಿಲ್ಲ ಎಂಬ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರ ನಿಲುವು ಸ್ವಾಗತಾರ್ಹವಾಗಿದೆ. ಗಣರಾಜ್ಯೋತ್ಸವದ ಸಂದರ್ಭದಲ್ಲೇ ಅವರು…

4 hours ago

ಓದುಗರ ಪತ್ರ: ಬಾಂಗ್ಲಾದಲ್ಲಿ ಹಿಂದೂಗಳ ಸರಣಿ ಹತ್ಯೆ ಖಂಡನೀಯ

ಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಿರಂತರವಾಗಿ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಬಾಂಗ್ಲಾ ದೇಶಕ್ಕೆ ೧೯೭೨ ರಲ್ಲಿ ಪಾಕಿಸ್ತಾನದಿಂದ ಬೇರ್ಪಡಿಸಿ…

4 hours ago

ಓದುಗರ ಪತ್ರ: ನಂಜನಗೂಡಿನಲ್ಲಿ ಆಟೋಗಳಿಗೆ ಮೀಟರ್ ದರ ಜಾರಿಯಾಗಲಿ

ದಕ್ಷಿಣ ಕಾಶಿ ಎಂದೇ ಹೆಸರುವಾಸಿಯಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯಕ್ಕೆ ಪ್ರತಿನಿತ್ಯ ಸಾವಿರಾರು ಭಕ್ತಾದಿಗಳು ಆಗಮಿಸುತ್ತಾರೆ. ಆದರೆ ಕೆಲವು ಆಟೋ ಚಾಲಕರು…

4 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ‘ನಿಯೋನೇಟಲ್ ಕೇರ್’ ಸೇವೆಯ ಮಾತೆ ಡಾ.ಅರ್ಮಿಡಾ ಫೆರ್ನಾಂಡೀಸ್

ಏಷ್ಯಾದ ಪ್ರಪ್ರಥಮ ಎದೆಹಾಲಿನ ಬ್ಯಾಂಕನ್ನು ಆರಂಭಿಸಿದ ಕೀರ್ತಿ ಕರ್ನಾಟಕದಲ್ಲಿ ಹುಟ್ಟಿದ, ಗೋವಾ ಮೂಲದ, ಈಗ ಮುಂಬೈಯಲ್ಲಿ ತನ್ನ ಸಾಮಾಜಿಕ ಕಾರ್ಯಗಳನ್ನು…

4 hours ago